ಕೈ-ಕಮಲ ವಿರುದ್ದ “ಇತರರು’ ಒಗ್ಗಟ್ಟು


Team Udayavani, Mar 13, 2019, 1:55 AM IST

8.jpg

ಬೀದರ್‌: ಲೋಕಸಭೆ ಚುನಾವಣೆಗೆ ಯಾವ ಪಕ್ಷದಿಂದ ಯಾರು ಸ್ಪರ್ಧೆ ನಡೆಸಲಿದ್ದಾರೆ ಎಂಬ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಕುತೂಹಲ ವೆಂದರೆ ಬಿಜೆಪಿ-ಕಾಂಗ್ರೆಸ್‌ ಸೋಲಿಸಲು ಇತರೆ ಪಕ್ಷಗಳು ಒಗ್ಗಟ್ಟಾಗಿವೆ!
ಬೀದರ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಚಿಂತನೆ ನಡೆಸಿವೆ. ಇದು ಅಲ್ಪಸಂಖ್ಯಾತರ ಸಿಟ್ಟಿಗೆ ಕಾರಣವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಮತದಾರರ ಸಂಖ್ಯೆ ಹೆಚ್ಚಿದೆ. ಆದರೆ, ಯಾವ ರಾಜಕೀಯ ಪಕ್ಷಗಳೂ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡುತ್ತಿಲ್ಲ ಎಂದು ಮುಖಂಡರು ಕಂಗಾಲಾಗಿದ್ದಾರೆ.

ಟಿಕೆಟ್‌ಗಾಗಿ ನಡೆಸಿದ ಯತ್ನವೂ ಫ‌ಲ ನೀಡಿಲ್ಲ. ಹೀಗಾಗಿ ಎಐಎಂಐಎಂ ರಾಷ್ಟ್ರೀಯ ಅಧ್ಯಕ್ಷ ಅಸಾದುದ್ದಿನ್‌ ಓವೈಸಿ
ಹಾಗೂ ಮಹಾರಾಷ್ಟ್ರದ ಪ್ರಕಾಶ ಅಂಬೇಡ್ಕರ್‌ ನೇತೃತ್ವದ ಭಾರಿಪಾ ಬಹುಜನ ಮಹಾಸಂಘ (ಬಿಬಿಎಂ) ಪಕ್ಷಗಳು ಮೈತ್ರಿಯಾಗಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಅವಕಾಶ ನೀಡಲು ಸಜ್ಜಾಗಿದ್ದಾರೆ. ಅದೇ ರೀತಿ ಹಿಂದುಳಿದ ವರ್ಗಗಳಿಗೆ ಮಾನ್ಯತೆ ನೀಡಬೇಕೆಂಬ ಉದ್ದೇಶದಿಂದ ಬಿಎಸ್‌ಪಿ ಅಭ್ಯರ್ಥಿ ಕೂಡ ಈ ಬಾರಿ ಬೀದರ್‌ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
2014ರ ಚುನಾವಣೆಯಲ್ಲಿ ಶಂಕರ ಭಯ್ಯ ಬಿಎಸ್‌ಪಿಯಿಂದ ಸ್ಪರ್ಧೆ ನಡೆಸಿ 15,079 (ಶೇ.1.58) ಮತ ಪಡೆದಿದ್ದರು. 2009ರ ಚುನಾವಣೆಯಲ್ಲಿ ಜಗನ್ನಾಥ ಜಮಾದಾರ ಸ್ಪರ್ಧಿಸಿ 22,568 (ಶೇ.2.90) ಮತ ಪಡೆದಿದ್ದರು. ಈ ಬಾರಿಯೂ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಮಾ.15ರಂದು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ
ಎಂದು ಪಕ್ಷದ ಮುಖಂಡ ಅಂಕುಶ ಗೋಖಲೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಿದರೆ ಗೆಲ್ಲುವ ಕ್ಷೇತ್ರವೆಂದರೆ ಅದು ಬೀದರ್‌. ಇಲ್ಲಿನ ಅನೇಕ ಮುಸ್ಲಿಂ ನಾಯಕರನ್ನು ಇತರೆ ಪಕ್ಷದವರು ಕಡೆಗಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಸಾದುದೀನ್‌ ಓವೈಸಿ ಮತ್ತು ಮಹಾರಾಷ್ಟ್ರದ ಪ್ರಕಾಶ ಅಂಬೇಡ್ಕರ್‌ ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆ ನಡೆಸಲಾಗುತ್ತಿದೆ.
● ಮನಸೂರ್‌ ಖಾದ್ರಿ, ಎಐಎಂಐಎಂ ಜಿಲ್ಲಾಧ್ಯಕ್ಷ

ದೇಶದಲ್ಲಿ ನಮ್ಮದು 3ನೇ ದೊಡ್ಡ ರಾಜಕೀಯ ರಾಷ್ಟ್ರೀಯ ಪಕ್ಷ. ಚುನಾವಣೆಯಿಂದ ಚುನಾವಣೆಗೆ ನಮ್ಮ ಪಕ್ಷದ
ಕಾರ್ಯಕರ್ತರ ಪಡೆ ದೊಡ್ಡದಾಗುತ್ತಿದ್ದು, ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತಷ್ಟು ಸಂಘಟನೆಗೆ
ಗಮನಹರಿಸಲಾಗುತ್ತಿದೆ. ಮಾ.15ರಂದು ಬೀದರ್‌ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬುದು ಗೊತ್ತಾಗಲಿದೆ.
● ಅಂಕುಶ ಗೋಖಲೆ, ಬಿಎಸ್‌ಪಿ ಮುಖಂಡ

ದುರ್ಯೋಧನ ಹೂಗಾರ 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.