ಮ್ಯಾನ್ಮಾರ್‌ನಲ್ಲಿ  ಭಾರೀ ದಾಳಿ ನಡೆಸಿದ್ದ  ಸೇನಾಪಡೆ!


Team Udayavani, Mar 16, 2019, 12:30 AM IST

z-17.jpg

ಹೊಸದಿಲ್ಲಿ: ದೇಶವೇ ಪುಲ್ವಾಮಾ ದಾಳಿ ಹಾಗೂ ಅನಂತರ ನಡೆದ ಪ್ರತೀಕಾರದ ದಾಳಿಯ ಬಗ್ಗೆ ಮಾತನಾಡುತ್ತಿದ್ದರೆ, ಅತ್ತ ಮ್ಯಾನ್ಮಾರ್‌ ಗಡಿಯಲ್ಲಿ ಭಾರತದ ಸೇನಾಪಡೆ ಇನ್ನೊಂದು ಮಹತ್ವದ ಕಾರ್ಯಾಚರಣೆ ನಡೆಸುತ್ತಿತ್ತು. ಭಾರತ- ಮ್ಯಾನ್ಮಾರ್‌ ಗಡಿಯಲ್ಲಿ ಮ್ಯಾನ್ಮಾರ್‌ ಸೇನೆಯ ನೆರವಿನಿಂದ ಹಲವು ಉಗ್ರ ಸಂಘಟನೆಗಳ ನೆಲೆಗಳನ್ನು ಧ್ವಂಸಗೊಳಿಸಲಾಗಿದ್ದು, ಈ ಕಾರ್ಯಾಚರಣೆ ಫೆ. 17ರಿಂದ ಮಾ.2ರ‌ ವರೆಗೆ ನಡೆದಿದೆ. 

ಈಶಾನ್ಯ ರಾಜ್ಯಗಳ ಬೃಹತ್‌ ಮೂಲಸೌಕರ್ಯ ಯೋಜನೆಗಳಿಗೆ ಈ ಉಗ್ರರಿಂದ ಆತಂಕವಿದೆ ಎಂಬ ಗುಪ್ತಚರ ಮೂಲಗಳ ಮಾಹಿತಿಯ ಮೇರೆಗೆ ಈ ದಾಳಿ ನಡೆಸಲಾಗಿತ್ತು. ಕಚಿನ್‌ ಇಂಡಿಪೆಂಡೆನ್ಸ್‌ ಆರ್ಮಿ ಎಂಬ ಸಂಘಟನೆಯ ನೆರವಿನಿಂದ ಅರಕನ್‌ ಆರ್ಮಿ ಎಂಬ ಪಡೆಯನ್ನು ಈಗಾಗಲೇ ಉಗ್ರ ಸಂಘಟನೆ ಎಂದು ಮ್ಯಾನ್ಮಾರ್‌ ಗುರುತಿಸಿದ್ದು, ಈ ಪಡೆ ಭಾರತದಲ್ಲಿನ ಕಲದನ್‌ ಪ್ರಾಜೆಕ್ಟ್ ಮೇಲೆ ಕಣ್ಣಿಟ್ಟಿತ್ತು. ಕಲದನ್‌ ಯೋಜನೆಯು ಮ್ಯಾನ್ಮಾರ್‌ನ ಸಿತೆ ಬಂದರು ಮತ್ತು ಕೋಲ್ಕತಾವನ್ನು ಸಂಪರ್ಕಿಸುವ ಮಹತ್ವದ ಯೋಜನೆಯಾಗಿದೆ.

ಈ ಭಾಗದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ದೊಡ್ಡ ಪ್ರಮಾಣದಲ್ಲಿ ಈ ಬಾರಿ ಕಾರ್ಯಾಚರಣೆ ನಡೆಸಲಾಗಿದೆ. ಸೇನಾಪಡೆಯ ವಿಶೇಷ ತಂಡ, ಅಸ್ಸಾಂ ರೈಫ‌ಲ್ಸ್‌ ಮತ್ತು ಇನ್‌ಫಾಂಟ್ರಿ ಯೂನಿಟ್‌ಗಳು ಭಾಗ ವಹಿ ಸಿದ್ದವು. ಕಾಪ್ಟರುಗಳು ಮತ್ತು ಇತರ ವಿಚಕ್ಷಣಾ ಸಲಕರಣೆಗಳನ್ನು ಬಳಸಿ ಉಗ್ರರ ಚಲನ ವಲನಗಳನ್ನು ಗಮನಿಸಲಾಗಿದೆ. ಅವರ ಕ್ಯಾಂಪ್‌ಗಳನ್ನು ಗುರುತಿಸಲೂ ಇದು ನೆರವಾಗಿದೆ. ಭಾರತೀಯ ಸೇನೆ ನೀಡಿದ ಮಾಹಿತಿಯಂತೆ ಟಾಗಾದಲ್ಲಿರುವ ಎನ್‌ಎಸ್‌ಸಿಎನ್‌ಕೆ ಕೇಂದ್ರ ಕಚೇರಿಯನ್ನು ಉಡಾಯಿಸಲಾಗಿದೆ. ಈ ಕಾರ್ಯಾಚರಣೆಗೆ 2 ತಿಂಗಳಿನಿಂದ ಯೋಜನೆ ರೂಪಿಸಲಾಗುತ್ತಿತ್ತು.

ಉಗ್ರ ನೆಲೆಗಳು ಧ್ವಂಸ
ಮ್ಯಾನ್ಮಾರ್‌ನ ದಕ್ಷಿಣ ಮಿಜೋರಾಂ ಪ್ರಾಂತ್ಯದಲ್ಲಿ ಈ ಉಗ್ರ ಸಂಘಟನೆ ನೆಲೆ ಕಂಡುಕೊಂಡಿತ್ತು. ಮೊದಲ ಹಂತದಲ್ಲಿ ಮಿಜೋರಾಂ ಗಡಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಯಿತು. ಬಳಿಕ ನಾಗಾ ಗ್ರೂಪ್‌ ಎನ್‌ಎಸ್‌ ಸಿಎನ್‌ಕೆ ಗ್ರೂಪ್‌ ಮೇಲೆ ಟಾರ್ಗೆಟ್‌ ಮಾಡಿ ಉಗ್ರರ ಕ್ಯಾಂಪ್‌ಗ್ಳನ್ನು ನಾಶ ಮಾಡಲಾಗಿದೆ.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.