ಬಿಸಿಲಿಗೆ ಬಸವಳಿಯುತ್ತಿರುವ ಆರಕ್ಷಕರು!


Team Udayavani, Mar 16, 2019, 4:32 AM IST

16-march-2.jpg

ಕಲ್ಲುಗುಂಡಿ: ಸಿಮೆಂಟ್‌ ಶೀಟ್‌ನ ಕಟ್ಟಡ, ಇಕ್ಕಟ್ಟಾದ ಕೊಠಡಿ, ಅದರೊಳಗೆ ರಸ್ತೆಯ ಧೂಳು. ಇದು ಸುಳ್ಯ-ಮಡಿಕೇರಿ ಗಡಿಭಾಗದ ಕಲ್ಲುಗುಂಡಿಯಲ್ಲಿರುವ ಪೊಲೀಸ್‌ ಹೊರಠಾಣೆಯ ದಿನನಿತ್ಯದ ಸನ್ನಿವೇಶ.

ಪೊಲೀಸ್‌ ಸಿಬಂದಿ ಕೆಲಸ ಮುಗಿಸಿ ದಣಿವಾರಿಸಿಕೊಳ್ಳಲು ಈ ಹೊರಠಾಣೆಯಲ್ಲಿ ಸರಿಯಾದ ವ್ಯವಸ್ಥೆಗಳಿಲ್ಲ. ಸುಡುಬಿಸಿಲಿಗೆ ಕಟ್ಟಡಕ್ಕೆ ಅಳವಡಿಸಿರುವ ಸಿಮೆಂಟ್‌ ಶೀಟ್‌ ಬಿಸಿಯಾಗಿ ಸೆಕೆ ತಡೆಯಲಾಗದೆ ಸಿಬಂದಿಗೆ ಒಳಗೆ ಕುಳಿತುಕೊಳ್ಳಲೂ ಸಾಧ್ಯವಾಗುತ್ತಿಲ್ಲ. ಊರಿಗೆ ರಕ್ಷಣೆ ನೀಡುವ ಆರಕ್ಷಕರೇ ಇಲ್ಲಿ ಸೂಕ್ತ ರಕ್ಷಣೆಯಿಲ್ಲದೆ ಕೆಲಸ ನಿರ್ವಹಿಸುತ್ತಿದ್ದಾರೆ.

ಕಲ್ಲುಗುಂಡಿ ಹೊರಠಾಣೆ 2009ರಿಂದಲೇ ಕಾರ್ಯಾಚರಿಸುತ್ತಿದೆ. ಆರಂಭದಲ್ಲಿ ಶೀಟ್‌ನಿಂದ ನಿರ್ಮಿಸಲಾದ ಕೊಠಡಿಗೆ ಸಂಪಾಜೆ ಗ್ರಾ.ಪಂ. ವತಿಯಿಂದ ಕಟ್ಟಡವೊಂದನ್ನು ಕಟ್ಟಿ ಕೊಡಲಾಗಿದೆ. ಆದರೆ ಈ ಕಟ್ಟಡವು ಹಲವು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ದಾಖಲೆ ಸುರಕ್ಷತೆಗೆ, ಸಿಬಂದಿ ವಿಶ್ರಾಂತಿಗೆ, ಆಹಾರ ತಯಾರಿಕೆಗೆ ಸರಿಯಾದ ಸ್ಥಳಾವಕಾಶವಿಲ್ಲ. 

ಹೊಸ ಕಟ್ಟಡ ಮರೀಚಿಕೆ!
ಸುಳ್ಯ ಪೊಲೀಸ್‌ ಠಾಣೆಯ ವ್ಯಾಪ್ತಿಗೆ ಒಳಪಟ್ಟ ಕಲ್ಲುಗುಂಡಿ ಹೊರಠಾಣೆಗೆ ಹೊಸ ಕಟ್ಟಡಕ್ಕೆ ಬೇಡಿಕೆ ಇದ್ದರೂ, ಕನಸಾಗಿಯೇ ಉಳಿದಿದೆ. ಹೊರಠಾಣೆ ನಿರ್ಮಾಣಕ್ಕೆ ಸೂಕ್ತ ಜಾಗ ದೊರೆಯದಿರುವುದರಿಂದ ಕಟ್ಟಡ ನಿರ್ಮಾಣಕ್ಕೆ ಅನುದಾನವೂ ಬಿಡುಗಡೆಯಾಗಿಲ್ಲ. ಕಟ್ಟಡ ರಚನೆಗಾಗಿ ಚಟ್ಟೆಕಲ್‌ ರಸ್ತೆಯ ಬಿಎಸ್ಸೆನ್ನೆಲ್‌ ಟವರ್‌ ಬಳಿ ಸಂಪಾಜೆ ಗ್ರಾ.ಪಂ. 10 ಸೆಂಟ್ಸ್‌ ಜಾಗವನ್ನು ಕಾದಿರಿಸಿದ್ದು, ಇದು ಪೊಲೀಸ್‌ ಇಲಾಖೆಗೆ ಹಸ್ತಾಂತರವಾಗಿಲ್ಲ. ಹೊರಠಾಣೆಗೆ ಸೂಕ್ತ ಕಟ್ಟಡ ನಿರ್ಮಾಣಕ್ಕೆ ಮುಖ್ಯ ರಸ್ತೆಯ ಬದಿಯಲ್ಲಿ ನಿವೇಶನ ಮಂಜೂರು ಮಾಡಬೇಕೆನ್ನುವುದು ಇಲಾಖೆಯ ಆಗ್ರಹ.

ಕಾಯಕಲ್ಪ ಅಗತ್ಯ
ದೀರ್ಘ‌ ಸರಹದ್ದಿನ ಸುಳ್ಯ ಠಾಣಾ ವ್ಯಾಪ್ತಿಗೆ ಕಲ್ಲುಗುಂಡಿ ಹೊರಠಾಣೆ ಆವಶ್ಯಕ. ಸಂಪಾಜೆ, ಅರಂತೋಡು, ತೊಡಿಕಾನ ಗ್ರಾಮಗಳನ್ನು ಹೊಂದಿರುವ ಈ ಹೊರಠಾಣೆಯ ವ್ಯಾಪ್ತಿಯಲ್ಲಿ ಯಾವುದಾದರೂ ಘಟನೆ ಸಂಭವಿಸಿದರೆ ಸುಳ್ಯ ಠಾಣೆಯಿಂದ ಪೊಲೀಸರು ತೆರಳಲು ದೀರ್ಘ‌ ಸಮಯ ಬೇಕಾಗುತ್ತದೆ. ಸಮಾಜದ ಹಿತದೃಷ್ಟಿಯಿಂದ ಸ್ಥಾಪಿಸಲಾಗಿರುವ ಈ ಹೊರಠಾಣೆಗೆ ಸೂಕ್ತ ಕಾಯಕಲ್ಪ ಕಲ್ಪಿಸಬೇಕಾಗಿದೆ.

ಸುಳ್ಯ ಠಾಣೆ ಸಿಬಂದಿ
ಪೊಲೀಸ್‌ ಇಲಾಖೆಯಿಂದ ಅಗತ್ಯ ಸಿಬಂದಿ ನಿಯೋಜಿಸಲಾಗಿದ್ದರೂ ಅವರಿಗೆ ಸ್ಥಳಾವಕಾಶದ ಕೊರತೆ ಕಾಡುತ್ತಿದೆ. ಈ ಹೊರಠಾಣೆಗೆ ಒಬ್ಬ ಎಎಸ್‌ಐ, ಇಬ್ಬರು ಹೆಡ್‌ ಕಾನ್‌ಸ್ಟೆಬಲ್‌, 6 ಕಾನ್‌ಸ್ಟೆಬಲ್‌ ಹುದ್ದೆ ಮಂಜೂರಾಗಿದ್ದರೂ ಸದ್ಯ ಒಬ್ಬ ಹೆಡ್‌ಕಾನ್‌ಸ್ಟೆಬಲ್‌, ಇಬ್ಬರು ಕಾನ್‌ಸ್ಟೆಬಲ್‌, ಮೂವರು ಹೋಂಗಾರ್ಡ್‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿಗೆ ಸುಳ್ಯ ಠಾಣೆಯಿಂದ ಸಿಬಂದಿ ನಿಯೋಜನೆ ಮಾಡಲಾಗುತ್ತಿದೆ.

ವಿಶೇಷ ವರದಿ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.