ಮನಪಾ: ಆನ್‌ಲೈನ್‌ ಸೇವೆಗೆ ಮೀನಮೇಷ !


Team Udayavani, Mar 17, 2019, 5:03 AM IST

17-marc1h-3.jpg

ಮಹಾನಗರ: ಮಹಾನಗರ ಪಾಲಿಕೆಯ ನಿಗದಿತ ಪೌರ ಸೇವೆಗಳು ಆನ್‌ ಲೈನ್‌ನಲ್ಲಿ ಲಭಿಸಲಿದೆ ಎಂಬ ಭರವಸೆ ನೀಡಿ ಮೂರು ತಿಂಗಳು ಕಳೆದರೂ ಆನ್‌ಲೈನ್‌ ಸೇವೆಗಳು ಮಾತ್ರ ಇನ್ನೂ ಜಾರಿಗೆ ಬಂದಿಲ್ಲ. ಜನವರಿಯಿಂದ ನೀರಿನ ಶುಲ್ಕ, ಖಾತಾ ಬದಲಾಣೆ, ಖಾತಾ ನೋಂದಣಿ, ನೀರಿನ ಸಂಪರ್ಕ, ಯುಜಿಡಿ ಸಂಪರ್ಕ, ಪುರಭವನದ ಬಾಡಿಗೆ, ಮೈದಾನದ ಬಾಡಿಗೆ ಸಹಿತ ಮಂಗಳೂರು ಮಹಾನಗರ ಪಾಲಿಕೆಯಿಂದ 10 ಸೇವೆಗಳನ್ನು ಆನ್‌ಲೈನ್‌ ಮೂಲಕ ವ್ಯವಹರಿಸಬಹುದು ಎಂಬುದಾಗಿ ಪಾಲಿಕೆ ಈ ಹಿಂದೆ ತಿಳಿಸಿತ್ತು. ಆದರೆ ಮಾರ್ಚ್‌ ಆದರೂ ಆನ್‌ಲೈನ್‌ ಸೇವೆ ಇನ್ನೂ ಆರಂಭವಾಗಿಲ್ಲ.

ಪ್ರಸ್ತುತ ನೀರಿನ ಬಿಲ್‌, ಪುರಭವನ ಬಾಡಿಗೆ ಸೇರಿದಂತೆ ಬಹುತೇಕ ಸೇವೆಗಳಿಗಾಗಿ ಜನರು ಪಾಲಿಕೆ ಕಚೇರಿ ಅಥವಾ ಮಂಗಳೂರು ಒನ್‌ಗೆ ತೆರಳಬೇಕಾಗಿದೆ. ಅಲ್ಲಿ ಗಂಟೆಗಟ್ಟಲೆ ನಿಂತು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಬೇಕಾಗಿದೆ. ಇದಕ್ಕೆ ಮುಕ್ತಿ ನೀಡುವ ನಿಟ್ಟಿನಲ್ಲಿ ಆನ್‌ಲೈನ್‌ ಸೇವೆ ಆರಂಭಿಸಲಾಗುವುದು ಎಂಬುದಾಗಿ ಪಾಲಿಕೆ ಹೇಳುತ್ತಾ ಬಂದಿದ್ದರೂ ಈವರೆಗೆ ಆನ್‌ಲೈನ್‌ ಸೇವೆ ಆರಂಭವಾಗಿಲ್ಲ.

ಬಿಲ್‌ ಪಾವತಿಸುವುದೇ ತಲೆನೋವು
ಮಹಾನಗರ ಪಾಲಿಕೆಯ ವಿವಿಧ ಸೇವೆಗಳ ಬಿಲ್‌ಗ‌ಳನ್ನು ಪಾವತಿಸುವುದೇ ದೊಡ್ಡ ತಲೆನೋವು. ಕನಿಷ್ಠ ನೀರಿನ ಬಿಲ್‌ ಪಾವತಿಸಲು ಮಂಗಳೂರು ಒನ್‌ ನಲ್ಲಿ ಗಂಟೆಗಟ್ಟಲೆ ಸಾಲು ನಿಲ್ಲಬೇಕಿದ್ದು, ಇದರಿಂದ ಉದ್ಯೋಗಕ್ಕೆ ತೆರಳುವ ಜನರು ಕಷ್ಟ ಅನುಭವಿಸುಂತಾಗಿದೆ. ಇದಕ್ಕೆ ಮುಕ್ತಿ ನೀಡಲು ನೀರಿನ ಬಿಲ್‌, ಖಾತಾ ವರ್ಗಾವಣೆ ಸಹಿತ ಇತರ ಸೇವೆಗಳನ್ನು ಆನ್‌ಲೈನ್‌ ಮೂಲಕ ಪಾವತಿಸಲು ಪಾಲಿಕೆ ನಿರ್ಧರಿಸಿತ್ತು. ಇದರಂತೆ ತುಮಕೂರು ನಗರಪಾಲಿಕೆಯಲ್ಲಿ ಈಗಾಗಲೇ ಕೈಗೊಂಡಿರುವ ಆನ್‌ಲೈನ್‌ ವ್ಯವಸ್ಥೆಗಳನ್ನು ಮಂಗಳೂರಿನಲ್ಲಿಯೂ ಅಳವಡಿಸುವ ಬಗ್ಗೆ ಪಾಲಿಕೆ ಚಿಂತಿಸಿತ್ತು. ಈ ಮೂಲಕ ಎಲ್ಲ ಪೌರ ಸೇವೆಗಳು ಜನರಿಗೆ ಕುಳಿತಲ್ಲಿಯೇ ಸಿಗುವಂತೆ ಮಾಡುವ ಪರಿಕಲ್ಪನೆ ಇರಿಸಲಾಗಿತ್ತು. ಆದರೆ ಅದಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ.

ಮೇಯರ್‌ ಪತ್ರಿಕಾಗೋಷ್ಠಿಯಲ್ಲಿ ದಿನ ಘೋಷಣೆ
ಪಾಲಿಕೆಯ ವಿವಿಧ ಸೇವೆಗಳನ್ನು ಆನ್‌ ಲೈನ್‌ ಮೂಲಕ ಮಾಡುವ ಯೋಜ ನೆಗೆ ಪಾಲಿಕೆ ಸಿದ್ಧತೆ ನಡೆಸಿದರೂ ಬಿಡುಗಡೆಯಾಗಿರಲಿಲ್ಲ. ಈ ನಡುವೆ ಮಾಜಿ ಮೇಯರ್‌ ಭಾಸ್ಕರ್‌ ಕೆ. ಅವರು ತನ್ನ ಆಡಳಿತಾವಧಿಯಲ್ಲಿ ನಡೆಸಿದ ಕೊನೆಯ ಪತ್ರಿಕಾಗೋಷ್ಠಿಯಲ್ಲಿ ಆಯುಕ್ತ ಮಹಮ್ಮದ್‌ ನಝೀರ್‌, ಫೆ. 18ರಿಂದ 10 ಆನ್‌ ಲೈನ್‌ ಸೇವೆಗಳಿಗೆ ಮರುಚಾಲನೆ ನೀಡಲಾಗುವುದು ಎಂದು ತಿಳಿಸಿದ್ದರು. ಆದರೆ ಮಾರ್ಚ್‌ ತಿಂಗಳಾದರೂ ಆನ್‌ಲೈನ್‌ ಸೇವೆ ಆರಂಭವಾಗಿಲ್ಲ.

ಪಾಲಿಕೆಯ ಎಲ್ಲ ಪೌರ ಸೇವೆಗಳನ್ನು ಆನ್‌ಲೈನ್‌ ಮೂಲಕ ಮಾಡಲು ಸಾಪ್ಟ್ ವೇರ್‌ ಮೇಲ್ದರ್ಜೆಗೇರಿಸುವ ಕೆಲಸ ಪ್ರಗತಿಯಲ್ಲಿದೆ. ಭಾಗಶಃ ಕೆಲಸ ಮುಗಿದಿದೆ. ಶೀಘ್ರವೇ ಹೊಸ ಆ್ಯಪ್‌ ಬಿಡುಗಡೆ ಮಾಡಿ ಅದರ ಮೂಲಕವೇ ಮೊಬೈಲ್‌ ಸಹಾಯದಿಂದ ತೆರಿಗೆ ಪಾವತಿ ಸೇರಿದಂತೆ ಪೌರ ಸೇವೆಗಳು ಲಭ್ಯವಾಗಲಿದೆ ಎಂದು ಪಾಲಿಕೆ ಅಧಿಕಾರಿ ಉದಯವಾಣಿಗೆ ತಿಳಿಸಿದ್ದಾರೆ. 

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.