ಚುನಾವಣೆ ಅಕ್ರಮ ತಡೆಗೆ ಸಿವಿಜಿಲ್‌ ಆ್ಯಪ್‌ ಅಸ್ತ್ರ


Team Udayavani, Mar 17, 2019, 7:42 AM IST

akrama.jpg

ರಾಮನಗರ: ಚುನಾವಣೆಯಲ್ಲಿ ಅಕ್ರಮಗಳನ್ನು ಹೊಣೆ ಇರುವ ನಾಗರಿಕರು ಸಹಿಸುವುದಿಲ್ಲ. ಆಯೋಗದ ಅಧಿಕಾರಿಗಳು ಎಷ್ಟೇ ಎಚ್ಚರಿಕೆಯಿಂದ ಇದ್ದರೂ, ಕದ್ದುಮುಚ್ಚಿ ನಡೆಯುವ ಅಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಈ ಅಕ್ರಮಗಳನ್ನು ತಡೆಯಲು ಚುನಾವಣಾ ಆಯೋಗ ದೇಶದ ನಾಗರಿಕರಿಗೆ ಹೊಸ ಅಸ್ತ್ರವನ್ನು ನೀಡಿದೆ. 

ಸಿವಿಜಿಲ್‌ (ವಿಜಿಲೆಂಟ್‌ ಸಿಟಿಜನ್‌) ಮೊಬೈಲ್‌ ಆ್ಯಪ್‌ ಮೂಲಕ ರೆಡ್‌ ಹ್ಯಾಂಡ್‌ ಆಗಿ ಅಕ್ರಮವನ್ನು ತಮ್ಮ ಮೊಬೈಲ್‌ಗ‌ಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿ ಇಡುವ ಭರವಸೆಯನ್ನು ನೀಡಿದೆ. 

ನೀವೇನು ಮಾಡಬೇಕು?: ಗೋಗಲ್‌ ಪ್ಲೇಸ್ಟೋರ್‌ನಿಂದ ಆಂಡ್ರಾಯಿಡ್‌ ಆ್ಯಪ್‌ನ್ನು ನಿಮ್ಮ ಮೊಬೈಲ್‌ಗೆ ಡೌನ್‌ಲೋಡ್‌ ಮಾಡಿಕೊಂಡು ನಿಮ್ಮ ಬಗೆಗಿನ ವಿವರಗಳನ್ನು ದಾಖಲಿಸಬೇಕು. ಹೀಗೆ ಸಿದ್ಧವಾದ ಆ್ಯಪ್‌ ಮೂಲಕ ಅಕ್ರಮಗಳನ್ನು ಕಂಡ ಕೂಡಲೇ ಅದರ ವೀಡಿಯೋ ಅಥವಾ ಸ್ಥಿರ ಚಿತ್ರಗಳನ್ನು ತೆಗೆದಯಬೇಕು. ಆ್ಯಪ್‌ ತಂತಾನೆ ಸ್ಥಳದ ಬಗೆಗಿನ ಮಾಹಿತಿಯನ್ನು (ಜಿಪಿಎಸ್‌ ಮೂಲಕ) ಅಪ್‌ಲೋಡ್‌ ಮಾಡುತ್ತದೆ. 

ಚುನಾವಣಾ ಅಕ್ರಮಗಳು ಯಾವುವು?: ಇಂತಹವರಿಗೆ ಮತ ಕೊಡಿ ಎಂದು ಹಣ, ವಸ್ತು ನೀಡಿ ಆಮೀಷವೊಡ್ಡುವುದು. ಮತದಾರರನ್ನು ಮತಗಟ್ಟೆಗಳಿಗೆ ಕರೆದೊಯ್ಯವುದು. ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿವುದು. ತಾವು ಹೇಳಿದವರಿಗೆ ಮತ ಕೊಡಬೇಕು ಎಂದು ಹೆದರಿಸುವುದು. ಮತೀಯ ಭಾವನೆಗಳನ್ನು ಕೆರಳಿಸುವ ಭಾಷಣ, ಬಹಿರಂಗ ಹೇಳಿಕೆ ಕೊಡುವುದು.

ಮಾಧ್ಯಮಗಳಲ್ಲಿ ಒಬ್ಬ ಅಭ್ಯರ್ಥಿಯ ಪರ ಸುದ್ದಿಯ ರೂಪದಲ್ಲಿ ಪ್ರಚಾರ ಮಾಡುವುದು, ಸುಳ್ಳು ಸುದ್ದಿಗಳನ್ನು ಹರಡುವುದು, ಕಟ್ಟಡ ಮುಂತಾದವುಗಳ ಮೇಲೆ ಪ್ರಚಾರ ಸಾಮಾಗ್ರಿಯನ್ನು ಅಂಟಿಸಿ ವಿರೂಪಗೊಳಿಸುವುದು ಇತ್ಯಾದಿಗಳು ಚುನಾವಣಾ ಅಕ್ರಮಗಳಾಗುತ್ತವೆ. ಈ ಅಕ್ರಮಗಳನ್ನು ಕಂಡಾಕ್ಷಣ ನಾಗರಿಕರು ಆ್ಯಪ್‌ ಮೂಲಕ ಸೆರೆಹಿಡಿದು ಆಯೋಗದ ಗಮನ ಸೆಳೆಯಬಹುದು. ಹೀಗೆ ಸಲ್ಲಿಸಿದ ದೂರಿಗೆ ಪ್ರತಿಯಾಗಿ ಆಯೋಗ ದೂರು ಸಂಖ್ಯೆಯನ್ನು ನಿಮಗೆ ನೀಡುತ್ತದೆ.

ಆಯೋಗ ಏನು ಮಾಡುತ್ತದೆ: ನಾಗರಿಕರು ಅಪ್‌ಲೋಡ್‌ ಮಾಡಿದ ದೂರನ್ನು ಮತ್ತು ಆ್ಯಪ್‌ ಸ್ವಯಂ ದಾಖಲಿಸಿಕೊಳ್ಳುವ ಸ್ಥಳದ ಮಾಹಿತಿಯನ್ನು ಆಧರಿಸಿ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು ಸ್ಥಳಕ್ಕೆ ಕೇವಲ 15 ನಿಮಿಷಗಳಲ್ಲಿ ಭೇಟಿ ಕೊಟ್ಟು ಪರಿಶೀಲಿಸುವರು. 30 ನಿಮಿಷಗಳಲ್ಲಿ ಪರಿಶೀಲನಾ ವರದಿಯನ್ನು ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳ ಗಮನ ಸೆಳೆಯುವರು.

ಕೇವಲ 100 ನಿಮಿಷಗಳಲ್ಲಿ ಎಲ್ಲಾ ಪ್ರಕ್ರಿಯೆ ಮುಗಿದು, ದೂರಿನ ಸ್ಥಿತಿಯ ಬಗ್ಗೆ ಅಧಿಕಾರಿಗಳು ದೂರುದಾರರಿಗೆ ಮಾಹಿತಿ ನೀಡುತ್ತಾರೆ. ಈಗಾಗಲೇ ದೇಶಾದ್ಯಂತ 1 ಲಕ್ಷಕ್ಕೂ ಅಧಿಕ ನಾಗರಿಕರು ಈ ಆ್ಯಪ್‌ ಡೌನಲೋಡ್‌ ಮಾಡಿಕೊಂಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಚುನಾವಣೆಯನ್ನು ಪಾರದರ್ಶಕವಾಗಿ, ಮುಕ್ತವಾಗಿ ನಡೆಯಬೇಕು ಎಂಬ ಆಯೋಗದ ಆಶಯಕ್ಕೆ ಪ್ರಜೆಗಳು ಸ್ಪಂದಿಸಬೇಕಾಗಿದೆ.

ಚುನಾವಣಾ ಅಕ್ರಮಗಳನ್ನು ತಡೆಯುವ ಸಲುವಾಗಿ ಆಯೋಗ ಹಲವಾರು ತಂಡಗಳನ್ನು ರಚಿಸಿದೆ. ಈ ತಂಡಗಳು ಸದ್ಯ ಅಕ್ರಮಗಳ ಕಡಿವಾಣಕ್ಕೆ ಮುಂದಾಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರು ಅಕ್ರಮಗಳನ್ನು ತಡೆಯಲು ಅಧಿಕಾರಿಗಳೊಂದಿಗೆ ಸಹಕರಿಸಬೇಕಾಗಿದೆ. ನಾಗರಿಕರು ತಮಗೆ ಕಂಡು ಬಂದ ಅಕ್ರಮಗಳನ್ನು ಸಿವಿಜಿಲ್‌ ಆ್ಯಪ್‌ ಮೂಲಕ ಆಯೋಗದ ಗಮನ ಸೆಳೆಯಬಹುದು. 
-ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ, ಚುನಾವಣಾಧಿಕಾರಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ

* ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.