ಟ್ವಿಟ್ಟರ್‌ ನಲ್ಲಿ ‘ಚೌಕಿದಾರ’ರಾದ ಕಮಲ ನಾಯಕರು!


Team Udayavani, Mar 17, 2019, 7:40 AM IST

chowkidar-17-3.jpg

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವಂತೆಯೇ ವಿವಿಧ ರಾಜಕೀಯ ಪಕ್ಷಗಳ ನಾಯಕರ ನಡುವೆ ಮಾತಿನ ಸಮರ, ವ್ಯಂಗ್ಯ, ಟೀಕೆಗಳೂ ಹೆಚ್ಚಾಗುತ್ತಿವೆ. ಈ ಹಿಂದೆ 2014ರಲ್ಲಿ ನರೇಂದ್ರ ಮೋದಿಯವರನ್ನು ‘ಚಾಯ್‌ ವಾಲಾ’ ಎಂದು ಟೀಕಿಸಿ ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕಿತ್ತು. ಇದೇ ಟೀಕೆಯನ್ನು ತನ್ನ ಪ್ರಮುಖ ಪ್ರಚಾರ ತಂತ್ರವಾಗಿ ಬಳಸಿಕೊಂಡಿದ್ದ ಬಿ.ಜೆ.ಪಿ.ಯ ಲೋಕ ಗೆಲುವಿಗೆ ‘ಚಾಯ್‌ ವಾಲಾ’ ಟೀಕೆಯೂ ಪ್ರಮುಖ ಕಾರಣವಾಗಿತ್ತು ಎಂಬುದನ್ನು ಮರೆಯುವಂತಿಲ್ಲ. ಈ ಬಾರಿಯೂ ಮರಳಿ ಅಧಿಕಾರಕ್ಕೇರಲು ಶತಾಯಗತಾಯ ಪ್ರಯತ್ನಿಸುತ್ತಿರುವ ಭಾರತೀಯ ಜನತಾ ಪಕ್ಷವು ಮುಖ್ಯವಾಗಿ ಯುವ ಹಾಗೂ ನಗರ ಪ್ರದೇಶದ ಮತದಾರರನ್ನು ಗಮನದಲ್ಲಿಟ್ಟುಕೊಂಡು ಹಲವಾರು ಮಾದರಿಯ ಪ್ರಚಾರ ತಂತ್ರಗಳನ್ನು ರೂಪಿಸಿಕೊಂಡಿದೆ. ಇದಕ್ಕೆ ಹೊಸ ಸೇರ್ಪಡೆ ‘ಚೌಕಿದಾರ್‌’ ಅಭಿಯಾನ.
 

ಏನಿದು ‘ಚೌಕಿದಾರ್‌’ ಅಭಿಯಾನ?
ಪ್ರಧಾನಿ ನರೆಂದ್ರ ಮೋದಿಯವರು ತಾವು ಅಧಿಕಾರ ವಹಿಸಿಕೊಂಡ ಪ್ರಾರಂಭದಲ್ಲಿ ತಮ್ಮನ್ನು ಈ ದೇಶದ ‘ಚೌಕಿದಾರ’ ಎಂದು ಕರೆದುಕೊಂಡಿದ್ದರು. ಮತ್ತೆ ಇತ್ತೀಚೆಗೆ ಪುಲ್ವಾಮ ಉಗ್ರದಾಳಿಗೆ ನಮ್ಮ ವಾಯುಸೇನೆ ಸೂಕ್ತ ಪ್ರತ್ಯುತ್ತರ ನೀಡಿದ ಬಳಿಕ ಪ್ರಧಾನಿ ಮೋದಿ ಅವರು ಮತ್ತೆ ‘ಚೌಕಿದಾರ್‌’ ಪದವನ್ನು ಬಳಸುವ ಮೂಲಕ, ‘ಈ ದೇಶ ಚೌಕಿದಾರನ ಕೈಯಲ್ಲಿ ಸುರಕ್ಷಿತವಾಗಿದೆ…’ ಎಂದು ನುಡಿದಿದ್ದರು. ಆದರೆ ಪ್ರತಿಪಕ್ಷ ಕಾಂಗ್ರೆಸ್‌ ಮತ್ತು ಅದರ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿಜಯ್‌ ಮಲ್ಯ, ನೀರವ್‌ ಮೋದಿ, ರಫೇಲ್‌ ಮುಂತಾದ ಪ್ರಕರಣಗಳನ್ನು ಉಲ್ಲೇಖೀಸಿ ಪ್ರಧಾನಿ ಅವರ ‘ಚೌಕಿದಾರ’ ಹೇಳಿಕೆಯನ್ನು ಟೀಕೆ ಮಾಡುತ್ತಲೇ ಬಂದಿದ್ದರು.

ಇದೀಗ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಈ ವಿಷಯವನ್ನೇ ಸವಾಲಾಗಿ ತೆಗೆದುಕೊಂಡಿರುವ ಭಾರತೀಯ ಜನತಾ ಪಕ್ಷವು ಇದೀಗ ಹೊಸ ಅಭಿಯಾನವೊಂದನ್ನು ಹುಟ್ಟುಹಾಕಿದ್ದು ಪ್ರಧಾನಿ ಮೋದಿಯವರ ‘ಚೌಕಿದಾರ’ ಹೇಳಿಕೆಯನ್ನು ಸರ್ವತ್ರ ಬೆಂಬಲಿಸಲು ಪಕ್ಷವು ನಿರ್ಧರಿಸಿದೆ. ಅದರಂತೆ ಪ್ರಧಾನಿ ಮೋದಿಯವರ ಕೆಲಸಗಳನ್ನು ಬೆಂಬಲಿಸುವವರೆಲ್ಲಾ ತಮ್ಮನ್ನು ತಾವು ‘ಚೌಕಿದಾರ’ರೆಂದು ಕರೆದುಕೊಳ್ಳುವಂಥೆ ಕರೆ ನೀಡಿದೆ. ಇಷ್ಟಕ್ಕೆ ಸುಮ್ಮನಾಗದ ಕೇಸರಿ ಪಕ್ಷದ ನಾಯಕರು ತಮ್ಮ ತಮ್ಮ ಟ್ವಿಟ್ಟರ್‌ ಅಕೌಂಟ್‌ ಗಳಲ್ಲಿ ತಮ್ಮ ಹೆಸರಿನ ಹಿಂದೆ ಚೌಕಿದಾರ ಎಂದು ಬರೆದುಕೊಂಡಿದ್ದಾರೆ. ಉದಾಹರಣೆಗೆ, ಪ್ರಧಾನಿ ಮೋದಿ ಅವರ ಅಧಿಕೃತ ಅಕೌಂಟ್‌ ಚೌಕಿದಾರ್‌ ನರೇಂದ್ರ ಮೋದಿ ಎಂದು ಬದಲಾಗಿದೆ, ಇನ್ನುಳಿದಂತೆ ಚೌಕಿದಾರ್‌ ಅಮಿತ್‌ ಶಾ, ಚೌಕಿದಾರ್‌ ಪಿಯೂಷ್‌ ಗೋಯಲ್‌, ಚೌಕಿದಾರ್‌ ಸ್ಮತಿ ಇರಾನಿ, ಚೌಕಿದಾರ್‌ ಡಾ. ಹರ್ಷ ವರ್ಧನ್‌, ಚೌಕಿದಾರ್‌ ರವಿಶಂಕರ್‌ ಪ್ರಸಾದ್‌, ಚೌಕಿದಾರ್‌ ಪ್ರಕಾಶ್‌ ಜಾವ್ಡೇಕರ್‌ ಹೀಗೆ ಕೇಂದ್ರದ  ಘಟಾನುಘಟಿ ಭಾ.ಜ.ಪ. ನಾಯಕರೆಲ್ಲರೂ ‘ಚೌಕಿದಾರ್‌’ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.


ಇಷ್ಟು ಮಾತ್ರವಲ್ಲದೇ ಚೌಕಿದಾರ್‌ ಇಂಡಿಯಾ ಎಂಬ ಹೊಸ ಟ್ವಿಟ್ಟರ್‌ ಅಕೌಂಟ್‌ ಅನ್ನೂ ಸಹ ಪ್ರಾರಂಭಿಸಲಾಗಿದೆ. ಮತ್ತು ಆ ಮೂಲಕ ದೇಶಾದ್ಯಂತ ನರೇಂದ್ರ ಮೋದಿ ಮತ್ತು ಎನ್‌.ಡಿ.ಎ. ಸರಕಾರದ ಕೆಲಸಗಳನ್ನು ಬೆಂಬಲಿಸುವವರೆಲ್ಲರೂ ‘ಚೌಕಿದಾರ್‌ ಅಭಿಯಾನ’ವನ್ನು ಬೆಂಬಲಿಸುವಂತೆ ಪಕ್ಷವು ಇದರಲ್ಲಿ ವಿನಂತಿ ಮಾಡಿಕೊಂಡಿದೆ. ‘ಬನ್ನಿ ಭಾರತೀಯರೇ.. ಇದು ಪ್ರತೀಯೊಬ್ಬ ಭಾರತೀಯನ ಹಕ್ಕು – ಮೈ ಭಿ ಚೌಕಿದಾರ್‌ ಮತ್ತು ಚೌಕಿದಾರ್‌ ಫಿರ್‌ ಸೇ ಎಂಬ ಹ್ಯಾಶ್‌ ಟ್ಯಾಗ್‌ ಗಳು ಕಳೆದ ಕೆಲವು ದಿನಗಳಿಂದ ಟ್ವಿಟ್ಟರ್‌ ನಲ್ಲಿ ಟ್ರೆಂಡಿಂಗ್‌ ಆಗುತ್ತಿದೆ.
ಒಟ್ಟಿನಲ್ಲಿ ಇದೀಗ ಪ್ರಧಾನಿ ಮೋದಿಯವರ ವಿರುದ್ಧ ಟೀಕೆಗಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಟೀಕೆ ಮಾಡುವಾಗ ಪದೇ ಪದೇ ಕೆದಕುತ್ತಿದ್ದ ‘ಚೌಕಿದಾರ್‌’ ವಿಷಯವನ್ನೇ ಬಿ.ಜೆ.ಪಿ.ಯು ಸವಾಲಾಗಿ ಸ್ವೀಕರಿಸಿದ್ದು ಇದು ಮುಂಬರುವ ದಿನಗಳಲ್ಲಿ ಕೇಸರಿ ಪಕ್ಷಕ್ಕೆ ಯಾವ ರೀತಿಯಲ್ಲಿ ಪ್ರಯೋಜನವಾಗಲಿದೆ ಮತ್ತು ಕಾಂಗ್ರಸ್‌ ಗೆ ಹೇಗೆ ದುಬಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.