ವಾಹನ ಡೇಟಾ ಮಾರಾಟ
Team Udayavani, Mar 14, 2019, 12:40 AM IST
ಹೊಸದಿಲ್ಲಿ: ಕೇಂದ್ರ ಸರಕಾರವು ವಾಹನಗಳ ನೋಂದಣಿ ವಿವರಗಳನ್ನು ಖಾಸಗಿ ಸಂಸ್ಥೆಗಳಿಗೆ ಮಾರಲು ಅನುಮತಿ ನೀಡಿರುವುದು, ಜನರ ಗೌಪ್ಯ ಮಾಹಿತಿಯ ಸೋರಿಕೆಯಾಗುವ ಆತಂಕ ಎದುರಾಗಿದೆ. ಸಾರಿಗೆ ಮತ್ತು ವಾಹನ ಉದ್ಯಮಕ್ಕೆ ಈ ಡೇಟಾ ತುಂಬಾ ಅನುಕೂಲ ಕಲ್ಪಿಸಲಿದೆ ಎಂಬ ಕಾರಣ ನೀಡಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್ 8ರಂದು ಸರಕಾರ ಅಂತಿಮಗೊಳಿಸಿರುವ ಸಗಟು ಡೇಟಾ ಹಂಚಿಕೆ ನೀತಿಯಲ್ಲಿ ಈ ಅಂಶಗಳಿವೆ.
ಸದ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ವಾಹನಗಳ ನೋಂದಣಿ ಮತ್ತು ಡ್ರೈವಿಂಗ್ ಲೈಸೆನ್ಸ್ಗಳ ದತ್ತಾಂಶ ವನ್ನು ಹೊಂದಿರುತ್ತದೆ.ಸದ್ಯ ಈ ಡೇಟಾ ವನ್ನು ಕಾನೂನು ಜಾರಿ ಸಂಸ್ಥೆಗಳಿಗೆ ನೀಡಲಾಗುತ್ತದೆ. ಅಂದರೆ ಪೊಲೀಸರು, ಸಿಬಿಐ ಹಾಗೂ ರಾಜ್ಯಗಳ ತನಿಖಾ ಸಂಸ್ಥೆಗಳು ಆರೋಪಿಗಳ ವಿವರಗಳು ಹಾಗೂ ಇತರ ಮಾಹಿತಿಯನ್ನು ಪಡೆಯಲು ಈ ದತ್ತಾಂಶವನ್ನು ಬಳಸಿ ಕೊಳ್ಳುತ್ತಿವೆ. ಈಗ ಈ ಡೇಟಾವನ್ನು ಉದ್ಯಮಗಳು, ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಇತ್ಯಾದಿಗಳಿಗೂ ನೀಡಲಾಗುತ್ತದೆ. ಇದಕ್ಕಾಗಿ ದರ ನಿಗದಿಸಲಾಗಿದೆ. ಈ ಬಗ್ಗೆ “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಹೊಸ ನೀತಿಯ ಪ್ರಕಾರ, ಡೇಟಾವನ್ನು ಸರಕಾರದಿಂದ ಕೇಳುವ ಸಂಸ್ಥೆಗಳು ಭಾರತೀಯರ ಮಾಲಕತ್ವ ಹೊಂದಿರ ಬೇಕು ಮತ್ತು ಕನಿಷ್ಠ ಶೇ. 50ರಷ್ಟು ಪಾಲುದಾರಿಕೆಯನ್ನು ಹೊಂದಿರಬೇಕು. ನಿಯಂತ್ರಿತವಾಗಿ ದತ್ತಾಂಶ ವನ್ನು ಹಂಚಿ ಕೊಳ್ಳುವುದರಿಂದ ಸಾರಿಗೆ ಮತ್ತು ವಾಹನ ಉದ್ಯಮಕ್ಕೆ ಅನುಕೂಲವಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ಸೇವೆ ಯಲ್ಲಿ ಸುಧಾರಣೆ, ನಾಗರಿಕರಿಗೆ ಹಾಗೂ ಸರಕಾರಕ್ಕೆ ಹೆಚ್ಚಿನ ಲಾಭವನ್ನು ತಂದು ಕೊಡಲಿದೆ.
ಒಟ್ಟು 28 ವಿಧದ ಮಾಹಿತಿಯನ್ನು ಹಂಚಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ ಇದರಲ್ಲಿ ವ್ಯಕ್ತಿಯ ಹೆಸರು ಇರುವುದಿಲ್ಲ. ಆದರೆ ಈಗಾಗಲೇ ಸಾರಿಗೆ ಇಲಾಖೆಯ ವಾಹನ್ ಅಪ್ಲಿಕೇಶನ್ನಲ್ಲಿ ವ್ಯಕ್ತಿಯ ಹೆಸರೂ ಸಹಿತ ಎಲ್ಲ ಮಾಹಿತಿಯೂ ಇರುವುದರಿಂದ, ಲಭ್ಯ ಮಾಹಿ ತಿಯ ಮೂಲಕ ವ್ಯಕ್ತಿಯ ಹೆಸರನ್ನು ಕಂಡುಕೊಳ್ಳುವುದು ಸುಲಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ