ಥ್ರಿಲ್ಲರ್‌ ಮೋಕ್ಷದಲ್ಲಿ ಮಾಸ್ಕ್ ಮ್ಯಾನ್ ಆಟ


Team Udayavani, Mar 18, 2019, 5:48 AM IST

moksha.jpg

ಕನ್ನಡದಲ್ಲಿ ಈಗಾಗಲೇ ಹಲವು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರಗಳು ಬಂದಿವೆ. ಬರುತ್ತಲೂ ಇವೆ. ಆ ಸಾಲಿಗೆ ಈಗ “ಮೋಕ್ಷ’ ಎಂಬ ಸಿನಿಮಾ ಕೂಡ ಬರುತ್ತಿದೆ. ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಇಷ್ಟರಲ್ಲೇ ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿದೆ. ಈ ಚಿತ್ರದ ಮೂಲಕ ಸಮರ್ಥ್ ನಾಯ್ಕ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ.

ಸಮರ್ಥ್ ಇದಕ್ಕೂ ಮುನ್ನ ಸಾಫ್ಟ್ವೇರ್‌ ಕಂಪೆನಿಯಲ್ಲಿ ಕೆಲಸ ಮಾಡಿದವರು. ಎಂಜಿನಿಯರಿಂಗ್‌, ಎಂಬಿಎ ಮಾಡಿರುವ ಅವರು ಡೆಲ್‌ ಸೇರಿದಂತೆ ಇತರೆ ಕಂಪೆನಿಗಳಲ್ಲಿ ಐದು ವರ್ಷ ಕೆಲಸ ಮಾಡುತ್ತಲೇ, ಸಿನಿಮಾ ಆಸಕ್ತಿ ಇಟ್ಟುಕೊಂಡವರು. ಕೆಲಸದಲ್ಲಿರುವಾಗಲೇ ನಿರ್ಮಾಪಕರಿಗಾಗಿ ಹುಡುಕಾಟ ನಡೆಸಿದ್ದರು. ಆದರೆ, ನಿರ್ಮಾಪಕರು ಸಿಗುವುದು ಕಷ್ಟ ಅಂದೆನಿಸಿ, ಕೊನೆಗೆ ತಮ್ಮ ಕೆಲಸಕ್ಕೆ ಗುಡ್‌ ಬೈ ಹೇಳಿ, ಅವರೇ ನಿರ್ಮಾಣಕ್ಕೆ ಮುಂದಾದರು.

ಅದಕ್ಕೂ ಮುನ್ನ ಅವರೇ ಸ್ವಂತದ್ದೊಂದು ಆ್ಯಡ್‌ ಏಜೆನ್ಸಿ ಶುರು ಮಾಡಿ, ಅಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಪೋರೇಟ್‌ ಜಾಹಿರಾತುಗಳನ್ನು ನಿರ್ದೇಶನ ಮಾಡಿದ ಅನುಭವ ಪಡೆದಿದ್ದಾರೆ. ಆ ಅನುಭವದ ಮೇಲೆ “ಮೋಕ್ಷ’ ಚಿತ್ರ ಮಾಡಿದ್ದಾರೆ. ಅವರೇ ಹೇಳುವಂತೆ, ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ. ಹಾಗಂತ ರೆಗ್ಯುಲರ್‌ ಮರ್ಡರ್‌ ಮಿಸ್ಟ್ರಿ ಇಲ್ಲಿಲ್ಲ. ನಾರ್ಮಲ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಸಿನಿಮಾ ಕೂಡ ಅಲ್ಲ.

ಬಾಲಿವುಡ್‌ನ‌ಲ್ಲಿ ಬಂದ “ಬಾಜಿಗಾರ್‌’, “ರೇಸ್‌’ ಚಿತ್ರಗಳ  ಕೆಟಗರಿಗೆ ಸೇರುವ ಚಿತ್ರ ಇದಾಗಿದ್ದು, ಕನ್ನಡಿಗರಿಗೆ ಹೊಸತನ ಚಿತ್ರ ಕೊಡುವ ಪ್ರಯತ್ನ ಮಾಡಲಾಗಿದೆ ಎನ್ನುವ ನಿರ್ದೇಶಕರು, ಇಲ್ಲಿ ಮಾಸ್ಕ್ಮ್ಯಾನ್‌ ಒಬ್ಬನ ವಿಚಿತ್ರ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಒಬ್ಬ ಮಾಸ್ಕ್ ಮ್ಯಾನ್‌ ಚಿತ್ರದ ಹೈಲೈಟ್‌. ಜೊತೆಗೊಂದು ಲವ್‌ಸ್ಟೋರಿ ಸಹ ಚಿತ್ರದ ಜೀವಾಳ.

ಇಲ್ಲಿ ಮಾಸ್ಕ್ಮ್ಯಾನ್‌ ಮೂಡಿಸುವ ಅಚ್ಚರಿಗಳು, ಊಹಿಸಲಾಗದಂತೆ ಕೊಡುವ ಟ್ವಿಸ್ಟ್‌ಗಳು, ಬರುವ ಪ್ರತಿ ಪಾತ್ರದ ಭಾವನೆಗಳ ತೊಳಲಾಟ, ಹುಚ್ಚು ಪ್ರೀತಿ, ದ್ವೇಷ, ಅಸೂಯೆ, ಒಂಟಿತನ, ಹತಾಶೆ ಮತ್ತು ಸಂಬಂಧಗಳ ಘರ್ಷಣೆ ಇತ್ಯಾದಿ ವಿಷಯಗಳು ಅಡಕವಾಗಿವೆ’ ಎನ್ನುತ್ತಾರೆ ಸಮರ್ಥ್. ಚಿತ್ರಕ್ಕೆ ಮೋಹನ್‌ ಧನ್‌ರಾಜ್‌ ನಾಯಕರಾಗಿದ್ದಾರೆ. ಬಾಲಿವುಡ್‌ನ‌ ಐದಾರು ಚಿತ್ರಗಳಲ್ಲಿ ನಟಿಸಿರುವ ಮೋಹನ್‌ ಧನ್‌ರಾಜ್‌ ಮೂಲತಃ ಕನ್ನಡಿಗ.

ಎಂಬಿಎ ಓದಿ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದವರು ಬಾಲಿವುಡ್‌ಗೆ ಬಂದು, ಅಲ್ಲಿಂದ ಈಗ ಸ್ಯಾಂಡಲ್‌ವುಡ್‌ಗೆ ಬಂದಿದ್ದಾರೆ. ಇನ್ನು, ಆರಾಧ್ಯ ಲಕ್ಷ್ಮಣ್‌ ನಾಯಕಿ. ಇವರಿಗೆ ಇದು ಮೊದಲ ಚಿತ್ರ. ಮಾಡೆಲ್‌ ಆಗಿರುವ ಆರಾಧ್ಯ ಹಲವು ಕಮರ್ಷಿಯಲ್‌ ಆ್ಯಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಾರು 70 ದಿನಗಳ ಕಾಲ ಬೆಂಗಳೂರು, ಹಾಸನ, ಕಾರವಾರ, ಗೋಕಾಕ್‌, ಗೋವಾ ಸಮೀಪದ ಹಲವು ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.

ಚಿತ್ರಕ್ಕೆ ಗುರುಪ್ರಶಾಂತ್‌ ರೈ, ಹಾಲಿವುಡ್‌ನ‌ ಜೋಮ್‌ ಜೋಸೆಫ್, ಕಿರಣ್‌ ಹಂಪಾಪುರ ಛಾಯಾಗ್ರಹಣ ಮಾಡಿದರೆ, ಕಿಶನ್‌ ಮೋಹನ್‌ ಹಾಗೂ ಸಚಿನ್‌ ಬಾಲು ಸಂಗೀತವಿದೆ. ಇಬ್ಬರು ಒಂದೊಂದು ಹಾಡು ಮಾಡಿದ್ದಾರೆ. ಜಯಂತ್‌ ಕಾಯ್ಕಿಣಿ ಹಾಗು ಕುಮಾರ್‌ ದತ್‌ ಸಾಹಿತ್ಯವಿದೆ.  ದೀಪಕ್‌ ದೊಡ್ಡೇರ, ಅನುರಾಧ ಭಟ್‌ ಹಾಡಿದ್ದಾರೆ. ಇಷ್ಟರಲ್ಲೇ ಪ್ರೇಕ್ಷಕರ ಮುಂದೆ “ಮೋಕ್ಷ’ ಬರಲಿದೆ.

ಟಾಪ್ ನ್ಯೂಸ್

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.