ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ನಡಾಲ್‌, ಫೆಡರರ್‌


Team Udayavani, Mar 15, 2019, 12:55 AM IST

ap3142019000045a.jpg

ಇಂಡಿಯನ್‌ ವೆಲ್ಸ್‌: ಮಾಜಿ ಚಾಂಪಿಯನ್‌ಗಳಾದ ರಫೆಲ್‌ ನಡಾಲ್‌, ರೋಜರ್‌ ಫೆಡರರ್‌ “ಇಂಡಿಯನ್‌ ವೆಲ್ಸ್‌’ ಟೆನಿಸ್‌ ಕೂಟದ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ವನಿತೆಯರ ವಿಭಾಗದಲ್ಲಿ ಬಿಯಾಂಕಾ ಆ್ಯಂಡ್ರಿಸ್ಕೂ, ಎಲಿನಾ ಸ್ವಿಟೋಲಿನಾ ಸೆಮಿಫೈನಲ್‌ಗೆ ಲಗ್ಗೆ ಹಾಕಿದ್ದಾರೆ.

ಇಲ್ಲಿ ನಡೆದ ಪುರುಷರ ವಿಭಾಗದ ಪಂದ್ಯದಲ್ಲಿ ನಡಾಲ್‌ ಅರ್ಹತಾ ಆಟಗಾರ, ಸರ್ಬಿಯಾದ ಫಿಲಿಪ್‌ ಕ್ರೆಜಿವೋನಿಕ್‌ ವಿರುದ್ಧ ಒಂದು ಗಂಟೆ, 26 ನಿಮಿಷಗಳ ಹೋರಾಟ ನಡೆಸಿ 6-3, 6-4 ಅಂತರದಿಂದ ಜಯಿಸಿದರು.

2007, 2008 ಹಾಗೂ 2013ರಲ್ಲಿ ಪ್ರಶಸ್ತಿ ಜಯಿಸಿದ ನಡಾಲ್‌ ಕಳೆದ 3 ವರ್ಷಗಳಲ್ಲಿ ಎಂಟರ ಹಂತ ಪ್ರವೇಶಿಸಿದ್ದು ಇದೇ ಮೊದಲು. ಮುಂದಿನ ಪಂದ್ಯದಲ್ಲಿ ಅವರು ರಶ್ಯದ ಕರೆನ್‌ ಕಶನೋವ್‌ ಅವರನ್ನು ಎದುರಿಸಲಿದ್ದಾರೆ. ಕಶನೋವ್‌ 9ನೇ ರ್‍ಯಾಂಕಿನ ಜಾನ್‌ ಇಸ್ನರ್‌ ವಿರುದ್ಧ 6-4, 7-6 (7-1) ಸೆಟ್‌ಗಳಿಂದ ಜಯ ಸಾಧಿಸಿದರು.

6ನೇ ಪ್ರಶಸ್ತಿ ನಿರೀಕ್ಷೆಯಲ್ಲಿರುವ ರೋಜರ್‌ ಫೆಡರರ್‌ ಬ್ರಿಟನ್ನಿನ ಕೈಲ್‌ ಎಡ್ಮಂಡ್‌ ಅವರನ್ನು ಕೇವಲ 64 ನಿಮಿಷಗಳಲ್ಲಿ 6-1, 6-4 ನೇರ ಸೆಟ್‌ಗಳಿಂದ ಸೋಲಿಸಿದರು. ಇತ್ತೀಚೆಗಷ್ಟೇ 100ನೇ ಪ್ರಶಸ್ತಿ ಗೆದ್ದ ಉತ್ಸಾಹದಲ್ಲಿರುವ ಫೆಡರರ್‌ ಪೋಲೆಂಡ್‌ನ‌  ಹ್ಯೂಬರ್ಟ್‌ ಹರ್ಕಾಝ್ ಅವರನ್ನು ಎದುರಿಸಲಿದ್ದಾರೆ. ಅವರು ಡೆನ್ನಿಸ್‌ ಶಪೊವಲೋವ್‌ಗೆ 7-6 (7-3), 2-6, 6-3 ಅಂತರದಿಂದ ಆಘಾತವಿಕ್ಕಿದರು.ಒಂದು ವೇಳೆ ನಡಾಲ್‌, ಫೆಡರರ್‌ ಕ್ವಾರ್ಟರ್‌ ಪೈನಲ್‌ನಲ್ಲಿ ಗೆಲುವು ದಾಖಲಿಸಿದರೆ ಸೆಮಿಫೈನಲ್‌ನಲ್ಲಿ ಪರಸ್ಪರ ಎದುರಾಗುವ ಸಾಧ್ಯತೆ ಇದೆ.

*ಮಿಯೋಮಿರ್‌, ಥೀಮ್‌ಗೆ ಜಯ
ಸರ್ಬಿಯಾದ 19 ವರ್ಷದ ಮಿಯೋಮಿರ್‌ ಕೆಮನೋವಿಕ್‌ ಮೊದಲ ಬಾರಿಗೆ ಕೂಟದ ಎಂಟರ ಹಂತ ಪ್ರವೇಶಿಸಿದ್ದಾರೆ. ಇಲ್ಲಿ ಅವರ ಎದುರಾಳಿ ಕೆನಡಾದ ಮಿಲೋಸ್‌ ರಾನಿಕ್‌. ಜಪಾನಿನ ಯೊಶಿಹಿಟೊ ನಿಶಿಯೋಕ ಗಾಯಾಳಾಗಿ ಹಿಂದೆ ಸರಿದ ಕಾರಣ ಕೆಮನೋವಿಕ್‌ ಮುನ್ನಡೆಯುವಂತಾಯಿತು. ಕ್ರೊವೇಶಿಯದ 40 ವರ್ಷದ ಐವೊ ಕಾರ್ಲೊವಿಕ್‌ ಆಟ ಕೊನೆಗೊಂಡಿದೆ. ಅವರು 7ನೇ ಶ್ರೇಯಾಂಕಿಯ ಡೊಮಿನಿಕ್‌ ಥೀಮ್‌ ವಿರುದ್ಧ 4-6, 3-6 ಸೆಟ್‌ಗಳಿಂದ ಪರಾಭವಗೊಂಡರು.

ಮುಗುರುಜಾ ಆಟಕ್ಕೆ ಬ್ರೇಕ್‌
ಕೆನಡಾದ ಯುವ ಆಟಗಾರ್ತಿ ಬಿಯಾಂಕಾ ಆ್ಯಂಡ್ರಿಸ್ಕೂ ಎರಡು ಬಾರಿಯ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌ ಗಾರ್ಬಿನ್‌ ಮುಗುರುಜಾ ಅವರನ್ನು 6-0, 6-1 ನೇರ ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಇಲ್ಲಿ ಉಕ್ರೇನಿನ ಎಲಿನಾ ಸ್ವಿಟೋಲಿನಾ ಅವರನ್ನು ಎದುರಿಸಲಿದ್ದಾರೆ. ಸ್ವಿಟೋಲಿನಾ ಜೆಕ್‌ ಗಣರಾಜ್ಯದ ಮಾರ್ಕೆಟಾ ವಾಂಡ್ರೋಸೊವಾ ಅವರನ್ನು 4-6, 6-4, 6-4ರಿಂದ ಹಿಮ್ಮೆಟ್ಟಿಸಿದರು.

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.