ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮವಾದರೆ ಸುಮ್ಮನೆ ಬಿಡಲ್ಲ


Team Udayavani, Mar 16, 2019, 7:36 AM IST

sslc-akra.jpg

ಕೋಲಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಮತ್ತಿತರ ಅವ್ಯವಹಾರಗಳಿಗೆ ಅವಕಾಶ ನೀಡದಿರಿ, ಜಿಲ್ಲೆಗೆ ಯಾವುದೇ ಕಾರಣಕ್ಕೂ ಕಳಂಕ ಬಾರದಂತೆ ಎಚ್ಚರವಸಿ ಎಂದು ಜಿಪಂ ಸಿಇಒ ಜಿ.ಜಗದೀಶ್‌ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ತಮ್ಮ ಕಚೇರಿಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಲವಾರು ವರ್ಷಗಳ ಹಿಂದೆ ಕೆಲವು ಜಿಲ್ಲೆಗಳಲ್ಲಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳಿಗೆ ಶಿಕ್ಷಕರೇ ಅವಕಾಶ ನೀಡುತ್ತಿದ್ದ ಆರೋಪಗಳು ಇದ್ದವು. ಆದರೆ, ಈಗಿಲ್ಲ ಎಂದರು. ಪರೀಕ್ಷೆಯಲ್ಲಿ ಅಕ್ರಮ ನಡೆಸುವುದು, ವಿದ್ಯಾರ್ಥಿ ಡಿಬಾರ್‌ ಆಗುವುದು ಸೇರಿ ಯಾವುದೇ ರೀತಿಯ ಕಳಂಕ ಜಿಲ್ಲೆಗೆ ಬರುವುದಕ್ಕೆ ಅವಕಾಶ ನೀಡಬಾರದು, ಇಂತಹ ದೂರು ಬಂದರೆ ನಿಮ್ಮನ್ನು ಸುಮ್ಮನೇ ಬಿಡೋದಿಲ್ಲ ಎಂದು ಎಚ್ಚರಿಸಿದರು.  

ಭದ್ರತೆ ಕಲ್ಪಿಸಿ: ಪರೀಕ್ಷಾ ನೋಡಲ್‌ ಅಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌, ಉತ್ತರ ಪತ್ರಿಕೆಗಳನ್ನು ಎಲ್ಲಾ ಪರೀಕ್ಷೆಗಳು ಮುಗಿಯುವವರೆಗೂ ಡಿಡಿಪಿಐ ಕಚೇರಿಯ ಒಂದು ಕೊಠಡಿಯಲ್ಲಿ ಇರಿಸಲಾಗುವುದು. ಸುತ್ತಲೂ ಪೊಲೀಸ್‌, ಸಿಸಿಟಿವಿ ಸೇರಿದಂತೆ ಎಲ್ಲಾ ಭದ್ರತೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಜಿ.ಜಗದೀಶ್‌, ಚುನಾವಣೆ ಸ್ಟ್ರಾಂಗ್‌ರೂಂಗೆ ನೀಡುವಂತೆ ಹೆಚ್ಚಿನ ಭದ್ರತೆ ಒದಗಿಸಬೇಕು. ಯಾವುದೇ ಕಾರಣಕ್ಕೂ ಅಹಿತಕರ ಚಟುವಟಿಕೆಗಳಿಗೆ ಅವಕಾಶ ಬೇಡ ಎಂದು ಸೂಚಿಸಿದರು.

ಜಿಲ್ಲಾದ್ಯಂತ 71 ಕೇಂದ್ರಗಳಲ್ಲಿ ಪರೀಕ್ಷೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಜಿಲ್ಲೆಯ 71 ಕೇಂದ್ರಗಳಲ್ಲಿ ನಡೆಯಲಿದ್ದು, 20,194 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಖಾಸಗಿ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಇರುವುದರಿಂದ ಅಕ್ರಮಕ್ಕೆ ಅವಕಾಶಗಳಾಗುವ ಸಲುವಾಗಿ ಕೋಲಾರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮತ್ತು ಬಾಪೂಜಿ ಶಾಲೆಯ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರ ಎಂದು ಪರಿಗಣಿಸಲಾಗಿದೆ ಎಂದು ತಿಳಿಸಿದರು.

ಕೋಲಾರದ 17, ಬಂಗಾರಪೇಟೆ 10, ಕೆಜಿಎಫ್‌10, ಮಾಲೂರು 10, ಮುಳಬಾಗಿಲು 11, ಶ್ರೀನಿವಾಸಪುರದ 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 10,476 ಬಾಲಕರು, 9717 ಬಾಲಕಿಯರು (823 ಪುನರಾವರ್ತಿತ ಅಭ್ಯರ್ಥಿಗಳು ಸೇರಿ) ಬರೆಯಲಿದ್ದಾರೆ. ಕಳೆದ ಬಾರಿ ಡಿಬಾರ್‌ ಪ್ರಕರಣ ಯಾವುದೂ ಇಲ್ಲ. ಹಾಗೆಯೇ ಈ ಬಾರಿಯೂ ಸುಗಮವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಡಿಡಿಪಿಐ ಕೆ.ರತ್ನಯ್ಯ ಮಾತನಾಡಿ, ನಮ್ಮಲ್ಲಿಯೂ 6 ಮೌಲ್ಯಮಾಪನಾ ಕೇಂದ್ರಗಳನ್ನು ಕೋಲಾರದ ನಳಂದಾ, ಚಿನ್ಮಯ, ಸೆಂಟ್‌ಆನ್ಸ್‌, ಸುಗುಣ, ಮಹಿಳಾ ಸಮಾಜ, ಸೈನಿಕ್‌ ಪಬ್ಲಿಕ್‌ ಶಾಲೆಯಲ್ಲಿ ಎಲ್ಲಾ ಸೌಲಭ್ಯ ಒಳಗೊಂಡಂತೆ ವ್ಯವಸ್ಥೆ ಮಾಡಲಾಗಿದೆ. ಆಗಿಂದಾಗ್ಗೆ ಆನ್‌ಲೈನ್‌ಗೆ ತುಂಬುವುದರಿಂದಾಗಿ ಈ ಬಾರಿ 10 ದಿನಗಳ ಒಳಗೆ ಫಲಿತಾಂಶ ಹೊರಬರಲಿದೆ ಎಂದರು.

ಜಿಲ್ಲೆಯಲ್ಲಿನ 71 ಪರೀಕ್ಷಾ ಕೇಂದ್ರಗಳಿಗೂ ಓರ್ವ ಮೇಲ್ವಿಚಾರಕರನ್ನು, ಜಿಲ್ಲಾ ಮಟ್ಟದಲ್ಲಿ 3 ಜಾಗೃತ ತಂಡಗಳನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೇಲ್ವಿಚಾರಕರ ಅನವಶ್ಯಕ ಓಡಾಟ, ವಿದ್ಯಾರ್ಥಿಗಳು ಪರೀಕ್ಷಾ ಸಾಮಗ್ರಿ ಹೊರತುಪಡಿಸಿ ಎಲೆಕ್ಟ್ರಾನಿಕ್‌ ಸೇರಿದಂತೆ ಯಾವುದೇ ವಸ್ತುಗಳನ್ನು ತರದಂತೆ ಸೂಚನೆ ನೀಡಿರುವುದಾಗಿ ಹೇಳಿದರು.

ಸಭೆಯಲ್ಲಿ ಡಯೆಟ್‌ ಪ್ರಾಂಶುಪಾಲ ವಿಕ್ಟರ್‌, ಶಿಕ್ಷಣಾಧಿಕಾರಿ ಸಿ.ಆರ್‌.ಅಶೋಕ್‌, ಬಿಇಒಗಳಾದ ಕೆ.ಎಸ್‌.ನಾಗರಾಜಗೌಡ, ಕೆಂಪರಾಮು, ಮಾಧವರೆಡ್ಡಿ, ಕೆಂಪಯ್ಯ, ಇಸಿಒಗಳಾದ ಮುನಿರತ್ನಯ್ಯಶೆಟ್ಟಿ, ಸಿ.ಎಂ.ವೆಂಕಟರಮಣಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.