ಜೆಡಿಎಸ್‌ ತಾಲೂಕು ಅಧ್ಯಕ್ಷರ ಸಭೆ ಕರೆದು ಬೆಂಬಲ ಕೋರಿದ ಧ್ರುವ


Team Udayavani, Mar 17, 2019, 7:44 AM IST

m1-dala.jpg

ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾ.25ರಂದು ತಾವು ನಾಮಪತ್ರ ಸಲ್ಲಿಸುವುದಾಗಿ ಸಂಸದ ಆರ್‌. ಧ್ರುವನಾರಾಯಣ ಘೋಷಿಸಿದರು. ನಗರದ ಕಬಿನಿ ಸಂಗಮದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ  ನಂಜನಗೂಡು, ತಿ. ನರಸೀಪುರ, ಎಚ್‌.ಡಿ. ಕೋಟೆ ತಾಲೂಕು ಜೆಡಿಎಸ್‌ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದರು.

ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿರುವ ತಮಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಹಾಗೂ ತಿ.ನರಸೀಪುರ ಶಾಸಕ‌ ಅಶ್ವಿ‌ನ್‌ ಅವರೊಂದಿಗೂ ಈಗಾಗಲೇ ಮಾತುಕತೆ ನಡೆಸಲಾಗಿದ್ದು,  ಮೈತ್ರಿ ಪಕ್ಷದ ಅಭ್ಯರ್ಥಿಯಾದ ತನಗೆ ಸಂಪೂರ್ಣ ಸಹಕಾರ  ನೀಡಿ ಎಂದು ಕೋರಿದರು.

ಅಧಿಕಾರ ಶಾಶ್ವತವಲ್ಲ. ಆದರೆ ಪ್ರೀತಿ, ವಿಶ್ವಾಸ ನಂಬಿಕೆಯ ಮಾನವೀಯ ಸಂಬಂಧ ಶಾಶ್ವತ ಎಂದು ಭಾವಿಸಿದ್ದೇನೆ.  ನಾವಿಬ್ಬರೂ ಸೇರಿದರೆ ಗೆಲುವು ಸುಲಭವಾಗಲಿದೆ. ಅಲ್ಲದೇ ರಾಜ್ಯ ಸರ್ಕಾರ ಕೂಡ ಸುಭದ್ರವಾಗಿರಲಿದೆ. ರಾಜ್ಯದಲ್ಲಿ ಈ ಹೊಂದಾಣಿಕೆಯ ಹೊಸಪ್ರಯೋಗವಾಗಿದ್ದು, ಇದರಲ್ಲಿ ನಾವು ಯಶಸ್ವಿಯಾಗಬೇಕು. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಶ್ರಮಿಸೋಣ ಎಂದು ಧ್ರುವನಾರಾಯಣ, ಸದ್ಯದಲ್ಲೇ ಇಬ್ಬರು ಸಚಿವರ ನೇತೃತ್ವದಲ್ಲಿ ಚಾಮರಾಜ ನಗರ ಲೋಕಸಭಾ ವ್ಯಾಪ್ತಿಯ ಇನ್ನೊಂದು ಜೆಡಿಎಸ್‌ ಸಭೆ ನಡೆಯಲಿದೆ ಎಂದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಎನ್‌. ನರಸಿಂಹಸ್ವಾಮಿ ಮಾತನಾಡಿ, ಕ್ರಿಯಾಶೀಲ ಸಂಸದರಾಗಿರುವ ಧ್ರುವನಾರಾಯಣ ಪುನರಾಯ್ಕೆಯಾಗುವುದು ಮತದಾರರ ಹೆಮ್ಮೆಯಾಗಿದೆ. ಸರಳ ಸಜ್ಜನಿಕೆಯ ಅವರು ಜನಸಾಮಾನ್ಯರ ಕಷ್ಟಗಳಿಗೆ ಸದಾ ಕಾಲ  ಸ್ಪಂದಿಸುವ ಮನೊಭಾವ ಹೊಂದಿದ್ದಾರೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಂಜನಗೂಡು ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌. ಮಹದೇವಸ್ವಾಮಿ, ತಿ.ನರಸೀಪುರ ತಾಲೂಕು ಅಧ್ಯಕ್ಷ ಚಿನ್ನಸ್ವಾಮಿ, ಎಚ್‌.ಡಿ. ಕೋಟೆ ಅಧ್ಯಕ್ಷ ನರಸಿಂಹೇಗೌಡ, ಸರಗೂರು ತಾಲೂಕು ಅಧ್ಯಕ್ಷ ಬಸವಣ್ಣ, ಪಕ್ಷದ ಎಸ್‌ಸಿ ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ಶಿವಕುಮಾರ, ಭಾಸ್ಕರ್‌,  ಎನ್‌.ಶ್ರೀನಿವಾಸ, ಮಾಹದೇವು, ರಾಜೇಂದ್ರ, ಮುಖಂಡ ಬೆಳವಾಡಿ ಶಿವಕುಮಾರ, ಸಣ್ಣಪ್ಪ ಗೌಡ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.