ನಗುವಿನೊಳಗೊಂದು ಪುಟ್ಟ ನಗು


Team Udayavani, Mar 15, 2019, 12:30 AM IST

x-53.jpg

ಗರ್ಭಿಣಿಯರು ಸದಾ ಸಕಾರಾತ್ಮಕ ಚಿಂತನೆಗಳು, ಉತ್ತಮ ಅಭಿರುಚಿಗಳು, ಹವ್ಯಾಸ ಮುಂತಾದವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ, ಮಾನಸಿಕವಾಗಿ ಮತ್ತು ದೈಹಿಕವಾಗಿ ಉತ್ತಮ ಆರೋಗ್ಯ ಹೊಂದಿದ ಮಗುವನ್ನು ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ…

ನನ್ನೊಳಗೆ ಚಿಗುರೊಡೆದು ಮೃದುವಾಗಿ ಅರಳುತ್ತಿರುವ ಪುಟ್ಟಜೀವದ ಬಗ್ಗೆ ನೆನೆಸಿಕೊಂಡಾಗ ಕಣ್ತುಂಬಿ ಬರುತ್ತದೆ. ನನಗಿಷ್ಟವಾದ ಪಾನಿಪೂರಿ, ಮಸಾಲಾ ಪೂರಿ, ಬಜ್ಜಿ ಇತ್ಯಾದಿಗಳ ಸ್ಥಾನವನ್ನು ದಾಳಿಂಬೆ, ಸೇಬು, ಕಿತ್ತಳೆ ತುಂಬುತ್ತಿವೆ. ಹಾಗಂತ ನನಗೆ ಬೇಜಾರಿಲ್ಲ. ಖುಷಿಯಿದೆ. ನನ್ನ ಮುದ್ದು ಕಂದಮ್ಮನಿಗೋಸ್ಕರ ನಾಲಗೆ ಚಪಲಾನ ಒಂದಷ್ಟು ದಿನ ತ್ಯಾಗ ಮಾಡೋಕಾಗಲ್ವಾ ಅಂತ ಅನ್ನಿಸುತ್ತದೆ. ನಮ್ಮವರ ಜೊತೆಗೆ ವಾಕಿಂಗ್‌ ಹೋಗುವಾಗ ಸಿಗುವ ಮಕ್ಕಳ ಬಟ್ಟೆ ಅಂಗಡಿ ಯಾವಾಗಲೂ ನನ್ನನ್ನು ಆಕರ್ಷಿಸುತ್ತದೆ. ಪುಟ್ಟ ಪುಟ್ಟ ಅಂಗಿ, ಪ್ಯಾಂಟು, ಫ್ರಾಕು, ಟೋಪಿ ನೋಡಿದಾಗ, ಯಾವಾಗ ನನ್ನ ಮುದ್ದು ಕಂದನಿಗೆ ಇದನ್ನೆಲ್ಲ ಹಾಕೋದು ಅನಿಸುತ್ತೆ.

ಇವೆಲ್ಲ ಬರೀ ಗರ್ಭಿಣಿಯಾದ ಒಂದು ಹೆಣ್ಣುಮಗಳ ಮನಸ್ಥಿತಿಯಲ್ಲ. ತಾಯಂದಿರಾಗುವ ಎಲ್ಲರ ಮನಸ್ಥಿತಿ. ಗರ್ಭಿಣಿಯಾದಾಕೆ ಒಂದೆಡೆ ಹೀಗೆಲ್ಲಾ ಕನಸು ಕಾಣುತ್ತಿರುವ ಸಂದರ್ಭದಲ್ಲಿ ಆಕೆಯ ಯಜಮಾನರು ಮತ್ತು ತಾಯ್ತಂದೆಯರು, ಗರ್ಭಿಣಿಯ ಮಾನಸಿಕ ಆರೋಗ್ಯದ ಕುರಿತೂ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕು. ಒಳ್ಳೆಯ ಆಹಾರ ಪದ್ಧತಿಯೊಂದಿಗೆ, ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಬೇಕಾದ ಉತ್ತಮ ಜೀವನಶೈಲಿಯನ್ನು ಗರ್ಭಿಣಿಗೆ ಅಭ್ಯಾಸ ಮಾಡಿಸಬೇಕು.

ದೈಹಿಕ ಆರೋಗ್ಯಕ್ಕೆ
.ವಾಕಿಂಗ್‌, ಸರಳ ವ್ಯಾಯಾಮ ಧ್ಯಾನ ಮಾಡಬೇಕು.
.ತಾಜಾ ಆಹಾರ (ಹಣ್ಣು, ತರಕಾರಿ, ಡ್ರೈಫ್ರೂಟ್ಸ್ , ಸಿರಿಧಾನ್ಯಗಳು) ಸೇವಿಸಬೇಕು.

ಮಾನಸಿಕ ಆರೋಗ್ಯಕ್ಕೆ
ಒಳ್ಳೆಯ ಅಭಿರುಚಿಗಳನ್ನು ರೂಢಿಸಿಕೊಳ್ಳುವುದು. ಉದಾಹರಣೆಗೆ: ಸಂಗೀತ, ಪೇಟಿಂಗ್‌, ಒಳ್ಳೆ ಪುಸ್ತಕಗಳನ್ನು ಓದುವುದು, ಕುಟುಂಬದವರ ಜೊತೆ ಹೆಚ್ಚು ಸಮಯ ಕಳೆಯುವುದು ಉತ್ತಮ.

ಮನೆಯವರಿಗೆ ಕಿವಿಮಾತು
ಗರ್ಭಿಣಿಯ ಮಾನಸಿಕ ಆರೋಗ್ಯಕ್ಕೂ , ಮಗುವಿನ ದೈಹಿಕ ಬೆಳವಣಿಗೆಗೂ ನೇರ ನಂಟಿದೆ. ತಾಯಂದಿರ ನಕಾರಾತ್ಮಕ ಭಾವನೆಗಳು, ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕುಂದುಂಟು ಮಾಡುತ್ತವೆ. ಹಾಗಾಗಿ, ಜಗಳ, ಹಿಂಸಾತ್ಮಕ ದೃಶ್ಯಗಳು, ತೀವ್ರ ನೋವುಂಟು ಮಾಡುವ ಸಂಭಾಷಣೆಗಳು, ಅನವಶ್ಯಕ ಗದ್ದಲದಿಂದ ಗರ್ಭಿಣಿ ದೂರವಿರುವಂತೆ ನೋಡಿಕೊಳ್ಳ ಬೇಕು. ಆಕೆ ಸದಾ ಹಿತನುಡಿಗಳನ್ನು ಕೇಳುತ್ತ, ನಗು ನಗುತ್ತ ಇರುವಂಥ ವಾತಾವರಣ ರೂಪಿಸಬೇಕು. ಪ್ರತಿಕ್ಷಣವೂ ಆಕೆಯ ಕುರಿತು ಕಾಳಜಿ ತೋರುವುದು, ಧೈರ್ಯ ಹೇಳುವುದು ಪೋಷಕರ ಕರ್ತವ್ಯವಾಗಬೇಕು. ಮಮತೆ, ಕಾಳಜಿಯನ್ನು ವ್ಯಕ್ತಪಡಿಸುವುದು ಅತ್ಯವಶ್ಯಕ.

ಚಿಕಿತ್ಸೆ ಅಗತ್ಯ
ಗರ್ಭಾವಸ್ಥೆಯ ಸಮಯದಲ್ಲಿ ಮಾನಸಿಕ ಅಸ್ವಸ್ಥತೆಗೆ ಸೂಕ್ತ ಚಿಕಿತ್ಸೆ ಸಿಗದಿದ್ದಲ್ಲಿ, ತಾಯಿ ಹಾಗೂ ಮಗುವಿನ ಮಾನಸಿಕ ವಿಕಾಸಕ್ಕೆ ದುಷ್ಪರಿಣಾಮ ಉಂಟಾಗುವುದು ಖಂಡಿತ.

ಸಮಸ್ಯೆಯ ಲಕ್ಷಣಗಳು
ಗರ್ಭಿಣಿಯರಲ್ಲಿ ಈ ಬದಲಾವಣೆ ಕಾಣಿಸಿದರೆ, ಸೂಕ್ತ ಚಿಕಿತ್ಸೆ ಕೊಡಿಸುವುದು ಒಳಿತು.
.ಆಹಾರ ಸೇವನೆಯಲ್ಲಿ ತೀವ್ರ ಏರುಪೇರು
.ತೀವ್ರ ದುಃಖ, ಸಾಂದ್ರತೆಯ ಸಮಸ್ಯೆ.
.ಅತೀ ಹೆಚ್ಚು ಅಥವಾ ಅತೀ
 ಕಡಿಮೆ ನಿದ್ರೆ.
.ನಿರಾಸಕ್ತಿ, ವಿನಾಕಾರಣ ಆತಂಕ.

ಡಾ. ಸುಹಾಸಿನಿ ರಾಮ್‌

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.