ಅಕ್ರಮ-ಸಕ್ರಮ ಅರ್ಜಿ ಸಲ್ಲಿಕೆ ತಾಂತ್ರಿಕ ದೋಷ ತುರ್ತು ಕ್ರಮಕ್ಕೆ ಸೂಚನೆ
Team Udayavani, Mar 13, 2019, 1:00 AM IST
ಉಡುಪಿ: ಅಕ್ರಮ- ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸುವಾಗ ಉಂಟಾಗುತ್ತಿರುವ ಸರ್ವರ್ ಸಮಸ್ಯೆ ಮತ್ತು ತಾಂತ್ರಿಕ ದೋಷಗಳ ಕುರಿತು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಸಮಾಲೋಚನೆ ನಡೆಸಿದರು.
ಸರ್ವರ್ ತೊಂದರೆಯಿಂದ ಅಟಲ್ಜೀ ಜನಸ್ನೇಹಿ ಕೇಂದ್ರ, ನಾಡ ಕಚೇರಿಗಳಲ್ಲಿ ಆನ್ಲೈನ್ಗಾಗಿ ನೂರಾರು ಮಂದಿ ಕಾಯುವ ಸ್ಥಿತಿ ಒದಗಿ ಬಂದಿದೆ. ಇದಕ್ಕೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಶ್ರೀನಿವಾಸ ಪೂಜಾರಿ ಸೂಚಿಸಿದರು.
ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆಯ ಒತ್ತಡದಿಂದ ಸರ್ವರ್ ಓವರ್ ಲೋಡ್ ಆಗಿದೆ. ಸ್ಥಳೀಯವಾಗಿ ಇಂಟರ್ನೆಟ್ ಸಮಸ್ಯೆಯೂ ಇದೆ. ಸರ್ವೆ ನಂಬರ್ ಜೋಡಣೆ ಯಲ್ಲಿ ವಿಳಂಬವಾಗುತ್ತಿದ್ದು, ಇದರಿಂದಲೂ ಸಮಸ್ಯೆ ಉಂಟಾಗಿದೆ. ತಾಂತ್ರಿಕ ಸಮಸ್ಯೆಗಳನ್ನು ಒಂದೆರಡು ದಿನದಲ್ಲಿ ಸರಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಹೆಚ್ಚುವರಿ ಕೌಂಟರ್, ಕಂಪ್ಯೂಟರ್ ಮತ್ತು 4 ಸಿಬಂದಿ ಅಗತ್ಯದ ಬಗ್ಗೆ ಶ್ರೀನಿವಾಸ ಪೂಜಾರಿ ಗಮನ ಸೆಳೆದಾಗ, ಅಟಲ್ಜೀ ಕೇಂದ್ರಗಳಿಗೆ ಕಂಪ್ಯೂಟರ್, ಸಿಬಂದಿ ಒದಗಿಸಲಾಗುವುದು. ಈ ಕುರಿತು ಡಿಸಿಗಳಿಂದ ವರದಿ ಪಡೆದು ಅಗತ್ಯ ಅನುಮತಿ ನೀಡಲಾಗುವುದು ಎಂದು ಅಧಿಕಾರಿ ಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್