ಅಫ‌ಜಲಪುರ: ಹನಿ ನೀರಿಗೂ ಬರ


Team Udayavani, Mar 17, 2019, 10:26 AM IST

gul-2.jpg

ಅಫಜಲಪುರ: ನೀರಿಲ್ಲದೆ ತಾಲೂಕಿನ ಕರೆ ಕಟ್ಟೆಗಳು ಬತ್ತಿ ಹೋಗಿವೆ. ನೀರಿಗಾಗಿ ಜನರು ಪರದಾಡುತ್ತಿದ್ದರೆ, ಜಾನುವಾರುಗಳು ಪರಿತಪಿಸುತ್ತಿವೆ. ಎಲ್ಲಿ ನೋಡಿದರೂ ಹಾಹಾಕಾರ ಶುರುವಾಗಿದೆ. 

ತಗ್ಗಿದ ಅಂತರ್ಜಲ: ಮಳೆ ಕೊರತೆಯಿಂದಾಗಿ ತಾಲೂಕಿನಾದ್ಯಂತ ಅಂತರ್ಜಲ ಮಟ್ಟ ಭಾರಿ ಪ್ರಮಾಣದಲ್ಲಿ ತಗ್ಗಿದೆ. ಅಂತರ್ಜಲ ಇಲ್ಲದ್ದರಿಂದ ಕೆರೆ, ಬಾವಿ, ಕೊಳವೆ ಬಾವಿಗಳ ನೀರು ಬತ್ತಿ ಹೋಗಿವೆ. ಅಲ್ಲದೇ ಹೊಸದಾಗಿ ಎಷ್ಟು ಕೊಳವೆ ಬಾವಿ ಕೊರೆದರೂ ಹನಿ ನೀರಿನ ಅಂಶವೂ ಕಾಣುತ್ತಿಲ್ಲ. ಎಲ್ಲಿ ನೋಡಿದರೂ ನೀರಿಗಾಗಿ ಹಾಹಾಕಾರ ಶುರುವಾಗಿದ್ದರಿಂದ ಜನ ಸಾಮಾನ್ಯರು ಬಿಂದಿಗೆ ನೀರು ತರಲು ಕಿಲೋ ಮಿಟರ್‌ಗಟ್ಟಲೇ ಅಲೆದಾಡುವಂತೆ ಆಗಿದೆ.

ಖಾಸಗಿಯವರ ಹೊಲ ಗದ್ದೆಗಳಲ್ಲಿ ಮಾಲೀಕರಿಂದ ನೂರು ಮಾತು ಆಡಿಸಿಕೊಂಡು ಕೊಡ ನೀರು ತರಬೇಕಾದ ಪರಿಸ್ಥಿತಿ ಇದೆ. ಅಲ್ಲದೇ ಅವರು ನೀರು ಕೊಟ್ಟರೆ ಪುಣ್ಯ ಎನ್ನುವಂತಾಗಿದೆ ಎಂದು ಜನ ನಿಟ್ಟುಸಿರು ಬಿಡುತ್ತಿದ್ದಾರೆ.

ನೀರಿಗಾಗಿ ಬಾಯಿ ತೆರೆಯುತ್ತಿರುವ ಜನ: ಕಳೆದ ವರ್ಷವೂ ತಾಲೂಕಿನಲ್ಲಿ ಬರ ಆವರಿಸಿತ್ತು. ಆದರೆ ಈ ವರ್ಷ ಕಳೆದ ವರ್ಷಕ್ಕಿಂತ ಭೀಕರ ಬರಗಾಲ ಆವರಿಸಿದೆ. ಹೀಗಾಗಿ ಕುಡಿಯುವ ನೀರಿಗಾಗಿ ಜನ-ಜಾನುವಾರುಗಳು ಬಾಯ್ತೆರೆದು ಮುಗಿಲ ಕಡೆ ಮುಖ ಮಾಡುವಂತಾಗಿದೆ. ಎಲ್ಲಿ ನೋಡಿದರೂ ಹನಿ ನೀರು ಸಿಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಕೆರೆಗಳ ಮಾಹಿತಿ: ಅಫಜಲಪುರ ತಾಲೂಕಿನಲ್ಲಿ ಒಟ್ಟು 12 ಕೆರೆಗಳಿವೆ. ಅದರಲ್ಲಿ ಐದು ದೊಡ್ಡ ಕೆರೆಗಳು, ಜಿನುಗು ಕೆರೆ, ಸಣ್ಣ ಕೆರೆಗಳ ಸಂಖ್ಯೆ ಒಟ್ಟು ಏಳು. ಈ ಪೈಕಿ ಗೊಬ್ಬೂರ (ಕೆ) ಗ್ರಾಮದಲ್ಲಿ ಅತಿ ದೊಡ್ಡ ಕೆರೆ ಇದೆ. ಇದರ ವಿಸ್ತೀರ್ಣ 415 ಎಕರೆ ಪ್ರದೇಶವಾಗಿದ್ದು, 84.40 ಕ್ಯೂಸೆಕ್‌ ನೀರು ಸಂಗ್ರಹವಾಗುತ್ತದೆ. 

ಬಡದಾಳ ಗ್ರಾಮದಲ್ಲಿ 9.9 ಎಕರೆ ವಿಸ್ತೀರ್ಣದ ಅತೀ ಸಣ್ಣ ಕೆರೆ ಇದ್ದು, 1.25 ಕ್ಯೂಸೆಕ್‌ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ತಾಲೂಕಿನ 12 ಕೆರೆಗಳು 939.175 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದು, ಈ ಕೆರೆಗಳಲ್ಲಿ ಒಟ್ಟು 274.5 ಕ್ಯೂಸೆಕ್ಸ್‌ ನೀರು ಸಂಗ್ರಹವಾಗುತ್ತದೆ. ಆದರೆ ಮಳೆ ಕೊರತೆಯಿಂದಾಗಿ ಅಫಜಲಪುರ ಪಟ್ಟಣದ ಕೆರೆ ಹೊರತುಪಡಿಸಿ ಉಳಿದ ಎಲ್ಲ ಕೆರೆಗಳು ಬತ್ತಿ ಹೋಗಿವೆ.

ಅಫಜಲಪುರ ಕೆರೆಯಲ್ಲಿ ನೀರು ನಿಲ್ಲಲು ಭೀಮಾ ಬ್ಯಾರೇಜ್‌ ಕಾರಣವಾಗಿದ್ದು ಆಗಾಗ ಬ್ಯಾರೇಜ್‌ ನೀರನ್ನು ಕಾಲುವೆ ಮೂಲಕ ನೀರು ತುಂಬಿಸಲಾಗುತ್ತದೆ. ಹೀಗಾಗಿ ಅಫಜಲಪುರ ಕೆರೆಯಲ್ಲಿ ನೀರಿದೆ. ಉಳಿದ ಕೆರೆಗಳು ಹನಿ ನೀರಿಲ್ಲದೆ ಸೊರಗಿ ಹೋಗಿವೆ. 

ಮೇವು ಬ್ಯಾಂಕ್‌ ಸ್ಥಾಪಿಸಿ: ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲ, ದನಕರುಗಳಿಗೆ ಮೇವಿಲ್ಲ. ಹಣ ನೀಡಿದರೂ ಮೇವು ಸಿಗುತ್ತಿಲ್ಲ. ಆದ್ದರಿಂದ ಸರ್ಕಾರ ಮೇವು ಬ್ಯಾಂಕ್‌ ಸ್ಥಾಪಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ಜಾನುವಾರುಗಳನ್ನು ಮಾರಿ ಗುಳೆ ಹೋಗುವ ಸಿದ್ಧತೆಯಲ್ಲಿದ್ದಾರೆ. ಸಂಬಂಧಪಟ್ಟವರು ಎಚ್ಚೆತ್ತು ದನಕರುಗಳಿಗೆ ಮೇವು, ನೀರು ಪೂರೈಸುವ ಕೆಲಸ ಮಾಡಬೇಕಾಗಿದೆ.

ಬರಗಾಲ ಇರುವುದರಿಂದ ಜನ ಗುಳೆ ಹೋಗಲು ಮುಂದಾ ಗುತ್ತಿದ್ದಾರೆ. ಗುಳೆ ತಪ್ಪಿಸಲು ನರೇಗಾ ಅಡಿಯಲ್ಲಿ ಕೂಲಿ ಕೆಲಸ ನೀಡಲಾಗುತ್ತಿದೆ. ಕೆರೆ ಕುಂಟೆಗಳ ಹೂಳೆತ್ತುವುದರಿಂದ ಜನರಿಗೆ ಕೆಲಸ ಸಿಗುತ್ತಿದೆ. ಅಲ್ಲದೆ ಕೆರೆಯಲ್ಲಿನ ಹೂಳು ತೆಗೆಯುವುದರಿಂದ ಮಳೆಗಾಲದಲ್ಲಿ ನೀರು ನಿಂತು ಅಂತರ್ಜಲ ಹೆಚ್ಚಳವಾಗಲಿದೆ. 
 ಆನಂದಕುಮಾರ, ಪ್ರಭಾರಿ ಎಇ, ಸಣ್ಣ ನೀರಾವರಿ ಇಲಾಖೆ

 ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.