“ಹೌರಾ ಬ್ರಿಡ್ಜ್’ ಮೇಲೆ ನಿಂತಳು “ದೇವಕಿ’


Team Udayavani, Mar 17, 2019, 5:41 AM IST

devaki.jpg

ಸಾಮಾನ್ಯವಾಗಿ ಚಿತ್ರದ ಟೈಟಲ್‌ ಅನೌನ್ಸ್‌ ಆಗಿ ಚಿತ್ರೀಕರಣ ಶುರುವಾದ ನಂತರ ಚಿತ್ರದ ನಾಯಕಿ, ಚಿತ್ರಕಥೆ, ಕಲಾವಿದರು, ತಂತ್ರಜ್ಞರು ಬದಲಾವಣೆಯಾಗುವ ಸುದ್ದಿಯನ್ನು ನೀವು ಆಗಾಗ್ಗೆ ಚಿತ್ರರಂಗದಲ್ಲಿ ಕೇಳಿರುತ್ತೀರಿ. ಆದರೆ ಇಲ್ಲೊಂದು ಚಿತ್ರತಂಡ, ತನ್ನ ಟೈಟಲ್‌ ಅನೌನ್ಸ್‌ ಮಾಡಿ ಚಿತ್ರೀಕರಣವನ್ನೂ ಮುಗಿಸಿ, ಇನ್ನೇನು ಚಿತ್ರವನ್ನು ತೆರೆಗೆ ತರಬೇಕು ಅನ್ನುವಷ್ಟರಲ್ಲಿ ಚಿತ್ರದ ಟೈಟಲ್‌ ಅನ್ನೇ ಬದಲಾವಣೆ ಮಾಡಿದೆ. ಅಂದಹಾಗೆ ಆ ಚಿತ್ರದ ಹೆಸರು “ದೇವಕಿ’ 

ಸುಮಾರು ಒಂದೂವರೆ ವರ್ಷಗಳ ಹಿಂದೆ “ಹೌರಾ ಬ್ರಿಡ್ಜ್’ ಎನ್ನುವ ಹೆಸರಿನಲ್ಲಿ ಶೂಟಿಂಗ್‌ ಆರಂಭಿಸಿದ್ದ ಈ ಚಿತ್ರ ತೆರೆಗೂ ಬರೋದಕ್ಕೂ ಮುನ್ನ “ದೇವಕಿ’ ಎಂದು ಮರುನಾಮಕರಣಗೊಂಡಿದೆ. ಅಂದಹಾಗೆ, ಚಿತ್ರದ ಫ‌ಸ್ಟ್‌ ಕಾಪಿಯನ್ನು ನೋಡಿದ ನಂತರ ಚಿತ್ರತಂಡ “ಹೌರಾ ಬ್ರಿಡ್ಜ್’ ಎಂಬ ಟೈಟಲ್‌ಗಿಂತ “ದೇವಕಿ’ ಎಂಬ ಟೈಟಲ್‌ ಚಿತ್ರಕ್ಕೆ ಸೂಕ್ತವಾಗಿದೆ ಎನಿಸಿದ್ದರಿಂದ ಟೈಟಲ್‌ನಲ್ಲಿ ಇಂಥದ್ದೊಂದು ಮಹತ್ತರ ಬದಲಾವಣೆ ಮಾಡಿಕೊಂಡಿದೆಯಂತೆ. 

ಇನ್ನೊಂದು ವಿಶೇಷವೆಂದರೆ, “ದೇವಕಿ’ ಚಿತ್ರದಲ್ಲಿ ನಟಿ ಪ್ರಿಯಾಂಕ ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಕಂ ನಿರ್ದೇಶಕ ರಿಯಲ್‌ ಸ್ಟಾರ್‌ ಉಪೇಂದ್ರ – ಪ್ರಿಯಾಂಕ ದಂಪತಿಯ ಪುತ್ರಿ ಐಶ್ವರ್ಯಾ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದು, ತಾಯಿ-ಮಗಳು ಈ ಚಿತ್ರದಲ್ಲಿ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಹಿಂದೆ “ಮಮ್ಮಿ ಸೇವ್‌ ಮೀ’ ಹಾರರ್‌ ಚಿತ್ರದಲ್ಲಿ ಪ್ರೇಕ್ಷಕರನ್ನು ಬೆಚ್ಚಿ ಬೀಳಿಸಿದ್ದ ಯುವ ನಿರ್ದೇಶಕ ಲೋಹಿತ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಚಿತ್ರಕ್ಕೆ ಹೆಚ್‌.ಸಿ ವೇಣು ಛಾಯಾಗ್ರಹಣ, ಸಿ. ರವಿಚಂದ್ರನ್‌ ಸಂಕಲನ, ನೋಬಿನ್‌ ಪಾಲ್‌ ಸಂಗೀತ ಸಂಯೋಜನೆಯಿದೆ. “ಚೈಲ್ಡ್ ಟ್ರಾಕಿಂಗ್‌’ ಮಾಫಿಯಾ ಸುತ್ತ ನಡೆಯುವ ಕಥೆ ಹೊಂದಿರುವ ಈ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ ದೇವಕಿ ಪಾತ್ರದಲ್ಲಿ, ನಟ ಕಿಶೋರ್‌ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ “ದೇವಕಿ’ ಚಿತ್ರದ ಚಿತ್ರದ ಮೊದಲ ಟೀಸರ್‌ ಅನ್ನು ನಟ ಉಪೇಂದ್ರ, ಮತ್ತು ಚಿತ್ರದ ಫ‌ಸ್ಟ್‌ಲುಕ್‌ ಅನ್ನು ನಟಿ ಪಾರುಲ್‌ ಯಾದವ್‌ ಬಿಡುಗಡೆ ಮಾಡಿದ್ದಾರೆ.

ಇದೇ ವೇಳೆ ಹಾಜರಿದ್ದ ಚಿತ್ರತಂಡ “ದೇವಕಿ’ ಚಿತ್ರದ ವಿಶೇಷತೆಗಳ ಬಗ್ಗೆ ಮಾತನಾಡಿತು. ಕೋಲ್ಕತ್ತಾ, ಬೆಂಗಳೂರು ಸುತ್ತಮುತ್ತ “ದೇವಕಿ’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗಿರುವ “ದೇವಕಿ’ ಚಿತ್ರವನ್ನು ಬೆಂಗಾಲಿ, ತೆಲುಗು ಭಾಷೆಗಳಿಗೂ ಡಬ್‌ ಮಾಡುವ ಯೋಚನೆಯಲ್ಲಿದೆ ಚಿತ್ರತಂಡ. “ಆರ್‌.ಸಿ.ಎಸ್‌ ಸಿನಿಮಾಸ್‌’ ಬ್ಯಾನರ್‌ನಲ್ಲಿ ರವೀಶ್‌ ಆರ್‌.ಸಿ ಮತ್ತು ಅಕ್ಷಯ್‌ ಸಿ.ಎಸ್‌ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದು, ಇದೇ ಏಪ್ರಿಲ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ದೇವಕಿ ಮೆಚ್ಚಿದ ಪುರಿ ಜಗನ್ನಾಥ್‌: ಬಿಡುಗಡೆಯಾಗಿರುವ “ದೇವಕಿ’ ಚಿತ್ರದ ಟೀಸರ್‌ಗೆ ಸೋಷಿಯಲ್‌ ಮೀಡಿಯಾಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ವೇಳೆ, “ದೇವಕಿ’ ಚಿತ್ರದ ಟೀಸರ್‌ ಅನ್ನು ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಹಂಚಿಕೊಂಡಿರುವ ಟಾಲಿವುಡ್‌ನ‌ ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್‌, ಚಿತ್ರದ ಟೀಸರ್‌ ತುಂಬ ಪ್ರಾಮಿಸಿಂಗ್‌ ಆಗಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. 

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.