ಬಂದೂಕುಧಾರಿಗಳ ರಕ್ತದಾಹಕ್ಕೆ 49 ಬಲಿ


Team Udayavani, Mar 16, 2019, 12:30 AM IST

z-20.jpg

ವೆಲ್ಲಿಂಗ್ಟನ್‌: ನ್ಯೂಜಿಲ್ಯಾಂಡ್‌ನ‌ ಪುಟ್ಟ ನಗರ ಕ್ರೈಸ್ಟ್‌ ಚರ್ಚ್‌ನ ಕೇಂದ್ರ ವಲಯ ಮತ್ತು ಹೊರ ವಲಯದಲ್ಲಿರುವ ಮಸೀದಿಗಳ ಮೇಲೆ ಶುಕ್ರವಾರ ಉಗ್ರವಾದಿಗಳು ನಡೆಸಿರುವ ಗುಂಡಿನ ದಾಳಿಗೆ 49 ಜನರು ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ಒಂಭತ್ತು ಮಂದಿ ಭಾರತೀಯರು ಕಣ್ಮರೆಯಾಗಿದ್ದಾರೆ. 

ಕೇಂದ್ರ ವಲಯದಲ್ಲಿರುವ ಡೀನ್ಸ್‌ ಅವೆನ್ಯೂ ಪ್ರಾಂತ್ಯದ ಅಲ್‌ ನೂರ್‌ ಮಸೀದಿ ಮೇಲೆ ಸೆಮಿ ಆಟೋಮೆಟಿಕ್‌ ಮೆಷಿನ್‌ಗನ್‌ ಮೂಲಕ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 41 ಜನರು ಅಸುನೀಗಿದ್ದರೆ, ಅಲ್ಲಿಂದ 5 ಕಿ.ಮೀ. ದೂರವಿರುವ ಲಿನ್‌ವುಡ್‌ ಏವ್‌ ಪ್ರಾಂತ್ಯದಲ್ಲಿರುವ ಮಸೀದಿಯ ಮೇಲೆ ಇದೇ ಮಾದರಿ ನಡೆದ ದಾಳಿಯಲ್ಲಿ 8 ಜನರು ಸಾವಿಗೀಡಾಗಿದ್ದಾರೆ. ಮಡಿದವರಲ್ಲಿ ಮಹಿಳೆಯರು, ಮಕ್ಕಳೂ ಸೇರಿದ್ದಾರೆ. ಅಲ್‌ ನೂರ್‌ ಮಸೀದಿ ಮೇಲೆ ದಾಳಿ ನಡೆಸಿದಾತನೇ ಲಿನ್‌ವುಡ್‌ ಮಸೀದಿಗೆ ತೆರಳಿ ದಾಳಿ ನಡೆಸಿದನೇ ಅಥವಾ ಇತರರ ಕೈವಾಡವಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಪೊಲೀಸರು ಇದನ್ನು ಭಯೋತ್ಪಾದಕ ಕೃತ್ಯವೆಂದು ಕರೆದಿದ್ದಾರೆ. ಮುಂಜಾಗ್ರತಾ ಕ್ರಮ ವಾಗಿ ಯಾವುದೇ ಮಸೀದಿಗೂ ತೆರಳದಂತೆ ಮುಸ್ಲಿಮರಿಗೆ ಸೂಚನೆ ನೀಡಲಾಗಿದೆ. 

ಹತ್ಯೆಗಳ ನೇರ ಪ್ರಸಾರ!
ದಾಳಿಕೋರರಲ್ಲಿ ಒಬ್ಬ ಇಡೀ ಘಟನೆಯನ್ನು ಫೇಸ್‌ಬುಕ್‌ ಲೈವ್‌ ಮೂಲಕ ನೇರ ಪ್ರಸಾರ ಮಾಡಿ ವಿಕೃತಿ ಮೆರೆದಿದ್ದಾನೆ. ದಾಳಿ ನಡೆಸಿದ ಅನಂತರ ಆತ ಪರಾರಿಯಾಗಿದ್ದು, ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿ ಒಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇತರ ಮೂವರನ್ನು ಬಂಧಿಸಲಾಗಿದೆ. ಘಟನೆ ಬೆನ್ನಲ್ಲೇ ನಗರವ್ಯಾಪಿ ನಡೆದ ಶೋಧದಲ್ಲಿ ಆಕ್ಲೆಂಡ್‌ನ‌ ರೈಲ್ವೇ ನಿಲ್ದಾಣ ಸಹಿತ ಹಲವೆಡೆ ಸುಧಾರಿತ ಸ್ಫೋಟಕಗಳು (ಐಇಡಿ) ಪತ್ತೆಯಾಗಿದ್ದು ಅವುಗಳನ್ನು ಬಾಂಬ್‌ ನಿಷ್ಕ್ರಿಯ ದಳದ ಸಿಬಂದಿ ನಿಷ್ಕ್ರಿಯಗೊಳಿಸಿದ್ದಾರೆ. ಶುಕ್ರವಾರದ ಪ್ರಾರ್ಥನೆಗಾಗಿ ಮುಸ್ಲಿಂ ಸಮುದಾಯದವರು ಮಸೀದಿಗೆ ಆಗಮಿಸಿದಾಗ ಈ ದಾಳಿ ನಡೆಸಲಾಗಿದ್ದು, ಇದೊಂದು ಪೂರ್ವ ಯೋಜಿತ ಕೃತ್ಯ ಎಂದು ಪೊಲೀಸರು ತಿಳಿಸಿದ್ದಾರೆ. 

ಭಾರತೀಯನ ಕುಟುಂಬದ ಮೊರೆ
ಭಾರತದ ಹೈದರಾಬಾದ್‌ ಮೂಲದ ಅಹ್ಮದ್‌ ಇಕ್ಬಾಲ್‌ ಜಹಾಂಗೀರ್‌ ಅವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಕ್ರೈಸ್ಟ್‌ ಚರ್ಚ್‌ನಲ್ಲಿ ಅವರು ರೆಸ್ಟೋರೆಂಟ್‌ ನಡೆಸುತ್ತಿದ್ದರು. ಸುದ್ದಿಕೇಳಿ ತಲ್ಲಣಗೊಂಡಿರುವ ಹೈದರಾಬಾದ್‌ನಲ್ಲಿರುವ ಅವರ ಸಂಬಂಧಿಕರು ನ್ಯೂಜಿಲ್ಯಾಂಡ್‌ಗೆ ತೆರಳಲು ಸಿದ್ಧತೆ ನಡೆಸಿದ್ದು ತತ್‌ಕ್ಷಣದ ವೀಸಾಕ್ಕಾಗಿ ಕೇಂದ್ರ, ತೆಲಂಗಾಣ ಸರಕಾರಗಳಿಗೆ ಮನವಿ ಸಲ್ಲಿಸಿದ್ದಾರೆ.  ಏತನ್ಮಧ್ಯೆ ದಾಳಿ ಬಳಿಕ ಒಟ್ಟು 9 ಭಾರತೀಯರು ಕಣ್ಮರೆಯಾಗಿದ್ದಾರೆಂದು ನ್ಯೂಜಿಲ್ಯಾಂಡ್‌ನ‌ಲ್ಲಿರುವ ಭಾರತದ ರಾಯಭಾರಿ ಹೇಳಿದ್ದಾರೆ.  

ಮೋದಿ ಸಂತಾಪ
ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಾರ್ಥನಾ ಸ್ಥಳಗಳ ಮೇಲೆ ನಡೆಸಲಾಗಿರುವ ದಾಳಿಯನ್ನು ಖಂಡಿಸಿ ನ್ಯೂಜಿಲ್ಯಾಂಡ್‌ ಪ್ರಧಾನಿ ಜಸಿಂಡಾ ಆರ್ಡೆರ್ನ್ಗೆ ಪತ್ರ ಬರೆದಿದ್ದಾರೆ. 

ಹತ್ಯೆ ಕಾರಣ ತಿಳಿಸಿದ ಹಂತಕ
ಮಸೀದಿಗಳ ಮೇಲೆ ದಾಳಿ ನಡೆಸಿದ ವ್ಯಕ್ತಿ ಬ್ರೆಂಟನ್‌ ಟೆರ್ರಂಟ್‌ (28), ತಾನು ನಡೆಸಿದ ದಾಳಿಗೆ ಕಾರಣವೇನೆಂದು ಬಾಯಿಬಿಟ್ಟಿದ್ದಾನೆ. ಸ್ವೀಡನ್‌ನ ರಾಜಧಾನಿ ಸ್ಟಾಕ್‌ಹೋಂನಲ್ಲಿ 2017ರಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ 12 ವರ್ಷದ ಎಬ್ಟಾ ಆಕರ್ಲಂಡ್‌ ಎಂಬ ಕಿವುಡ ಬಾಲಕಿ ಮೃತಳಾಗಿದ್ದಳು. ಆ ದಾಳಿಯನ್ನು ಉಜ್ಬೇಕಿಸ್ಥಾನದಿಂದ ಬಂದು ಸ್ವೀಡನ್‌ನಲ್ಲಿ ಆಶ್ರಯ ಪಡೆದಿದ್ದ ರಖತ್‌ ಅಲಿಲೊವ್‌ ಎಂಬಾತ ನಡೆಸಿದ್ದ. ಹಾಗಾಗಿ ವಲಸಿಗ ಮುಸ್ಲಿಂ ಸಮುದಾಯದ ಮೇಲಿನ ದ್ವೇಷ ಬೆಳೆಸಿಕೊಂಡಿರುವ ನಾನು ಎಬ್ಟಾ  ಸಾವಿಗೆ ಪ್ರತೀಕಾರಕ್ಕಾಗಿ ಈ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದ್ದಾನೆ. ಯೂರೋಪ್‌ ರಾಷ್ಟ್ರಗಳಿಗೆ ವಲಸೆ ಬರುವ ಮುಸ್ಲಿಮರ ಸಂಖ್ಯೆಯನ್ನು ಇಳಿಕೆ ಮಾಡುವುದೇ ದಾಳಿಯ ಉದ್ದೇಶ ಎಂದಿದ್ದಾನೆ. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.