ಶ್ರೀಶಾಂತ್‌ ಆಜೀವ ನಿಷೇಧ ರದ್ದು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು


Team Udayavani, Mar 16, 2019, 12:30 AM IST

z-3.jpg

ಹೊಸದಿಲ್ಲಿ: ಸ್ಪಾಟ್‌ ಫಿಕ್ಸಿಂಗ್‌ನಲ್ಲಿ ಸಿಕ್ಕಿಬಿದ್ದ ಭಾರತ ಕ್ರಿಕೆಟ್‌ ತಂಡದ ಮಾಜಿ ವೇಗಿ ಶ್ರೀಶಾಂತ್‌ ಮೇಲೆ ಬಿಸಿಸಿಐ ಹೇರಿದ ಆಜೀವ ನಿಷೇಧವನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ. ಇದರೊಂದಿಗೆ 6 ವರ್ಷದ ಶ್ರೀಶಾಂತ್‌ ವನವಾಸ ಕೊನೆಗೂ ಅಂತ್ಯವಾಗಿದೆ. ಕೇರಳ ಕ್ರಿಕೆಟಿಗ ಹರ್ಷ ವ್ಯಕ್ತಪಡಿಸಿದ್ದು ತೀರ್ಪಿನಿಂದ ನಿರಾಳವಾಗಿದ್ದೇನೆ ಎಂದಿದ್ದಾರೆ.

ಏನಿದು ಪ್ರಕರಣ?
2013ರ ಐಪಿಎಲ್‌ನಲ್ಲಿ ಶ್ರೀಶಾಂತ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಪ್ರತಿನಿಧಿಸಿದ್ದರು. ಈ ವೇಳೆ ಶ್ರೀಶಾಂತ್‌ ಜತೆಗೆ ಸ್ಪಿನ್ನರ್‌ ಅಂಕಿತ್‌ ಚೌವಾಣ್‌, ಅಜಿತ್‌ ಚಾಂಡೀಲ ಕೂಡ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣಕ್ಕೆ ಸಿಲುಕಿಕೊಂಡಿದ್ದರು. ಒಂದು ಹಂತದಲ್ಲಿ ಈ ಮೂವರೂ ಜೈಲು  ಸೇರಿದ್ದರು. ಬಳಿಕ ಬಿಸಿಸಿಐ ಶಿಸ್ತು ಸಮಿತಿ ಶ್ರೀಶಾಂತ್‌ ಸೇರಿದಂತೆ ಎಲ್ಲ ಕ್ರಿಕೆಟಿಗರಿಗೆ ಆಜೀವ ನಿಷೇಧ ಹೇರಿತ್ತು. ಇದನ್ನು ಪ್ರಶ್ನಿಸಿ 2015ರಲ್ಲಿ ದಿಲ್ಲಿ ವಿಶೇಷ ಸ್ಥಳೀಯ ನ್ಯಾಯಾಲಯದಲ್ಲಿ ಶ್ರೀಶಾಂತ್‌ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅವರಿಗೆ ಗೆಲುವು ಸಿಕ್ಕಿತ್ತು. ಆ ಬಳಿಕವೂ ಬಿಸಿಸಿಐ ಶ್ರೀಶಾಂತ್‌ ಮೇಲಿನ ನಿಷೇಧ ತೆರವು ಮಾಡಿರಲಿಲ್ಲ. ಸ್ಕಾಟ್ಲೆಂಡ್‌ ಟಿ20 ಲೀಗ್‌ನಲ್ಲಿ ಪಾಲ್ಗೊಳ್ಳಲು ಬಿಸಿಸಿಐ ಬಳಿ ಶ್ರೀಶಾಂತ್‌ ಎನ್‌ಒಸಿ (ನಿರಾಕ್ಷೇಪಣಾ ಪತ್ರ) ಕೇಳಿದ್ದರು. ಇದನ್ನು ಬಿಸಿಸಿಐ ನಿರಾಕರಿಸಿತ್ತು. ಇದರಿಂದ ಶ್ರೀಶಾಂತ್‌ ಹತಾಶರಾಗಿದ್ದರು. ಬಿಸಿಸಿಐ ತನ್ನ ಮೇಲೆ ಸುಮ್ಮನೆ ದ್ವೇಷ ಸಾಧಿಸುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು. ಎನ್‌ಒಸಿ ನೀಡದಿದ್ದ ಹಿನ್ನೆಲೆಯಲ್ಲಿ ಕೊನೆಗೆ ಅವರು ಬಿಸಿಸಿಐ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ದೂರು ಸಲ್ಲಿಸಿದ್ದರು.

ನ್ಯಾಯಾಲಯ ಹೇಳಿದ್ದೇನು?
ಶುಕ್ರವಾರ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್‌ ಭೂಷಣ್‌ ಮತ್ತು ಕೆ.ಎಂ. ಜೋಸೆಫ್ ಒಳಗೊಂಡ ದ್ವಿಸದಸ್ಯ ಪೀಠ ಕೈಗೆತ್ತಿಕೊಂಡಿತ್ತು. ವಾದ ವಿವಾದಗಳ ಬಳಿಕ ದ್ವಿಸದಸ್ಯ ಪೀಠ ಶ್ರೀಶಾಂತ್‌ ಆಜೀವ ನಿಷೇಧವನ್ನು ರದ್ದು ಮಾಡಿತು. ಮಾತ್ರವಲ್ಲ ಬಿಸಿಸಿಐ ಶಿಸ್ತು ಸಮಿತಿ ಮುಂದಿನ ಮೂರು ತಿಂಗಳ ಒಳಗಾಗಿ ಶಿಕ್ಷೆಯನ್ನು ಮರುಪರಿಶೀಲನೆ ನಡೆಸುವಂತೆಯೂ ಸೂಚನೆ ನೀಡಿತು. ಮಾತ್ರವಲ್ಲ, ಸಮಿತಿ ನಿರ್ಧಾರದ ಬಳಿಕ ಶ್ರೀಶಾಂತ್‌ಗೆ ಮತ್ತೆ ಕ್ರಿಕೆಟ್‌ ಆಡಲು ಅವಕಾಶ ಸಿಗಬೇಕು ಎಂದಿತ್ತು. ಈ ತೀರ್ಪಿಗೂ ದಾಖಲಾದ‌ ಕ್ರಿಮಿನಲ್‌ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಇದೇ ವೇಳೆ ನ್ಯಾಯಾಲಯ ಸ್ಪಷ್ಟಪಡಿಸಿತು. ಈಗಾಗಲೇ ದಿಲ್ಲಿ ಪೊಲೀಸರು ಶ್ರೀಶಾಂತ್‌ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿಕೊಂಡಿರುವ ವಿಚಾರಣೆಯೂ ನಡೆಯುತ್ತಿದೆ.  ಕೆಲವು ವರ್ಷಗಳ ಹಿಂದೆ ಕೇರಳ ಹೈಕೋರ್ಟ್‌ನಲ್ಲಿಯೂ ಶ್ರೀಶಾಂತ್‌ ಬಿಸಿಸಿಐ ನಿಷೇಧದ ವಿರುದ್ಧ ಕಾನೂನು ಸಮರ ಹೂಡಿದ್ದರು. ಏಕಸದಸ್ಯ ಪೀಠದಲ್ಲಿ ಶ್ರೀಶಾಂತ್‌ ಪರ ತೀರ್ಪು ಬಂದಿತ್ತು. ಆದರೆ ದ್ವಿಸದಸ್ಯ ಪೀಠದಲ್ಲಿ ತೀರ್ಪು ಶ್ರೀಶಾಂತ್‌ ವಿರುದ್ಧ ಬಂದಿದ್ದನ್ನು ಸ್ಮರಿಸಬಹುದು.

ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಕೆಸಿಎ
ಶ್ರೀಶಾಂತ್‌ ಭವಿಷ್ಯದ ದೃಷ್ಟಿಯಿಂದ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು  ಕೇರಳ ಕ್ರಿಕೆಟ್‌ ಸಂಸ್ಥೆ (ಕೆಸಿಎ) ಹಿರಿಯ ಅಧಿಕಾರಿ ಟಿ.ಸಿ. ಮ್ಯಾಥ್ಯೂ ಸ್ವಾಗತಿಸಿದ್ದಾರೆ.

ಸಿಇಒ ಸಭೆಯಲ್ಲಿ ಚರ್ಚೆ: ವಿನೋದ್‌ ರಾಯ್‌
ಶ್ರೀಶಾಂತ್‌ ಕುರಿತ ವಿಷಯವನ್ನು ಆಡಳಿತಾಧಿಕಾರಿ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಆಡಳಿತಾಧಿಕಾರಿ ಮುಖ್ಯಸ್ಥ ವಿನೋದ್‌ ರಾಯ್‌ ತಿಳಿಸಿದ್ದಾರೆ. “ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರತಿ ಇನ್ನೂ ನಮಗೆ ದೊರಕಿಲ್ಲ. ಮುಂದಿನ ಸಿಇಒ ಸಭೆಯಲ್ಲಿ ಈ ವಿಷಯವನ್ನು ಸಮಗ್ರವಾಗಿ ಚರ್ಚೆ ನಡೆಸುತ್ತೇವೆ’ ಎಂದು ಮಾಧ್ಯಮಗಳಿಗೆ ತಿಳಿಸಿದರು. ಮಾ. 18ರಂದು ಬಿಸಿಸಿಐ ಸಭೆಯಲ್ಲಿ ಶ್ರೀಶಾಂತ್‌ ಭವಿಷ್ಯದ ಕುರಿತ ಮಹತ್ವದ ನಿರ್ಧಾರ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.