ಪ್ರಮೋದ್‌ ಮಧ್ವರಾಜ್‌ಗೆ  ಜೆಡಿಎಸ್‌ ಆಹ್ವಾನ ?


Team Udayavani, Mar 19, 2019, 1:00 AM IST

pramod.jpg

ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಬೇಕೋ ಬೇಡವೋ ಎಂಬ ಹೊಯ್ದಾಟದಲ್ಲಿದ್ದ  ಜೆಡಿಎಸ್‌ ಸದ್ಯಕ್ಕೆ ಕೊಂಚ ನಿಟ್ಟುಸಿರು ಬಿಟ್ಟಂತಿದೆ. ಮಾಜಿ ಸಚಿವ ಕಾಂಗ್ರೆಸ್‌ನ ಪ್ರಮೋದ್‌
ಮಧ್ವರಾಜ್‌ ಮತ್ತು ಜೆಡಿಎಸ್‌ನ ರಾಷ್ಟ್ರಿàಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರ ಭೇಟಿ ಈ ಗೊಂದಲಕ್ಕೆ ಅಂತ್ಯ ಹಾಡುವ ಲಕ್ಷಣಗಳಿವೆ. ಈ ಹಿನ್ನೆಲೆಯಲ್ಲಿಸ ಪ್ರಮೋದ್‌ ಜೆಡಿಎಸ್‌ ಸೇರುವುದು ಖಚಿತ ಎಂಬ ಮಾತೂ ಕೇಳಿಬರುತ್ತಿದೆ.

ಮೈತ್ರಿ ಸ್ಥಾನದ ಹಂಚಿಕೆಯಲ್ಲಿ ಎಂಟು ಸ್ಥಾನಗಳನ್ನು ಪಡೆದು, 20 ಸ್ಥಾನಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದ ಜೆಡಿಎಸ್‌ ಒಮ್ಮೆ ತುಮಕೂರು, ಉಡುಪಿ ಚಿಕ್ಕಮಗಳೂರು, ಉತ್ತರ ಕನ್ನಡ ಕ್ಷೇತ್ರವನ್ನು ಮರಳಿ ಕಾಂಗ್ರೆಸ್‌ಗೆ ಬಿಟ್ಟುಕೊಡಲಿದೆ ಎಂಬ ಸುದ್ದಿ ಹಬ್ಬಿತ್ತು. ಆದರೀಗ ಬದಲಾದಂತಿದೆ.

ಜೆಡಿಎಸ್‌ ನಾಯಕ ದೇವೇಗೌಡ ಎಂಟೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ಹೇಳಿದ್ದರೆ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮತ್ತು ಉಪಮುಖ್ಯಮಂತ್ರಿ ಡಾ| ಪರಮೇಶ್ವರ್‌ ತುಮಕೂರು ಕ್ಷೇತ್ರವನ್ನು ಮರಳಿ ಪಡೆಯಲು ರಾಹುಲ್‌ರಿಂದ ಫ‌ರ್ಮಾನು ಹೊರಡಿಸುವ ಲೆಕ್ಕಾಚಾರ ದಲ್ಲಿದ್ದಾರೆ. 

ಗೌಡರ ಸಂಪರ್ಕಿಸಿದ ಪ್ರಮೋದ್‌ 
ಶನಿವಾರವಷ್ಟೇ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರೊಂದಿಗೆ ಮಾತುಕತೆ ಆಡಿರುವುದಾಗಿ ತಿಳಿಸಿದ್ದ
ಪ್ರಮೋದ್‌ ಮಧ್ವರಾಜ್‌ ಸೋಮವಾರ ಎಚ್‌.ಡಿ. ದೇವೇಗೌಡರನ್ನು  ಸಂಪರ್ಕಿಸಿ ದರು. ಇದರಿಂದ ಪ್ರಮೋದ್‌ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿದೆ. ಆದರೆ ಜೆಡಿಎಸ್‌ ನಿಂದಲೋ ಅಥವಾ ಮೈತ್ರಿ ಅಭ್ಯರ್ಥಿಯಾಗಿಯೋ ಎಂಬುದು ಖಚಿತವಾಗಲಿದೆ. ಈ ಮೊದಲು  ಬಿಜೆಪಿಗೆ ಹೆಚ್ಚು ಸ್ಥಾನ ಸಿಗದಂತೆ ಮಾಡಲು ಅಗತ್ಯವೆನಿಸಿದಲ್ಲಿ ಜೆಡಿಎಸ್‌ ತನ್ನ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಅವಕಾಶ ಕೊಡುವ ಯೋಚನೆಯಲ್ಲಿತ್ತು.

ದೇವೇಗೌಡರ ರಾಜಕೀಯ ಪಟ್ಟನ್ನು ಅರ್ಥ ಮಾಡಿಕೊಳ್ಳುವುದು ಸುಲಭವಲ್ಲ. ಹಾಗೆಯೇ ತನ್ನ ಲೆಕ್ಕದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ನಿಲ್ಲಿಸುವ ಲೆಕ್ಕಾಚಾರಕ್ಕೆ ದೇವೇಗೌಡರು ಇಳಿಯುವುದು ಕಡಿಮೆ. ಬೇರೇನೋ ಲೆಕ್ಕಾಚಾರವಿರಬೇಕು ಎನ್ನುತ್ತವೆ ಮೂಲಗಳು.

ಇನ್ನೂ  ಸ್ಪಷ್ಟಗೊಂಡಿಲ್ಲ
ಕಾಂಗ್ರೆಸ್‌ ನಾಯಕ ಬಿ.ಕೆ. ಹರಿಪ್ರಸಾದ್‌ರನ್ನು ಉಡುಪಿಯಿಂದ ಕಣಕ್ಕಿಳಿಸಿದರೆ ಆಗಬಹುದೇ ಎಂದು ಜಿಲ್ಲೆಯ ಪ್ರಮುಖರೊಬ್ಬರಿಗೆ ದಿನೇಶ್‌ ಗುಂಡೂ ರಾವ್‌ ಅಭಿಪ್ರಾಯ ಕೇಳಿರುವುದು, ಅನಿವಾಸಿ ಭಾರತೀಯ ಕನ್ನಡಿಗರ ವೇದಿಕೆ ಮಾಜಿ ಉಪಾಧ್ಯಕ್ಷೆ ಡಾ| ಆರತಿ ಕೃಷ್ಣರಿಗೂ ದಿನೇಶ್‌ ಗುಂಡೂರಾವ್‌ ದೂರವಾಣಿಯಲ್ಲಿ ಮಾತನಾಡಿ, “ದೇವೇಗೌಡರಿಂದ ಬರುವ ಪ್ರಸ್ತಾವವನ್ನು ಸಂಪೂರ್ಣ ನಿರಾಕರಿಸಬೇಡಿ’ ಎಂದಿದ್ದಾರೆನ್ನುವುದೂ ವಿಭಿನ್ನ ವಿಶ್ಲೇಷಣೆಗೆ ಕಾರಣವಾಗುತ್ತಿದೆ. ಆದರೆ ಇವೆಲ್ಲದಕ್ಕೂ ಪ್ರಮೋದ್‌ ಮತ್ತು ದೇವೇಗೌಡರ ಭೇಟಿ ಉತ್ತರವಾಗುವ ಸಾಧ್ಯತೆ ಇದೆ.

ಹರಿಪ್ರಸಾದ್‌ ಬಿಲ್ಲವ ಸಮುದಾಯದವರಾಗಿದ್ದು, ಸ್ಪರ್ಧೆಗೆ ಮಹತ್ವ ಬರಬಹುದು. ಇದೇ ರೀತಿ ಅದೇ ಸಮುದಾಯದ ವಿನಯಕುಮಾರ ಸೊರಕೆಯವರು ಸ್ಪರ್ಧಿಸಿದರೂ ಸ್ಪರ್ಧಾಕಣಕ್ಕೆ ರಂಗು ಬರಲಿದೆ. ಪ್ರಮೋದ್‌ ಮಧ್ವರಾಜರು ಯಾವ ಪಕ್ಷದಿಂದ ನಿಂತರೂ ಜಾತಿ ಲೆಕ್ಕಾಚಾರ ಪ್ರಬಲ ಪೈಪೋಟಿಗೆ ಕಾರಣವಾಗಬಹುದು ಎಂದು ಅಂದಾಜಿಸಲಾಗಿದೆ.

ಆಹ್ವಾನಿಸಿದ್ದು ನಿಜ
ಮಾಜಿ ಸಚಿವ, ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜ್‌ ಅವರನ್ನು ಜೆಡಿಎಸ್‌ನಿಂದ ಸ್ಪರ್ಧಿಸಲು ದೇವೇಗೌಡ ಆಹ್ವಾನಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್‌ ಬಿಜೆಪಿಗೆ ಪ್ರಬಲ ಸ್ಪರ್ಧೆ ನೀಡುವಷ್ಟು ಶಕ್ತಿ ಹೊಂದಿಲ್ಲ ಎನ್ನುವ ಕಾರಣಕ್ಕೆ ಉಡುಪಿಯ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ನ ಟಿಕೆಟ್‌ಆಕಾಂಕ್ಷಿ ಪ್ರಮೋದ್‌ ಮಧ್ವರಾಜ್‌ ಅವರನ್ನು ಜೆಡಿಎಸ್‌ನಿಂದ ನಿಲ್ಲಿಸುವುದು ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಲೆಕ್ಕಾಚಾರ.

ಇದನ್ನು ಖಚಿತಪಡಿಸಿರುವ ಪ್ರಮೋದ್‌, ಸಮ್ಮಿಶ್ರ ಸರಕಾರ ಇರುವುದರಿಂದ ಈ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ, ಗೆಲುವು ಸಾಧಿಸುವುದೇ ನಮ್ಮ ಗುರಿ. ದೇವೇಗೌಡ ಮತ್ತು ಸಿಎಂ  ಕುಮಾರ ಸ್ವಾಮಿ ಅವರು ಅವರ ಪಕ್ಷದಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದಾರೆ. ಈಗ ಮೈತ್ರಿ ಇರುವುದರಿಂದ ಯಾವ ತೀರ್ಮಾನ ತೆಗೆದುಕೊಳ್ಳಬೇಕೆಂದು ಪಕ್ಷದ ನಾಯಕರ ಜತೆ ಚರ್ಚಿಸಿ ನಿರ್ಧರಿಸುವೆ ಎಂದು ಉದಯವಾಣಿಗೆ ತಿಳಿಸಿದ್ದಾರೆ.

ಆದರೆ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕ್ಷೇತ್ರದಲ್ಲಿ ಅದೇ ಪಕ್ಷದ ಚಿನ್ಹೆಯಿಂದ ಸ್ಪರ್ಧಿಸುವಂತೆ ಜೆಡಿಎಸ್‌ ಕೋರಿರುವ ಕಾರಣ ಪಕ್ಷಾಂತರ ಸಂದರ್ಭವೂ ತಲೆದೋರಬಹುದು ಎನ್ನಲಾಗಿದೆ. 

ಟಾಪ್ ನ್ಯೂಸ್

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.