ಬಿಸಿಲಿಗೆ ಆವಿಯಾದ ಭೀಮೆ ಒಡಲು


Team Udayavani, Mar 18, 2019, 6:01 AM IST

gul-4.jpg

ಜೇವರ್ಗಿ: ಪ್ರಸಕ್ತ ವರ್ಷ ಮಳೆ, ಬೆಳೆ ಇಲ್ಲದೇ ಕಂಗಾಲಾಗಿರುವ ರೈತರು ಒಂದು ಕಡೆಯಾದರೆ, ಕೆಲಸವಿಲ್ಲದೆ ನಿರುದ್ಯೋಗಿಗಳಾಗಿ ಅಲೆಯುತ್ತಿರುವ ಯುವ ಜನರ ಸಮೂಹ ಮತ್ತೂಂದು ಕಡೆ. ಮತ್ತೂಂದೆಡೆ ಗಾಯದ ಮೇಲೆ ಬರೆ ಎಳೆದಂತೆ ಕುಡಿಯುವ ನೀರಿಗಾಗಿ ಹಾಹಾಕಾರ ಮುಗಿಲು ಮುಟ್ಟಿದೆ. ಬಿಸಿಲ ಧಗೆಗೆ ಬತ್ತಿದ ಭೀಮೆಯ ಒಡಲಾಳದ ನೀರು ಆವಿಯಾಗಿದೆ. ಕಟ್ಟಿಸಂಗಾವಿ ಹತ್ತಿರದ ಭೀಮಾ ಬ್ರಿಡ್ಜ್ನಲ್ಲಿ ಮರಳು ಮತ್ತು ಕಲ್ಲುಗಳು ಮೇಲೆ ಬಂದಿದ್ದು, ಮಾನವನ ದೇಹದಲ್ಲಿನ ಅಸ್ತಿಪಂಜರದಂತೆ ಕಾಣಿಸುತ್ತಿವೆ. 

ಇದೇನು ಭೀಮಾ ನದಿಯೋ ಅಥವಾ ಮರಳು ಭೂಮಿಯೋ?  ಎನ್ನುವ ಅನುಮಾನ ಮೂಡಿಸುತ್ತಿದೆ. ಕೋನಾ ಹಿಪ್ಪರಗಾ ಬ್ಯಾರೇಜ್‌ ಕಂ ಬ್ರಿಡ್ಜ್ ಬಳಿ ನೀರು ಸಂಗ್ರಹಿಸಿ ದೂರದ ಕಲಬುರಗಿ ಪಟ್ಟಣಕ್ಕೆ ನೀರು ಪೂರೈಸಲಾಗುತ್ತಿದೆ. ಅಲ್ಲದೆ ಕೋಳಕೂರ ಮಾರ್ಗವಾಗಿ ಅಲ್ಲಲ್ಲಿ ಅಲ್ಪಸ್ವಲ್ಪ ನೀರಿನ ಸಂಗ್ರಹಣೆ ಇದ್ದು, ಅದೇ ಹರಿವು ಕಟ್ಟಿಸಂಗಾವಿ ಗ್ರಾಮದ ಹತ್ತಿರ ಅಲ್ಲಲ್ಲಿ ತೆಗ್ಗುಗಳಲ್ಲಿ ಸಂಗ್ರಹವಾಗಿದೆ. ಈ ನೀರು ಜಾನುವಾರುಗಳ ದಾಹ ನೀಗಿಸಲು ಸಾಕಾಗುತ್ತದೆ. ಬೆಳೆದ ಬೆಳೆಗಳು ಬಾಡಿ ಹೋಗಿವೆ.

ಬರಗಾಲ ಕಾಮಗಾರಿಗಳು ಹಳ್ಳ ಹಿಡಿದಿವೆ. ಸರಕಾರ ನೀಡುವ ಪರಿಹಾರ ಗಗನ ಕುಸುಮವಾಗಿದೆ. ಸಾಲಮನ್ನಾ, ಬೆಳೆವಿಮೆ ಕೇವಲ ಕಾಗದದಲ್ಲಿ ಘೋಷಣೆಯಾಗಿ ಜಾರಿಗೆ ಬರದೇ ಧೂಳು ತಿನ್ನುತ್ತಿವೆ. 

ರೈತರು ಬೆಳೆದ ಅಲ್ಪಸ್ವಲ್ಪ ಬೆಳೆಗಳಿಗೂ ಸಮರ್ಪಕ ಬೆಲೆ ಸಿಗದೆ ಕಂಗಾಲಾಗಿ ಸಾಲಬಾಧೆಯಿಂದ ಆತ್ಮಹತ್ಯೆ ದಾರಿ  ತುಳಿಯುತ್ತಿದ್ದಾರೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಾಕಷ್ಟು ಕೊಳವೆ ಬಾವಿಗಳನ್ನು ಕೊರೆದಿದ್ದರಿಂದ ಅಂತರ್ಜಲ ಮಟ್ಟ ಕುಸಿದು ಪಾತಾಳ ಸೇರಿದೆ. ಅಲ್ಲದೇ ಅಕ್ರಮ ಮರಳುಗಾರಿಕೆಯಿಂದ ನೀರಿನ ಸಂಗ್ರಹಣೆ, ಹರಿವಿನ ಮಾರ್ಗ ಹಾಳಾಗಿ ಪ್ರಕೃತಿ ಮಡಿಲಿಗೆ ಕೊಳ್ಳಿ ಇಡುತ್ತಿರುವುದು ನಾಗರಿಕ ಪ್ರಪಂಚದ ಜನರು ತಲೆತಗ್ಗಿಸುವಂತೆ ಮಾಡುತ್ತಿವೆ.

ಭೀಮಾನದಿ ನೀರು ಖಾಲಿಯಾಗಿದ್ದು ಜೇವರ್ಗಿ ಪಟ್ಟಣದ ಜನರು ತಮ್ಮ ಮನೆ ಎದುರಿನ ನಳಗಳಿಗೆ ಕೀಲಿಹಾಕಿ ನೀರಿನ
ಆಸೆಯನ್ನೇ ಬಿಟ್ಟಿದ್ದಾರೆ. ಬೋರವೆಲ್‌ ಮತ್ತು ಟ್ಯಾಂಕರ್‌ ನೀರಿಗೆ ಮೊರೆಹೋಗುತ್ತಿದ್ದು, ಮೋಟಾರು ಸೈಕಲ್‌ಗ‌ಳ ಮೇಲೆ ಕೊಡಗಳನ್ನು ಕಟ್ಟಿಕೊಂಡು ನೀರು ತರುತ್ತಿದ್ದಾರೆ.

ಅರಣ್ಯ ಇಲಾಖೆ ಗಿಡಮರ ಬೆಳೆಸುವಲ್ಲಿ ವಿಫಲವಾಗಿ ಸಂಪೂರ್ಣ ರಕ್ಷಿತ ಅರಣ್ಯ ಪ್ರದೇಶ ನಶಿಸಿಹೋಗಿದೆ. ನೀರಾವರಿ ಯೋಜನೆಗಳು ಜಾರಿಯಾಗಿಲ್ಲ. ಕಾಲುವೆಗಳು ಹಾಳಾಗಿವೆ. ನೀರಿನ ಸಂಗ್ರಹಣೆ ಮತ್ತು ಅಂತರ್ಜಲ ಸಂರಕ್ಷಣೆ ಬರಗಾಲ ಕಾಮಗಾರಿ, ಉದ್ಯೋಗ ಖಾತ್ರಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗದೆ ಅರ್ಧಮರ್ಧ ಕೆಲಸ ಗಳಿಂದಾಗಿ ನೀರಿನ ಮೂಲಗಳು ಬರಿದಾಗಿವೆ. ಇಷ್ಟಾದರೂ ಜನಪ್ರತಿನಿಧಿಗಳು ಮತ್ತು ಸರಕಾರಿ ಅಧಿಕಾರಿಗಳು ಸಮಸ್ಯೆ ಬಂದಾಗಲೇ ಪರಿಹರಿಸಲು ಸನ್ನದ್ಧರಾಗುತ್ತಿದ್ದಾರೆ. 

ಸಮಸ್ಯೆಗೆ ಬೆನ್ನು ತೋರುತ್ತಿರುವ ಪ್ರತಿನಿಧಿಗಳು ಪುರಸಭೆ ಸದ್ಯ ಆರರಿಂದ ಎಂಟು ದಿನಗಳಿಗೊಮ್ಮೆ ಕುಡಿಯುವ ನೀರು  ಪೂರೈಸುತ್ತಿದೆ. 23ವಾರ್ಡ್‌ ಜನರು ಜನಪ್ರತಿನಿಧಿ ಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ಗಾಢ ನಿದ್ದೆಯಲ್ಲಿದೆ. ಮರಗಿಡಗಳು ಕಣ್ಮರೆಯಾಗಿವೆ. ಪುರಸಭೆಯಲ್ಲಿಯೂ ಜನಪ್ರತಿನಿಧಿ ಗಳ ಆಯ್ಕೆ ನಂತರ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಗೊಂದಲ ನ್ಯಾಯಾಲಯದ ಮೆಟ್ಟಿಲು ಏರಿದ್ದು ಚುನಾಯಿತ ಪ್ರತಿನಿಧಿ ಸದಸ್ಯರು ಪಟ್ಟಣದ ಸಮಸ್ಯೆಗಳತ್ತ ಬೆನ್ನು ತೋರಿಸುತ್ತಿದ್ದಾರೆ

 ಮರೆಪ್ಪ ಬೇಗಾರ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.