ನಾಳೆ ಕೂಡಲ ಸಂಗಮದಲ್ಲಿ ಮಾತೆ ಮಹಾದೇವಿ ಅಂತ್ಯಕ್ರಿಯೆ


Team Udayavani, Mar 15, 2019, 12:30 AM IST

mate-mahadevi.jpg

ಬೆಂಗಳೂರು: ಬಹು ಅಂಗಾಂಗ ವೈಫ‌ಲ್ಯ ದಿಂದ ಬಳಲುತ್ತಿದ್ದ ಕೂಡಲಸಂಗಮದ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ (74) ಅವರು ಗುರುವಾರ ಹೃದಯಾ ಘಾತದಿಂದ ಲಿಂಗೈಕ್ಯ ರಾಗಿದ್ದಾರೆ.

ಮಾತೆ ಮಹಾದೇವಿ ಅವರಿಗೆ ಮೂತ್ರಪಿಂಡ ಹಾಗೂ ಶ್ವಾಸಕೋಶ ತೊಂದರೆಯಿಂದಾಗಿ ಮಾ.9ರಂದು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಹು ಅಂಗಾಂಗ ವೈಫ‌ಲ್ಯದೊಂದಿಗೆ ರಕ್ತ ಸೋಂಕು ಸಮಸ್ಯೆಯೂ ಕಾಣಿಸಿಕೊಂಡ ಪರಿಣಾಮ ಅವರನ್ನು ತೀವ್ರ ನಿಗಾ ಘಟಕ ದಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಗುರುವಾರ ಸಂಜೆ 4.45ಕ್ಕೆ ಹೃದಯಾ ಘಾತದಿಂದ ಇಹಲೋಹ ತ್ಯಜಿಸಿದ್ದಾರೆ. ಕುಗ್ರಾಮದಲ್ಲಿ ಜನಿಸಿ ಜಗದ್ಗುರು ವಾದರು: ಚಿತ್ರದುರ್ಗ ತಾಲೂಕಿನ ಕುಗ್ರಾಮ ಸಾಸಲಹಟ್ಟಿ ಮಾತೆ ಮಹಾ ದೇವಿಯವರ ಹುಟ್ಟೂರು. 1946ರ ಮಾ. 13ರಂದು ಡಾ| ಎಸ್‌.ಆರ್‌. ಬಸಪ್ಪ ಹಾಗೂ ಗಂಗಮ್ಮನವರ ಪುತ್ರಿಯಾಗಿ ಜನಿಸಿದ ಮಾತೆ ಮಹಾದೇವಿ ಪೂರ್ವಾಶ್ರಮದ ಹೆಸರು ರತ್ನ ಎಂದಾಗಿತ್ತು.

ತಂದೆ ಬಸಪ್ಪ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾಗ ಅಕಾಲಿಕ ಮರಣಕ್ಕೆತುತ್ತಾದರು. ಆಗ ಇವರ ಆಸರೆಗೆ
ಬಂದಿದ್ದು ತಾತ, ಖ್ಯಾತ ವಕೀಲ ಬಿ.ಟಿ.ಶಿವನ್‌ ಮತ್ತು ತಂದೆಯ ಸಹೋದರಿ ಈರಮ್ಮ. ಇವರ ನೆರಳಿನಲ್ಲಿ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪಿಯುಸಿ, ಬಿಎಸ್ಸಿ ವ್ಯಾಸಂಗ ಮಾಡಿದರು. ಬಿಎಸ್ಸಿ ಮುಗಿಯುತ್ತಿದ್ದಂತೆ ಸಾಮಾಜಿಕ ಕಾದಂಬರಿ “ಹೆಪ್ಪಿಟ್ಟ ಹಾಲು’ ಕೃತಿ ರಚಿಸಿದರು. ಬಿಎಸ್ಸಿ ಮುಗಿಸಿ ಎಂಎ ಓದಲು ವಿವಿಗೆ ತೆರಳಿದಾಗ ಇವರು ಬರೆದ ಕಾದಂಬರಿ “ಹೆಪ್ಪಿಟ್ಟ ಹಾಲು’ ಎಂಎ ವಿದ್ಯಾರ್ಥಿಗಳಿಗೆ ಪಠ್ಯವಾಯಿತು.

1965ರ ಆ. 19 ರಿಂದ ಬಸವ ಧರ್ಮ  ಪ್ರಚಾರ ಆರಂಭಿಸಿದ ಎರಡೇ ದಿನದಲ್ಲಿ ಲಿಂಗಾನಂದ ಸ್ವಾಮಿಗಳಿಂದ ಇಷ್ಟಲಿಂಗದೀಕ್ಷೆ ಪಡೆದರು. ಧರ್ಮ ಪ್ರಚಾರ ಅನುಕೂಲಕ್ಕಾಗಿ 1968 ಏ.13ರಂದು ವೀರ ವೈರಾಗ್ಯ ನಿಧಿ  ಅಕ್ಕಮಹಾದೇವಿ ಜಯಂತಿ ದಿನ ಧಾರವಾಡದಲ್ಲಿ ಅಕ್ಕಮಹಾದೇವಿ ಆಶ್ರಮ ಸ್ಥಾಪಿಸಿದರು.

ಐತಿಹಾಸಿಕ ಅಕ್ಕ ಮಹಾದೇವಿ ಅನುಭವ ಪೀಠವೆಂಬ ವಿಶ್ವದ ಮೊಟ್ಟ ಮೊದಲ ಮಹಿಳಾ ಜಗದ್ಗುರು ಪೀಠ ಸ್ಥಾಪಿಸಿ ಅದರ ಪ್ರಥಮ ಪೀಠಾಧ್ಯಕ್ಷರಾಗಿ ಪ್ರತಿಜ್ಞಾ ವಿ ಧಿ ಸ್ವೀಕರಿಸಿದರು. 1977ರಲ್ಲಿ ವಿಶ್ವ ಕಲ್ಯಾಣ ಮಿಷನ್‌ (ಟ್ರಸ್ಟ್‌ ), ಬೆಂಗಳೂರಿನ ಕುಂಬಳಗೋಡಿನಲ್ಲಿ 1978ರಲ್ಲಿ ಬಸವ ಗಂಗೋತ್ರಿ ಆಶ್ರಮ, 2002ರಲ್ಲಿ ಬಸವಕಲ್ಯಾಣದಲ್ಲಿ ಅಲ್ಲಮಪ್ರಭು ಶೂನ್ಯಪೀಠ ಸ್ಥಾಪಿಸಿ 12ನೇ ಶತಮಾನದ ಶೂನ್ಯಪೀಠ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದರು.

ಕೂಡಲಸಂಗಮದಲ್ಲಿ ನಾಳೆ ಅಂತ್ಯಕ್ರಿಯೆ
ಬಾಗಲಕೋಟೆ: ಮಾತೆ ಮಹಾದೇವಿ ಅವರ ಅಂತ್ಯಕ್ರಿಯೆ ಮಾ.16ರಂದು ಕೂಡಲಸಂಗಮದಲ್ಲಿ ನಡೆಯಲಿದೆ. ಎರಡು ದಿನ ಮಾತಾಜಿಯವರ ಪಾರ್ಥಿವ ಶರೀರ ದರ್ಶನ ವ್ಯವಸ್ಥೆ ಮಾಡಲಾಗಿದೆ. ಮಾ.15ರ ಬೆಳಗ್ಗೆ 11ರವರೆಗೆ ಬೆಂಗಳೂರಿನ ರಾಜಾಜಿನಗರದ ಬಸವ ಮಂಟಪದಲ್ಲಿ, ಅಲ್ಲಿಂದ ಮಾತಾಜಿಯವರ ಜನ್ಮಸ್ಥಳ ಸಾಸಲಹಟ್ಟಿಯಲ್ಲಿ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.

ಬಳಿಕ ರಾತ್ರಿ ಲಿಂಗಾಯತ ಧರ್ಮ ಕ್ಷೇತ್ರ ಕೂಡಲಸಂಗಮಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಅಲ್ಲಿ ಮಾ. 16ರವರೆಗೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಮಾ.16ರಂದೇ ಕೂಡಲಸಂಗಮದಲ್ಲಿ ನಾಡಿನ ಸಕಲ ಬಸವ ಪರಂಪರೆಯ ಜಂಗಮ ಮೂರ್ತಿಗಳು, ಬಸವ ಭಕ್ತರ ಉಪಸ್ಥಿತಿಯಲ್ಲಿ ಲಿಂಗಾಯತ ಧರ್ಮದ ಪದ್ಧತಿಯಂತೆ ಅಂತಿಮ ಕ್ರಿಯಾ ವಿಧಿ ವಿಧಾನ ನಡೆಯಲಿದೆ ಎಂದು ಬಸವ ಧರ್ಮ ಪೀಠದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.