ಕುಂಭಾಸಿ: ವರ್ಷ ಕಳೆವ ಮೊದಲೇ ಹಾಳಾದ ಅಜ್ಜರಹಾಡಿ ರಸ್ತೆ
Team Udayavani, Mar 15, 2019, 1:00 AM IST
ತೆಕ್ಕಟ್ಟೆ: ಕುಂಭಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಜ್ಜರಹಾಡಿ ರಸ್ತೆ ಕಾಂಕ್ರೀಟೀಕರಣ ನಡೆದು ಇನ್ನೂ ವರ್ಷ ಕಳೆದಿಲ್ಲ. ಅಷ್ಟರಲ್ಲೇ ರಸ್ತೆ ಮೂಲ ಸ್ವರೂಪ ಕಳೆದುಕೊಳ್ಳತೊಡಗಿದೆ.
ಕಳಪೆ ಗುಣಮಟ್ಟ
2016-17ನೇ ಸಾಲಿನ ಸುವರ್ಣ ಗ್ರಾಮೋದಯ ಯೋಜನೆಯಡಿಯಲ್ಲಿ ಉಡುಪಿ ಕೆ.ಆರ್.ಐ.ಡಿ.ಎಲ್ ಇಲಾಖೆಯಿಂದ ಸುಮಾರು ರೂ.15 ಲಕ್ಷ ವೆಚ್ಚದಲ್ಲಿ ಸುಮಾರು 340 ಮೀ. ಉದ್ದ ಹಾಗೂ 3.15 ಮೀ. ಅಗಲದ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಕಳಪೆ ಗುಣಮಟ್ಟದಿಂದಾಗಿ ಕಾಂಕ್ರೀಟ್ ಕಿತ್ತು ಬರತೊಡಗಿದೆ.
ಡಾಮರು ತೇಪೆ!
ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದು ಸ್ವಲ್ಪ ದಿನದಲ್ಲಿಯೇ ರಸ್ತೆಯ ಮೇಲ್ಭಾಗದಲ್ಲಿ ಜಲ್ಲಿ ಕಾಣಿಸಲು ಶುರುವಾಗಿತ್ತು. ಅದನ್ನು ಮುಚ್ಚಿಡುವಂತೆ ಅವೈಜ್ಞಾನಿಕವಾಗಿ ಡಾಮರು ಹಾಕಲಾಗಿದೆ. ಇಂತಹ ಕಳಪೆ ಕಾಮಗಾರಿ ಕಾಮಗಾರಿ ಮಾಡಿದವರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ದೂರು ಬಂದಿದೆ
ಅಜ್ಜರಹಾಡಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯ ಬಗ್ಗೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ದೂರು ಬಂದಿದ್ದು, ಈ ಕುರಿತು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದೇವೆ .
-ಮಹಾಬಲೇಶ್ವರ ಆಚಾರ್, ಉಪಾಧ್ಯಕ್ಷರು, ಗ್ರಾ.ಪಂ. ಕುಂಭಾಸಿ
ಭರವಸೆ
ಈ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ್ದೇನೆ. ಮೇಲ್ಭಾಗದಲ್ಲಿ ಎದ್ದು ಹೋಗಿರುವ ಕಡೆಗಳಲ್ಲಿ ಮತ್ತೆ ಕಾಂಕ್ರೀಟ್ ಟ್ರೀಟ್ಮೆಂಟ್ ಮಾಡುವಂತೆ ಗುತ್ತಿದಾರರ ಗಮನಕ್ಕೆ ತಂದಿದ್ದೇನೆ. ಈ ಬಗ್ಗೆ ಗುತ್ತಿದಾರರು ಪುನಃ ರಸ್ತೆಯ ಮೇಲ್ಪದರವನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ.
-ಸೂರ್ಯ ಎಂಜಿನಿಯರ್, ಕೆ.ಆರ್.ಐ.ಡಿ.ಎಲ್ ಇಲಾಖೆ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ
IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ
Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ