ಇಂದಿನಿಂದ “ಕುಡುಬಿ’ ಹೋಳಿ ಹಬ್ಬ


Team Udayavani, Mar 17, 2019, 4:01 AM IST

kudubi.png

ಕುಂದಾಪುರ: ಫಾಲ್ಗುಣ ಮಾಸದ ಏಕಾದಶಿಯಿಂದ ಆರಂಭವಾಗಿ ಹುಣ್ಣಿಮೆಯವರೆಗೆ ವಿವಿಧ ಸಮುದಾ ಯದವರು ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ.  ಕುಡುಬಿ, ಖಾರ್ವಿ, ಮರಾಠಿ ಸಮಾಜದವರೆಲ್ಲರೂ ವಿಶಿಷ್ಟ ರೀತಿಯಲ್ಲಿ ಹೋಳಿ ಆಚರಿಸುತ್ತಾರೆ. ಅದರಲ್ಲೂ ಜಿಲ್ಲೆಯ ಕುಡುಬಿ ಜನಾಂಗದವರು 5 ದಿನಗಳ ಕಾಲ ತನ್ನದೇ ಆದ ರೀತಿಯಲ್ಲಿ ವೈಶಿಷ್ಟ ಪೂರ್ಣವಾಗಿ ಹಬ್ಬ ಆಚರಿಸುತ್ತಾರೆ.

ಹೋಳಿ ಹಬ್ಬದ ಆಚರಣೆಗೆ ಹಲವಾರು ವರ್ಷಗಳ ಇತಿಹಾಸವಿದೆ. ಫಾಲ್ಗುಣ ಮಾಸದ ಏಕಾದಶಿಯಿಂದ ಹುಣ್ಣಿಮೆ ಯವರೆಗೆ (ಅಂದರೆ ಈ ವರ್ಷ ಮಾ. 17 ರಿಂದ ಮಾ. 22ರವರೆಗೆ) ಕುಡುಬಿ ಜನಾಂಗದವರು ಹೋಳಿ ಹಬ್ಬವನ್ನು ಆಚರಿಸುತ್ತಾರೆ. 

ಹಬ್ಬದ ಆಚರಣೆ ಹೇಗೆ?
ಮುನ್ನ ದಿನವೇ ಹಬ್ಬದ ಸಿದ್ಧತೆಗಳು ಆರಂಭಗೊಂಡಿದ್ದು, ಏಕಾದಶಿಯ ದಿನ ಬೆಳಗಿನ ಜಾವಕ್ಕೂ ಮುನ್ನವೇ ಎಲ್ಲ ಕೂಡು ಕಟ್ಟುಗಳ ಸದಸ್ಯರೆಲ್ಲ ಆಯಾಯ ಭಾಗದ ಗುರಿಕಾರರ ಮನೆಗೆ ಬಂದು ಸೇರಬೇಕು. ಅಲ್ಲಿ ದೇವರ ಪ್ರತಿಷ್ಠಾಪನೆ, ಹಾಡುಗಳ ಮೂಲಕವೇ ವಿಧಿ- ವಿಧಾನ ಪೂರೈಸಿ, ಕೋಲಾಟ, ಗುಮ್ಮಟೆ ನೃತ್ಯ ಮಾಡಿ, ಬಳಿಕ ಗ್ರಾಮ ದೇವಸ್ಥಾನದಲ್ಲಿ ಕೋಲಾಟ, ಗುಮ್ಮಟೆ ನೃತ್ಯ ಮಾಡಲಾಗುತ್ತದೆ. ಬಳಿಕ ಮೊದಲೆರಡು ದಿನಗಳ ಕಾಲ ಹೊರ ಗ್ರಾಮಗಳ ಕುಡುಬಿ ಸಮುದಾಯದವರ ಮನೆಗೆ ಹೋಗಿ, 3 ನೇ ದಿನ ಅವರದೇ ಗ್ರಾಮಕ್ಕೆ ಬಂದು ಅಲ್ಲಿನ ಎಲ್ಲರ ಮನೆಗೂ ಹೋಗುತ್ತಾರೆ. 5 ನೇ ದಿನ ಮತ್ತೆ ಗುರಿಕಾರರ ಮನೆಯಲ್ಲಿ ಸೇರುತ್ತಾರೆ. 

46 ಕೂಡು ಕಟ್ಟುಗಳು
ಉಡುಪಿ ಜಿಲ್ಲೆಯಲ್ಲಿ ಒಟ್ಟು 46 ಕೂಡು ಕಟ್ಟುಗಳಿವೆ. ಮಂದಾರ್ತಿ, ಕೊಕ್ಕರ್ಣೆ, ಹಾಲಾಡಿ, ಬೆಳ್ವೆ, ಬಾಕೂìರು, ಮುದ್ದೂರು, ಯಳಂತೂರು, ಶೇಡಿಮನೆ, ಹಿಲಿಯಾಣ, ಕಕ್ಕುಂಜೆ ಕಡೆಗಳೆಲ್ಲ ಕುಡುಬಿ ಮನೆತನಗಳಿವೆ. ಕುಡುಬಿಯವರ ಪ್ರಕಾರ ಕೂಡು ಕಟ್ಟು ಅಂದರೆ 1 ಗ್ರಾಮ ಅಂತ ಅರ್ಥ. ಗ್ರಾಮಕ್ಕೊಬ್ಬರು ಗುರಿಕಾರರಿರುತ್ತಾರೆ. 46 ಕೂಡು ಕಟ್ಟುಗಳು ಸಂಖ್ಯೆಗೆ ಅನುಗುಣವಾಗಿ 2 ಅಥವಾ ಅದಕ್ಕಿಂತ ಹೆಚ್ಚು ಪಂಗಡಗಳಾಗಿ ವಿಂಗಡಿಸಿ ಮನೆ – ಮನೆಗೆ ತೆರಳಿ ಗುಮ್ಮಟೆ ಹಾಗೂ ಕೋಲಾಟ ನೃತ್ಯ ಪ್ರದರ್ಶಿಸುತ್ತಾರೆ.
 
ಹಬ್ಬದ ಮುಕ್ತಾಯ

5ನೇ ದಿನ ಎಲ್ಲರೂ ಗುರಿಕಾರರ ಮನೆಯಲ್ಲಿ ಸೇರಿ ಅಲ್ಲಿಗೆ ಹಬ್ಬ ಮುಕ್ತಾಯ. ಗೆಜ್ಜೆ, ವೇಷ ಭೂಷಣ ಕಳಚಿ, ಎಲ್ಲರೂ ಸಾಮೂಹಿಕವಾಗಿ ಸ್ನಾನ ಮಾಡುತ್ತಾರೆ. ಆ ಬಳಿಕ ಪರಿಕರಗಳಿಗೆಲ್ಲ ಗುರಿಕಾರರು ಪೂಜೆ ಮಾಡಿದ ಅನಂತರ ಬೆಂಕಿ (ಕಾಮದಹನ ಮಾಡುವುದು) ಹಾಯುತ್ತಾರೆ. ಬಳಿಕ ಸಾಮೂಹಿಕವಾಗಿ ಊಟ ಮಾಡಿದ ಬಳಿಕ ಯುವಕರು, ಮಕ್ಕಳೆಲ್ಲ ಸೇರಿ ಗ್ರಾಮದಲ್ಲಿರುವ ಮನೆ- ಮನೆಗೆ ಹೋಗಿ ಬಣ್ಣ ಹಚ್ಚುವ ಮೂಲಕ ಹೋಳಿ ಹಬ್ಬ ಮುಗಿಯಿತು ಎನ್ನುವ ಸಂದೇಶ ರವಾನಿಸುತ್ತಾರೆ. 

ಆಚರಣೆಯ ಉದ್ದೇಶ
ವ್ರತಾಚರಣೆಯಲ್ಲಿರುವ ಶಿವನು ಮನ್ಮಥನಿಂದಾಗಿ ವ್ರತಭಂಗವಾಗಿ ಕೋಪಗೊಂಡಿರುತ್ತಾನೆ. ಅವನ ಕೋಪ ತಣಿಸುವ ಕಾರಣಕ್ಕಾಗಿ ಬುಡಕಟ್ಟು ಸಮುದಾಯದ ಕುಡುಬಿ ಜನರೆಲ್ಲ ಸೇರಿ ಹೋಳಿ ಹಬ್ಬವನ್ನು ಆಚರಿಸುತ್ತಾರೆ ಎನ್ನುವ ಹಿನ್ನೆಲೆಯಿದೆ. ಇದರಿಂದ ಶಿವನ ಕೋಪವು ಶಾಂತವಾಗಿ ಒಳಿತಾಗುತ್ತದೆ ಎನ್ನುವ ಪ್ರತೀತಿಯಿದೆ. 

ವ್ರತಾಚರಣೆ ಮಹತ್ವ
ಹೋಳಿ ಹಬ್ಬಕ್ಕೆ ನಮ್ಮಲ್ಲಿ ವಿಶೇಷ ಅರ್ಥವಿದೆ. ಹಬ್ಬಕ್ಕೆ 5 ಅಥವಾ 3 ದಿನಕ್ಕೆ ಮುಂಚೆ ಕೋಲು ಹಿಡಿಯುವುದು ಅಂದರೆ ವ್ರತಾಚರಣೆ ಆರಂಭಗೊಳ್ಳುತ್ತದೆ. ಕೋಲು ಹಿಡಿದವರು ಚಪ್ಪಲಿ ಹಾಕಬಾರದು, ಭಾರ ಹೊರಬಾರದು, ಬೇರೆಯವರ ಮನೆಯಲ್ಲಿ ಊಟ ಮಾಡಬಾರದು, ಮದಿರೆ – ಮಾನಿನಿ – ಮಾಂಸ ಸೇವನೆ ಮಾಡಬಾರದು. 
ನಾರಾಯಣ ನಾಯ್ಕ,  ಗೋಳಿಯಂಗಡಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.