ಕಸ ಹೆಕ್ಕುವ ಸ್ಪರ್ಧೆಯ ಮೂಲಕ ಪ್ಲಾಸ್ಟಿಕ್‌ ನಿಷೇಧದ ಜಾಗೃತಿ​​​​​​​


Team Udayavani, Mar 16, 2019, 12:30 AM IST

1503shirva1.jpg

ಶಿರ್ವ:  ಪ್ಲಾಸ್ಟಿಕ್‌ ಲಕೋಟೆಯಲ್ಲಿ ಕಸವನ್ನು ಕಟ್ಟಿ ರಸ್ತೆ ಬದಿಗೆಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದರಿಂದ ಎಲ್ಲ ಪ್ರಮುಖ ರಸ್ತೆಗಳ ಇಕ್ಕೆಲಗಳು ಕಸದಿಂದ ತುಂಬಿರುವ ದೃಶ್ಯ ಸಾಮಾನ್ಯವಾಗಿದ್ದು ಸಾರ್ವತ್ರಿಕ ಸಮಸ್ಯೆಯಾಗಿದೆ. ಈ ಸಂಬಂಧ ಜಾಗೃತಿ ಮೂಡಿಸಲು ಕಸಹೆಕ್ಕುವ ಸ್ಪರ್ಧೆ ಎಂಬ ವಿನೂತನ ಕಾರ್ಯಕ್ರಮ ನಡೆಸುವ ಮೂಲಕ ಶಿರ್ವ ಗ್ರಾ.ಪಂ.ಸದಸ್ಯ ಕೆ.ಆರ್‌.ಪಾಟ್ಕರ್‌ ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ಕಸ ಹೆಕ್ಕುವ ವಿನೂತನ ಸ್ಪರ್ಧೆ
ಸ್ವತ್ಛತೆಯ ಪರಿಕಲ್ಪನೆಯೊಂದಿಗೆ ಪಂಚಾಯತ್‌ನ ಬಂಟಕಲ್ಲು ವಾರ್ಡ್‌ ಸದಸ್ಯ ಕೆ.ಆರ್‌. ಪಾಟ್ಕರ್‌ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಸ ಹೆಕ್ಕುವ ಸ್ಪರ್ಧೆಯನ್ನು ಆಯೋಜಿಸಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಹರಡಿರುವ ಕಸ, ಪ್ಲಾಸ್ಟಿಕ್‌ಮತ್ತು ತ್ಯಾಜ್ಯ ಸಂಗ್ರಹಿಸುವ ಸ್ಪರ್ಧೆನಡೆಸಿ ಜನರಲ್ಲಿ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ಪಣ ತೊಟ್ಟಿದ್ದಾರೆ.

ಶ್ರೀ ದುರ್ಗಾ ಮಹಿಳಾ ವೃಂದ ಮತ್ತು ರಾಜಾಪುರ ಸಾರಸ್ವತ ಯುವ ವೃಂದದ ಆಶ್ರಯದಲ್ಲಿ ಸಾರ್ವ ಜನಿಕರ ಸಹಭಾಗಿತ್ವದಲ್ಲಿ ಬಂಟಕಲ್ಲು ದುರ್ಗಾನಗರ (ಎಂಜಿನಿಯರಿಂಗ್‌ ಕಾಲೇಜು ಹತ್ತಿರ)ದಿಂದ ಬಿ.ಸಿ.ರೋಡ್‌ವರೆಗಿನ ರಸ್ತೆ ಇಕ್ಕೆಲದ ಕಸಹೆಕ್ಕುವ ಸ್ಪರ್ಧೆ ನಡೆಸಿ ಬಹುಮಾನ ವಿತರಣೆ ನಡೆಸಿದ್ದರು.

ಬಳಿಕ ಶಿರ್ವ ಗ್ರಾಮ ಪಂಚಾಯತ್‌ ಹಾಗೂ ಇತರ ಸಂಘ ಸಂಸ್ಥೆಗಳ ವತಿಯಿಂದ ರಸ್ತೆ ಬದಿಯ ಕಸವನ್ನು ಹೆಕ್ಕುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಆದರೆ ಇದಾದ ಒಂದು ವಾರದಲ್ಲಿಯೇ ಹಳೆಚಾಳಿ ಮುಂದುವರಿದಿತ್ತು. 
 
ಖಾಸಗಿ ಅಥವಾ ಇತರ ಕಾರ್ಯಕ್ರಮಗಳು ಪ್ಲಾಸ್ಟಿಕ್‌ ಮುಕ್ತವಾಗಿನಡೆಯಬೇಕು. ಧಾರ್ಮಿಕ ಸಂಸ್ಥೆಗಳಲ್ಲಿ, ಪ್ರಾರ್ಥನಾ ಮಂದಿರಗಳಲ್ಲಿ, ವಿದ್ಯಾಸಂಸ್ಥೆಗಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಈ ಮೂಲಕ ತ್ಯಾಜ್ಯ ಮುಕ್ತ ಮಾಡಿ ಸಮಾಜಕ್ಕೆ ನಮ್ಮ ಕೊಡುಗೆ ನೀಡಬೇಕಾಗಿದೆ ಎಂಬುದು ಪಾಟ್ಕರ್‌ ಅವರ ಸಾಮಾಜಿಕ ಕಳಕಳಿಯಾಗಿದೆ.

ಜಿಲ್ಲಾಡಳಿತದ ಸ್ಪಷ್ಟ ನಿರ್ದೇಶನ ಅಗತ್ಯ
ಸುವರ್ಣ ಗ್ರಾಮ ಯೋಜನೆಯಲ್ಲಿ ಸ್ಥಳಿಯಾ ಡಳಿತಗಳು ಕಡ್ಡಾಯವಾಗಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಹೊಂದಲೇಬೇಕೆಂಬ ನಿಯಮವಿದ್ದರೂ ಕೆಲವೆಡೆ ಈ ವ್ಯವಸ್ಥೆ ಇಲ್ಲದಿರುವುದು,ಇದ್ದರೂ ಅದರ ಸದ್ಬಳಕೆ ಆಗದಿರುವುದು ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ಜಿಲ್ಲಾಡಳಿತ ಕಸದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮ ಪಂಚಾಯತ್‌ ಆಡಳಿತಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕಿದೆ.  

ಎಲ್ಲರ ಹೊಣೆಗಾರಿಕೆ
ಸ್ವತ್ಛ ಮನಸ್ಸಿನ ಮತ್ತು ನಿರ್ಮಲ ಹೃದಯದ ಪ್ರತೀಕವಾದ ಸ್ವತ್ಛ ಪರಿಸರ ಕಾಪಾಡುವುದು ಎಲ್ಲರ ಹೊಣೆಗಾರಿಕೆಯಾಗಿದ್ದು ಬೇಕಾಬಿಟ್ಟಿಯಾಗಿ ರಸ್ತೆ ಬದಿ ಕಸ ಎಸೆಯುವ ಪ್ರವೃತ್ತಿ ನಿಲ್ಲಬೇಕು. ಹೆತ್ತವರು ಈ ಸಂಸ್ಕೃತಿ ಪಾಲಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕಿದೆ. 
– ರೆ|ಫಾ|ಡೆನ್ನಿಸ್‌ ಡೇಸಾ, ಧರ್ಮಗುರುಗಳು,  
ಶಿರ್ವ ಆರೋಗ್ಯ ಮಾತಾ ಚರ್ಚ್‌

ಪ್ಲಾಸ್ಟಿಕ್‌ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ಬರುವಂತಾಗಿ ರಸ್ತೆ ಬದಿ ಕಸ ಹಾಕುವವರ ಮೇಲೆ ಗರಿಷ್ಠ ದಂಡ ವಿಧಿಸುವ ಅಧಿಕಾರ ಸ್ಥಳಿಯಾಡಳಿತಕ್ಕೆ ನೀಡಬೇಕು. ನಾನು ನನ್ನ ಮನೆಯಲ್ಲಿ ಪ್ಲಾಸ್ಟಿಕ್‌ ಬಳಸುವುದಿಲ್ಲ ಎಂಬ ಸಂಕಲ್ಪ ಮಾಡಿದಾಗ ಪ್ಲಾಸ್ಟಿಕ್‌ ಮುಕ್ತ ಸಮಾಜದ ನಿರ್ಮಾಣ ಸಾಧ್ಯ
 -ಕೆ.ಆರ್‌. ಪಾಟ್ಕರ್‌,ಶಿರ್ವ ಗ್ರಾ.ಪಂ.ಸದಸ್ಯ 

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.