ಕಲ್ಲು ಗಣಿಗಾರಿಕೆಗೆ ಪರವಾನಗಿ ಬೇಡ


Team Udayavani, Mar 14, 2019, 11:34 AM IST

shiv-1.jpg

ಸಾಗರ: ಹೊಸನಗರ ತಾಲೂಕಿನ ಹುಂಚ ಗ್ರಾಮದ ಸ.ನಂ. 69ರಲ್ಲಿ ಖಾಸಗಿಯವರಿಗೆ ಕಲ್ಲು ಗಣಿಗಾರಿಕೆಗೆ ಪರವಾನಗಿ ನೀಡಿರುವುದನ್ನು ತಕ್ಷಣ ರದ್ದುಪಡಿಸುವಂತೆ ಒತ್ತಾಯಿಸಿ ಬುಧವಾರ ಹುಂಚ ಗ್ರಾಮಭೂಮಿ ಸಂರಕ್ಷಣಾ ಸಮಿತಿ ಮತ್ತು ವೃಕ್ಷಲಕ್ಷ ಆಂದೋಲನ ಕರ್ನಾಟಕ ವತಿಯಿಂದ ಉಪ ವಿಭಾಗಾಧಿಕಾರಿಗಳ ಕಚೇರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಶ್ಚಿಮ ಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಹುಂಚ ಕ್ಷೇತ್ರದ ಬಳಿ ಖಾಸಗಿಯವರಿಗೆ ಕಲ್ಲು ಗಣಗಾರಿಕೆಗೆ ರಾಜ್ಯ ಸರ್ಕಾರ ಪರವಾನಗಿ ನೀಡುವ ಅವೈಜ್ಞಾನಿಕ ನಿರ್ಧಾರ ಕೈಗೊಂಡಿದೆ. ಇದರಿಂದ ಕುಮದ್ವತಿ ಸೇರಿದಂತೆ ಪಂಚನದಿಗಳ ಜಲಮೂಲಕ್ಕೆ ಕುತ್ತುಂಟಾಗುವ ಜೊತೆಗೆ ವ್ಯಾಪಕ ಪರಿಸರ ನಾಶವಾಗುತ್ತದೆ. ಗಣಿಗಾರಿಕೆ ನಡೆಸಲು ಅನುಮತಿ ಪಡೆದಿರುವ ಪ್ರದೇಶದ ಸುತ್ತಮುತ್ತ ಜಲಸಮೃದ್ಧಿಯುಳ್ಳ 6 ಕೆರೆಗಳು ಇವೆ ಎಂದು ತಿಳಿಸಿದರು.

ಶರಾವತಿ ಕಣಿವೆ ಅಧ್ಯಯನ ವರದಿಯಲ್ಲಿ ನದಿಮೂಲಗಳ ಬಳಿ ಗಣಿಗಾರಿಕೆಗೆ ಅವಕಾಶ ಬೇಡ ಎಂಬ ಉಲ್ಲೇಖವಿದೆ. ಹೊಸನಗರ ತಾಲೂಕಿನಲ್ಲಿ ಭೂಕಂಪ ಪ್ರಕರಣಗಳು ಘಟಿಸಿವೆ. ಭೂಕುಸಿತಗಳಾಗಿವೆ. ನದಿಗಳು ಸಾಯುತ್ತಿವೆ. ಮಂಗನ ಕಾಯಿಲೆ ವ್ಯಾಪಕವಾಗಿದೆ. ಇನ್ನಷ್ಟು ಅರಣ್ಯ ನಾಶ ಬೇಡ ಎಂದು ಪರಿಸರ ತಜ್ಞರು ಅಭಿಪ್ರಾಯ ನೀಡಿದ್ದಾರೆ. ಜೊತೆಗೆ ಹುಂಚ ಬೆಟ್ಟದಿಂದ ಕೇವಲ 4 ಕಿಮೀ ದೂರದಲ್ಲಿ ಶೆಟ್ಟಿಹಳ್ಳಿ ಅಭಯಾರಣ್ಯವಿದೆ. 2010ರ ಹಿಂದಿನ ಸರ್ಕಾರಿ ದಾಖಲೆಯಲ್ಲಿ ಅರಣ್ಯ ಎಂದು ನಮೂದಿಸಲಾಗಿತ್ತು. ಈಗ ಆರ್‌ಟಿಸಿ ದಾಖಲೆಯಲ್ಲಿ ಅರಣ್ಯ ಎಂಬ ಶಬ್ದ ಮಾಯವಾಗಿದ್ದು, ಯಾರಧ್ದೋ ಉಪಕಾರಕ್ಕೆ ಇಂತಹ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ದೂರಿದರು.

ಹೊಸನಗರ ಅರಣ್ಯ ಇಲಾಖೆ ಹುಂಚ ಗಣಿಗಾರಿಕೆಗೆ ಅವಕಾಶ ಬೇಡ ಎಂದು 2017ರಲ್ಲೇ ವರದಿ ನೀಡಿತ್ತು. ಅರಣ್ಯ ಅನುಮತಿ ಇಲ್ಲದೇ ಹೇಗೆ ಗಣಿಗಾರಿಕೆಗೆ ಪರವಾನಗಿ ನೀಡಲು ಸಾಧ್ಯ ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಹುಂಚ ಕಲ್ಲು ಗಣಿಗಾರಿಕೆಗೆ ಪರವಾನಗಿ ನೀಡುವಲ್ಲಿ ಅಕ್ರಮ ನಡೆದಿದೆ. ರೆವಿನ್ಯೂ ದಾಖಲೆ ತಿದ್ದಲಾಗಿದೆ. ಇದು ಅರಣ್ಯ ಭೂಮಿ ಅಲ್ಲ ಎಂದು ತಪ್ಪು ಮಾಹಿತಿ ನೀಡಲಾಗಿದೆ ಎಂದು ಸ್ಥಾನಿಕ ಪರಿಸರ ಕಾರ್ಯಕರ್ತರು ಅಭಿಪ್ರಾಯ ಪಟ್ಟಿದ್ದಾರೆ.

ಹುಂಚ ಶ್ರೀಗಳು ಸಹ ಯೋಜನೆಗೆ ಅನುಮತಿ ನೀಡಿರುವುದನ್ನು ರದ್ದು ಮಾಡಬೇಕು ಎಂದು ಹೇಳಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಅವರು ಕಲ್ಲು ಗಣಿಗಾರಿಕೆ ಬೇಡ ಎಂದು ಲಿಖೀತ ಅಭಿಪ್ರಾಯ ನೀಡಿದ್ದಾರೆ. ಇಷ್ಟಾಗ್ಯೂ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿರುವ ಉದ್ದೇಶ ಏನು ಎಂದು ಪ್ರಶ್ನಿಸಿದರು. 

ಈ ಹಿಂದೆ ಗ್ರಾಪಂ ಅಧ್ಯಕ್ಷೆ ಚಂದ್ರಕಲಾ ನೇತೃತ್ವದಲ್ಲಿ ಗಣಿಗಾರಿಕೆ ಕೈ ಬಿಡಲು ಆಗ್ರಹಿಸಿ ಉಪ ತಹಶೀಲ್ದಾರರಿಗೆ ಜನರು ಮನವಿ ಸಲ್ಲಿಸಿದ್ದಾರೆ. ಹುಂಚ, ಹೊಂಡಲಗದ್ದೆ, ನಾಗರಹಳ್ಳಿ, ಅಳಲೆಕೊಪ್ಪ, ಈರಿನಬೈಲು, ಮಳಿಕೊಪ್ಪ, ಕುಬವಳ್ಳಿ ಈ ಹಳ್ಳಿಗಳ ರೈತರು, ಮಹಿಳೆಯರು ಪ್ರತಿಭಟನೆ ಜಾಥಾ-ಸಭೆಯಲ್ಲಿ ಗಣಿಗಾರಿಕೆ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನುಮತಿ ನೀಡಿದೆ. ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಬೇಕು. ಇಲ್ಲವಾದಲ್ಲಿ ಪರಿಸರ ಸಂಘಟನೆಗಳು ಸ್ಥಳೀಯ ಪರಿಸರವಾದಿಗಳು, ಗ್ರಾಮಸ್ಥರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವೃಕ್ಷಲಕ್ಷ ಆಂದೋಲನ ಸ್ಥಳೀಯ ಘಟಕದ ಬಿ.ಎಚ್‌. ರಾಘವೇಂದ್ರ, ಕವಲಕೋಡು ವೆಂಕಟೇಶ್‌, ಹುಂಚಾ ಗ್ರಾಮ ಭೂಮಿ ಸಂರಕ್ಷಣಾ ಸಮಿತಿ ಸಂಚಾಲಕ ನಾಗೇಂದ್ರ, ಈರನಾಯ್ಕ ಹುಂಚ, ಸತೀಶ್‌ ಈರನಬೈಲು, ಚಂದ್ರಶೇಖರ್‌ ಹೊಂಡಲಗದ್ದೆ, ಗ್ರಾಪಂ ಮಾಜಿ ಅಧ್ಯಕ್ಷೆ ಕಾಂತಾಮಣಿ, ಯುವರಾಜ ಮಳಲಿಕೊಪ್ಪ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.