ಮನೆಗೆ ವಾಯುಸೇನಾ ಕಮಾಂಡರ್‌ ಅಭಿನಂದನ್‌ ಹೆಸರಿಟ್ಟ ಅಭಿಮಾನಿ


Team Udayavani, Mar 17, 2019, 5:59 AM IST

17-marc1h-6.jpg

ಉಪ್ಪಿನಂಗಡಿ : ಸುಂದರ ಮನೆ ಕಟ್ಟುವುದು ಕನಸು ಹೇಗೋ ಅದಕ್ಕೊಂದು ಚೆಂದದ ಹೆಸರಿಡುವುದೂ ದೊಡ್ಡ ಕನಸೇ. ಕೆಲವರು ದೇವರ ಹೆಸರು, ಮಕ್ಕಳ ಹೆಸರು, ಪ್ರಕೃತಿಯ ಹೆಸರುಗಳನ್ನಿಟ್ಟು ಖುಷಿ ಕಾಣುತ್ತಾರೆ. ಆದರೆ ಇಲ್ಲಿನ ವ್ಯಕ್ತಿಯೊಬ್ಬರು ತಮ್ಮ ಮನೆಗೆ ವೀರ ಯೋಧ ಅಭಿನಂದನ್‌ ವರ್ಧಮಾನ್‌ ಹೆಸರನ್ನಿಟ್ಟು, ಭಾರತೀಯ ಸೇನೆಯ ಸಾಹಸಕ್ಕೆ ಗೌರವ ಸಲ್ಲಿಸಿದ್ದಾರೆ.

ಉಪ್ಪಿನಂಗಡಿ ಬಳಿಯ ಬಾರ್ಯ ಗ್ರಾಮದ ಸುಣ್ಣಾಜೆ ಅಣ್ಣು ಪೂಜಾರಿ ಮತ್ತು ಸುಂದರಿ ದಂಪತಿಯ ಪುತ್ರ ಕುಶಾಲಪ್ಪ ಅವರು ಮನೆ ಕಟ್ಟಿಸುತ್ತಿದ್ದು, ಅದಕ್ಕೆ ಅಭಿನಂದನ್‌ ಹೆಸರಿಟ್ಟಿದ್ದಾರೆ. ಕಳೆದ ತಿಂಗಳು ಭಾರತ ಮತ್ತು ಪಾಕಿಸ್ಥಾನದ ಯುದ್ಧ ವಿಮಾನಗಳ ನಡುವೆ ನಡೆದ ಸಂಘರ್ಷದಲ್ಲಿ ವಿಮಾನ ಪತನಗೊಂಡು ಪಾಕಿಸ್ಥಾನಿ ಸೈನಿಕರ ಕೈಗೆ ಸಿಕ್ಕಿದ್ದ ಭಾರತೀಯ ವಾಯು ಸೇನೆಯ ವಿಂಗ್‌ ಕಮಾಂಡರ್‌ ಅಭಿನಂದನ್‌, ಪಾಕಿಸ್ಥಾನಕ್ಕೆ ಯಾವುದೇ ಮಾಹಿತಿ ಬಿಟ್ಟುಕೊಡದೆ ಸಾಹಸ ಪ್ರದರ್ಶಿಸಿದ್ದರು. ಆ ಮೂಲಕ ಕೋಟ್ಯಂತರ ಭಾರತೀಯರ ಮನಗೆದ್ದಿದ್ದರು. ಹೀಗಾಗಿ, ಅವರ ಹೆಸರನ್ನೇ ತಮ್ಮ ಹೊಸ ಮನೆಗೆ ಇಡುವುದು ಸೂಕ್ತ ಎಂದು ಕುಶಾಲಪ್ಪ ಹೇಳಿದಾಗ, ಮನೆ ಮಂದಿಯೂ ಸಮ್ಮತಿಸಿದರು.

ಎ. 10: ಗೃಹಪ್ರವೇಶ
ಈಗ ಮನೆ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಮನೆ ಮುಂಭಾಗದ ಗೋಡೆಯ ಮೇಲೆ ಗ್ರಾನೈಟ್‌ನಲ್ಲಿ ಅಭಿನಂದನ್‌ ವರ್ಧಮಾನ್‌ ಭಾವಚಿತ್ರ ಹಾಗೂ ಹೆಸರನ್ನು ಕೆತ್ತಿಸಲು ನಿರ್ಧರಿಸಿದ್ದಾರೆ. ಕುಶಾಲಪ್ಪ ಅವರದು ಕೃಷಿ ಕುಟುಂಬ. ಉಪ್ಪಿನಂಗಡಿಯಲ್ಲಿ ಕೆ.ಜೆ. ಪವರ್‌ ಲಾಂಡ್ರಿ ನಡೆಸುತ್ತಿದ್ದಾರೆ. ಎ. 10ರಂದು ಗೃಹಪ್ರವೇಶಕ್ಕೆ ನಿಗದಿಯಾಗಿದೆ. ಅಭಿನಂದನ್‌ ಚಿತ್ರವಿರುವ ಗೃಹಪ್ರವೇಶದ ಆಮಂತ್ರಣ ಪತ್ರವೂ ಸಿದ್ಧವಾಗಿದೆ. ಹೆತ್ತವರಲ್ಲದೆ, ಪತ್ನಿ ದೇವಿಕಾ, ಮಕ್ಕಳಾದ ಭುಕ್ಷಿತಾ ಮತ್ತು ನವೀತ್‌ ಈ ಮನೆಯಲ್ಲಿ ಜೀವನ ನಡೆಸಲಿದ್ದಾರೆ.

ಇದು ಸೇನೆಗೆ ಸಲ್ಲಿಸುವ ಗೌರವ
ನನ್ನ ತಂದೆ ಸೇನೆ ಸೇರುವ ಬಯಕೆ ಹೊಂದಿದ್ದರು. ಅದು ಈಡೇರಲಿಲ್ಲ. ನನಗೂ ಚಿಕ್ಕಂದಿನಿಂದಲೂ ಸೇನೆಯ ಕುರಿತು ಅತೀವ ಅಭಿಮಾನ. ಆದರೆ, ಕಾರಣಾಂತರಗಳಿಂದ ಶಿಕ್ಷಣ ಮೊಟಕುಗೊಂಡಿದ್ದರಿಂದ ಸೇನೆ ಸೇರುವ ಆಸೆ ಫ‌ಲಿಸಲಿಲ್ಲ. ಈಗ ಮನೆ ಕಟ್ಟುವ ಸಂದರ್ಭ ವೀರಯೋಧ ಅಭಿನಂದನ್‌ ಅವರ ಶೌರ್ಯ ಸ್ಫೂರ್ತಿ ನೀಡಿದೆ. ಮನೆಗೆ ಅಭಿನಂದನ್‌ ಹೆಸರಿಡಲು ನಿರ್ಧರಿಸಿದೆ. ಮನೆಯವರೂ ಒಪ್ಪಿದರು. ಸೇನೆಗೆ ನಾನು ಸಲ್ಲಿಸುವ ಗೌರವ ಇದು.
– ಕುಶಾಲಪ್ಪ, 
ಮನೆಯ ಮಾಲಕರು

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.