ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆ ನೀರಿನ ತತ್ವಾರ
Team Udayavani, Mar 17, 2019, 4:28 AM IST
ಕಾಪು: ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆ ನೀರಿಗಾಗಿ ಪರದಾಟ ಆರಂಭವಾಗಿದೆ. ಗ್ರಾ.ಪಂ. ವ್ಯಾಪ್ತಿಯ ಎಲ್ಲೂರು, ಕುಂಜೂರು ಮತ್ತು ಕುಕ್ಕಿಕಟ್ಟೆ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ
ಎರಡು ದಿನಕ್ಕೊಮ್ಮೆ ನೀರು ಪೂರೈಕೆ
ಎಲ್ಲೂರು ಗ್ರಾಮ ಪಂಚಾಯತ್ ವತಿಯಿಂದ ಸುಮಾರು 475 ಮನೆಗಳಿಗೆ ನಳ್ಳಿ ನೀರು ಪೂರೈಕೆಯಾಗುತ್ತಿದ್ದು, ಇದರಲ್ಲಿ ಎಲ್ಲೂರು, ಕುಂಜೂರು, ಕುಕ್ಕಿಕಟ್ಟೆಯ 300ಕ್ಕೂ ಅಧಿಕ ಮನೆಗಳಿಗೆ ಎರಡು ದಿನಕ್ಕೊಮ್ಮೆ ನೀರು ಬರುತ್ತಿದೆ.
ಎಲ್ಲೆಲ್ಲಿ ನೀರಿನ ಸಮಸ್ಯೆ
ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತೀ ವರ್ಷ ಗ್ರಾ.ಪಂ. ಕಛೇರಿ ಬಳಿಯ ಆಶ್ರಯ ಕಾಲನಿ, ಎಲ್ಲೂರು ಪೆಜತ್ತಕಟ್ಟೆ, ಕಂಚುಗರ ಕೇರಿ, ಅದಮಾರು ಪರಿಶಿಷ್ಟ ಜಾತಿ ಕಾಲನಿ, ಅದಮಾರು ಭಂಡಸಾಲೆ, ಮಡಿವಾಳ ತೋಟ, ಕುಂಜೂರು ದುರ್ಗಾ ನಗರ, ಮಾಣಿಯೂರು ಮತ್ತು ಕುಕ್ಕಿಕಟ್ಟೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ.
ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ಕಳೆದ ವರ್ಷ 13 ಲಕ್ಷ ರೂ. ವ್ಯಯಿಸಲಾಗಿದೆ. ಈ ವರ್ಷ 14 ಲಕ್ಷ ರೂ. ಅನುದಾನ ಕಾಯ್ದಿರಿಸಲಾಗಿದೆ. ನೀರಿನ ಶುಲ್ಕ ರೂಪದಲ್ಲಿ ಗ್ರಾಮಸ್ಥರಿಂದ 5.05 ಲಕ್ಷ ರೂ. ಸಂಗ್ರಹವಾಗುತ್ತಿದೆ. ಆದರೂ ಕೆಲವು ಪ್ರದೇಶಗಳಿಗೆ ನೀರು ಪೂರೈಕೆಯಾಗದೇ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ನೀರಿನ ಸಮಸ್ಯೆ ಪರಿಹರಿಸಲು ಸಮರ್ಪಕ ವ್ಯವಸ್ಥೆ
ಮಾಣಿಯೂರು, ಕುಕ್ಕಿಕಟ್ಟೆ ಮತ್ತು ಇರಂದಾಡಿಯಲ್ಲಿ ಖಾಸಗಿ ಮತ್ತು ಪಂಚಾಯತ್ ಅನುದಾನ ಬಳಸಿಕೊಂಡು 3 ಹೊಸ ಬೋರ್ವೆಲ್ಗಳನ್ನು ತೋಡಲಾಗಿದೆ. ಅದಮಾರು, ಎಲ್ಲೂರು ಮತ್ತು ಕುಂಜೂರಿನಲ್ಲಿ ಖಾಸಗಿ ಸಹಭಾಗಿತÌದೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗಿದ್ದು, ಆ ಭಾಗದ ಗ್ರಾಮಸ್ಥರು ಕಾರ್ಡ್ ಮತ್ತು ಕಾಯಿನ್ ಮೂಲಕ ತಮಗೆ ಅಗತ್ಯವಿರುವಷ್ಟು ಕುಡಿಯುವ ನೀರನ್ನು ಪಡೆದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
ಕಾರಣವೇನು ?
ಅಂತರ್ಜಲ ಕುಸಿತವಾಗಿರುವುದು, ಬೋರ್ವೆಲ್ಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದೇ ಇರುವುದು, ನೀರಿನ ಲಭ್ಯತೆ ಕಡಿಮೆಯಾಗಿರುವುದು, ಲೋ ವೋಲ್ಟೆàಜ್ ಸಮಸ್ಯೆಯಿಂದಾಗಿ ನೀರಿನ ಸಮಸ್ಯೆ ಬಿಗಡಾಯಿಸಿದೆ.
ಅಗತ್ಯ ಬಿದ್ದರೆ ಟ್ಯಾಂಕರ್ ನೀರು
ಮೂರು ವಾರ್ಡ್ಗಳಲ್ಲಿ ನೀರಿನ ತತ್ವಾರ ಎದುರಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಅಲ್ಲಿನ ಸಮಸ್ಯೆ ಪರಿಹಾರಕ್ಕೆ ತುರ್ತಾಗಿ ಸ್ಪಂದಿಸಲು ಪ್ರಯತ್ನಿಸಲಾಗುತ್ತಿದೆ. ಅದಮಾರು ಮಡಿವಾಳ ತೋಟದ ನೀರಿನ ಸಮಸ್ಯೆ ನಿವಾರಣೆಗೆ ಟಾಸ್ಕ್ಪೋರ್ಸ್ನಡಿ ಅನುದಾನ ಒದಗಿಸುವಂತೆ ಶಾಸಕರಿಗೆ ಮನವಿ ಮಾಡಲಾಗಿದೆ. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ.
ಮಮತಾ ಶೆಟ್ಟಿ, ಪಿ.ಡಿ.ಒ. ಎಲ್ಲೂರು ಗ್ರಾಮ ಪಂಚಾಯತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ
950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ
Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು
Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ
Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ