ಹೋಟೆಲ್ನಲ್ಲಿ ಹಣ ಸಿಕ್ಕ ಪ್ರಕರಣ: ನಾರಾಯಣಗೌಡಗೆ ನೋಟಿಸ್?
Team Udayavani, Mar 17, 2019, 12:30 AM IST
ಬೆಂಗಳೂರು/ಹಾವೇರಿ: ಇಲ್ಲಿನ ಹೋಟೆಲ್ವೊಂದರಲ್ಲಿ ಸಿಕ್ಕ ಕೋಟ್ಯಂತರ ರೂ.ಗಳ ಮೂಲ ಯಾವುದು ಎಂಬ ಮಾಹಿತಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಲೆಕ್ಕ ಸಹಾಯಕ ನಾರಾಯಣಗೌಡ ಬಿ.ಪಾಟೀಲ್ಗೆ ನೋಟಿಸ್ ನೀಡಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಸೋಮವಾರವೇ ಈ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಐಟಿ ಇಲಾಖೆ ಮೂಲಗಳು ಹೇಳಿವೆ.
ಈ ಬೆಳವಣಿಗೆಯ ಮಧ್ಯೆ ನಗರದ ಉದ್ಯಮಿಯೊಬ್ಬರು, ನಾರಾಯಣಗೌಡ ಬಳಿ ಪತ್ತೆಯಾಗಿರುವ ಹಣ ತಮ್ಮದೇ ಎಂದು ಐಟಿ ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ನೀಡುತ್ತೇವೆ ಎಂದೂ ಹೇಳಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಐಟಿ ಅಧಿಕಾರಿಗಳು ನಿರಾಕರಿಸಿದ್ದಾರೆ. ಶುಕ್ರವಾರವಷ್ಟೇ ನಾರಾಯಣಗೌಡ ತಂಗಿದ್ದ ನಗರದ ಖಾಸಗಿ ಹೋಟೆಲ್ನ ಕೊಠಡಿ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, 1.75 ಕೋಟಿ ರೂ.ಗೂ ಅಧಿಕ ಹಣ ವಶಕ್ಕೆ ತೆಗೆದುಕೊಂಡಿದ್ದರು.
ನಾರಾಯಣಗೌಡ ಅಮಾನತು
ಐಟಿ ದಾಳಿಗೆ ಒಳಗಾಗಿರುವ ನಾರಾಯಣಗೌಡ ಪಾಟೀಲ್ ರನ್ನು ಅಮಾನತು ಮಾಡಿ ಹಾವೇರಿ ಜಿಲ್ಲಾ ಪಂಚಾಯತ್ ಸಿಇಒ ಕೆ. ಲೀಲಾವತಿ ಆದೇಶ ಹೊರಡಿಸಿದ್ದಾರೆ. ಆದರೆ, ಅನಧಿಕೃತವಾಗಿ ಗೈರು ಹಾಜರಾಗಿರುವ ಕಾರಣದಿಂದಾಗಿ ಈ ಶಿಸ್ತು ಕ್ರಮ ತೆಗದುಕೊಳ್ಳಲಾಗಿದೆ. ಕಳೆದ ಎಂಟು ದಿನಗಳಿಂದ ಕಚೇರಿಗೆ ಗೈರು ಹಾಜರಾಗಿರುವ ಕುರಿತು ಪಾಟೀಲಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಅದಕ್ಕೆ ಉತ್ತರಿಸದ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ