ಗೌಡರ ನಿವಾಸದಲ್ಲಿ ಸಭೆ
Team Udayavani, Mar 19, 2019, 1:05 AM IST
ಬೆಂಗಳೂರು: ಸೀಟು ಹೊಂದಾಣಿಕೆಯಡಿ ಜೆಡಿಎಸ್ ಪಾಲಿಗೆ ಬಂದಿರುವ ಎಂಟು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಸೋಮವಾರ ರಾತ್ರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಚರ್ಚಿಸಲಾಯಿತು.
ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಎಚ್.ಡಿ.ರೇವಣ್ಣ , ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದರು. ಹಾಸನ,ಮಂಡ್ಯ ಕ್ಷೇತ್ರಗಳಲ್ಲಿನ ರಾಜಕೀಯ ವಿದ್ಯಮಾನಗಳು ಪ್ರಮುಖವಾಗಿ ಚರ್ಚೆಗೆ ಬಂದವು.
ಕೆಲವು ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಹಾಸನದಲ್ಲಿ ಎ.ಮಂಜು, ಮಂಡ್ಯದಲ್ಲಿ ಸುಮಲತಾ ಪರ ಕೆಲಸ ಮಾಡುತ್ತಿರುವ ಬಗ್ಗೆ ಚರ್ಚೆಯಾಗಿ ಆ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರ ಗಮನಕ್ಕೆ ತರಲು ತೀರ್ಮಾನಿಸಲಾಯಿತು.