ಜಯಪ್ರಸಾದ್‌ ಬಿಎಸ್‌ಪಿ ಅಭ್ಯರ್ಥಿ  


Team Udayavani, Mar 17, 2019, 7:42 AM IST

jayaprasda.jpg

ಕೋಲಾರ: ಸ್ಥಳೀಯ ಮೀಸಲು ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿಯಾಗಿ ಜಯಪ್ರಸಾದ್‌ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಬಿಎಸ್‌ಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಹಾಗೂ ಕೋಲಾರ-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಪಿ.ವಿ.ನಾಗಪ್ಪ ಘೋಷಣೆ ಮಾಡಿದರು. 

ನಗರದ ಪತ್ರಕರ್ತರ ಭವನದಲ್ಲಿ ನಡೆದ ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಂ ಅವರ 85ನೇ ವರ್ಷದ ಹುಟ್ಟುಹಬ್ಬ ಮತ್ತು ಲೋಕಸಭಾ ಅಭ್ಯರ್ಥಿ ಘೋಷಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ಬಿಎಸ್‌ಪಿ ಅಭ್ಯರ್ಥಿಯಾಗಿ ಜಯಪ್ರಸಾದ್‌ರ ಹೆಸರು ಘೋಷಿಸುತ್ತಿದ್ದಂತೆ ಜಿಲ್ಲಾ ಮಟ್ಟದಿಂದ ಆಗಮಿಸಿದ್ದ ನೂರಾರು ಸದಸ್ಯರು-ಕಾರ್ಯಕರ್ತರು ಚಪ್ಪಾಳೆಗಳ ಮೂಲಕ ಅನುಮೋದನೆ ನೀಡಿದರು. 

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಮ್ಮರೆಡ್ಡಿಪುರ ಗ್ರಾಮದ ಜಯಪ್ರಸಾದ್‌, ಬ್ಯಾಂಕ್‌ ಮ್ಯಾನೇಜರ್‌ ಆಗಿ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕ್ಷೇತ್ರದಲ್ಲಿ ಬಡವ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳಲ್ಲಿ ಉತ್ತಮ ಸೇವೆ ಸಲ್ಲಿಸಿ ಉತ್ತಮ ಸಂಪರ್ಕ ಹೊಂದಿದ್ದಾರೆಂದರು. ಬಿಎಸ್‌ಪಿ ಜಿಲ್ಲಾಧ್ಯಕ್ಷರು ಆಗಿರುವ ಜಯಪ್ರಸಾದ್‌, ಎಲ್ಲಾ 8 ತಾಲೂಕುಗಳಲ್ಲಿ ಮತ್ತು ಬೂತ್‌ ಮಟ್ಟದಲ್ಲಿ ಪಕ್ಷದ ಸಮಿತಿಗಳನ್ನು ರಚಿಸಿ ಉತ್ತಮ ಸಂಘಟನೆ ಮಾಡಿದ್ದಾರೆಂದರು.  

ಬಿಜೆಪಿ – ಕಾಂಗ್ರೆಸ್‌ ಜನಸಾಮಾನ್ಯರ, ರೈತ, ಕಾರ್ಮಿಕರ ಅಭಿವೃದ್ಧಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿವೆ. ಪಕ್ಷದ ಮುಖ್ಯಸ್ಥೆ ಮಾಯಾವತಿ ನೇತೃತ್ವದಲ್ಲಿ ಬಹುಜನರ ಮಧ್ಯೆ ತೆಗೆದುಕೊಂಡು ಹೋಗಲಾಗುತ್ತಿದೆ. ಪ್ರತಿ ಕಾರ್ಯಕರ್ತನೂ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.

ಅಭ್ಯರ್ಥಿ ಜಯಪ್ರಸಾದ್‌ ಮಾತನಾಡಿ, ಪಕ್ಷದ ಹಿರಿಯ ಮುಖಂಡರು ಮತ್ತು ಜಿಲ್ಲೆಯ ಕಾರ್ಯಕರ್ತರು ತನ್ನ ಮೇಲೆ ವಿಶ್ವಾಸವಿಟ್ಟು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಇದರಿಂದಾಗಿ ತಮಗೆ ಜವಾಬ್ದಾರಿ ಹೆಚ್ಚಾಗಿದ್ದು ಅವರಿಗೆ ತಾನೂ ಸೇವಕನಾಗಿ ಕೆಲಸ ಮಾಡುವುದಾಗಿ ತಿಳಿಸಿದರು. 

ಈ ವೇಳೆ ಬಿಎಸ್‌ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿರಾಜು, ಚಿಂತಾಮಣಿ ತಾಲೂಕು ಅಧ್ಯಕ್ಷ ನಾಗೇಶ್‌, ಶ್ರೀನಿವಾಸಪುರ-ರಾಜು, ಮುಳಬಾಗಲು-ವಿಜಯಕುಮಾರ್‌, ಕೋಲಾರ-ರಘುನಾಥ್‌, ಬಂಗಾರಪೇಟೆ-ಮೋಹನ್‌, ಮಾಲೂರು ಸುರೇಶ್‌, ಶಿಡ್ಲಘಟ್ಟ-ರಾಮು ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರಮುಖ ಮುಖಂಡರು ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.