ಅನುಕಂಪದ ಅಲೆ ಇಂಪ್ಯಾಕ್ಟ್?


Team Udayavani, Mar 19, 2019, 6:29 AM IST

anukamoada.jpg

ಕ್ಷೇತ್ರದ ವಸ್ತುಸ್ಥಿತಿ: ಈ ಕ್ಷೇತ್ರದಲ್ಲಿ ಬರುವ ಆರೂ ಬಿಬಿಎಂಪಿ ವಾರ್ಡ್‌ಗಳು ಬಿಜೆಪಿ ತೆಕ್ಕೆಯಲ್ಲಿವೆ. ಕಳೆದ ಮೂರೂ ವಿಧಾನಸಭಾ ಚುನಾವಣೆಗಳಲ್ಲಿ ಮತದಾರರು ಬಿಜೆಪಿ ಕೈಹಿಡಿದಿದ್ದಾರೆ. ಲೋಕಸಭೆ ವಿಚಾರದಲ್ಲೂ ಇಲ್ಲಿನ ಮತದಾರರ ಆಯ್ಕೆ ಕಮಲ. ಈ ನಿಟ್ಟಿನಲ್ಲಿ ಬಸವನಗುಡಿ ಬಿಜೆಪಿಯ ಭದ್ರಕೋಟೆ. ಇದರ ಪ್ರತಿಸ್ಪರ್ಧಿ ಕಾಂಗ್ರೆಸ್‌  ಪ್ರತಿ ಬಾರಿ ಅಭ್ಯರ್ಥಿ ಆಯ್ಕೆಯಲ್ಲಿಯೇ ಎಡವುತ್ತಿದೆ. ಪ್ರತಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಹೊಸ ಮುಖಗಳು ಕಾಣಿಸಿಕೊಳ್ಳುತ್ತವೆ. ಸೋಲುಂಡ ನಂತರ ಅವರು ಜನರ ಸಂಪರ್ಕದಿಂದಲೂ ದೂರ ಉಳಿಯುತ್ತಾರೆ. ಇದು ಕೂಡ ಬಿಜೆಪಿಗೆ ವರವಾಗಿದೆ.

ಸಾಮಾನ್ಯವಾಗಿ ಲೋಕಸಭಾ ಚುನಾವಣೆಯಲ್ಲಿ ಬಸವನಗುಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪರ ಶೇ.50ರಿಂದ 60ರಷ್ಟು ಮತಗಳು ಚಲಾವಣೆ ಆಗುತ್ತಿದ್ದವು. ಆದರೆ, 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇದ್ದುದರಿಂದ ಈ ಮತದಾನ ಪ್ರಮಾಣ ಶೇ.68ಕ್ಕೆ ಏರಿಕೆಯಾಗಿತ್ತು. ಈ ಬಾರಿ ಕಣದ ಚಿತ್ರಣ ಬದಲಾಗಿದೆ. ಬಿಜೆಪಿಯಲ್ಲೂ ಲೋಕಸಭೆಗೆ ಹೊಸ ಮುಖ ಕಾಣಿಸಿಕೊಳ್ಳಲಿದೆ. ಇದರ ಲಾಭ ಪಡೆಯಲು ಕಾಂಗ್ರೆಸ್‌ ತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಜನಸಂಪರ್ಕ ಅಭಿಯಾನ, ಕಾರ್ಯಕರ್ತರಿಗೆ ತರಬೇತಿ ಶಿಬಿರಗಳ ಮೂಲಕ ಚುನಾವಣಾ ಪ್ರಚಾರಕ್ಕೆ ಪಡೆಯನ್ನು ಸಜ್ಜುಗೊಳಿಸುತ್ತಿದೆ.

ಆದರೆ, ಅನಂತಕುಮಾರ್‌ ಪತ್ನಿ ತೇಜಸ್ವಿನಿ ಅನಂತಕುಮಾರ್‌ ಅವರೇ ಬಹುತೇಕ ಇಲ್ಲಿ ಕಣಕ್ಕಿಳಿಯಲಿದ್ದಾರೆ. ಅನಂತಕುಮಾರ್‌ ಅವಧಿಯಲ್ಲಿ ಆಗಿರುವ ಜನೌಷಧ ಕೇಂದ್ರ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳು ಬಿಜೆಪಿ ಗೆಲುವಿಗೆ ವರವಾಗಲಿವೆ. ಜತೆಗೆ ಪರ ಅನುಕಂಪದ ಅಲೆ ಕೆಲಸ ಮಾಡಲಿದೆ ಎಂಬ ವಿಶ್ವಾಸ ಬಿಜೆಪಿಯದ್ದು. ಅನುಕಂಪದ ಅಲೆ ಯಾವಾಗಲೂ ಕೆಲಸ ಮಾಡುವುದಿಲ್ಲ. ಉದಾಹರಣೆಗೆ ಜಯನಗರ ವಿಧಾನಸಭೆ ಕ್ಷೇತ್ರ ನಮ್ಮ ಮುಂದಿದೆ ಎಂಬ ವಾದ ಕಾಂಗ್ರೆಸ್‌ನದ್ದಾಗಿದೆ.

ಸಂಸದರಿಂದ ಬಂದ ಪ್ರಮುಖ ಕೊಡುಗೆಗಳು
-ಒಟ್ಟಾರೆ ನೀಡಿದ ಅನುದಾನ 3.52 ಕೋಟಿ 
-70 ಕಡೆ 93 ಸಿಸಿಟಿವಿ ಅಳವಡಿಕೆ. ಅಪರಾಧ ಪ್ರಕರಣ ಶೇ.50ರಷ್ಟು ಇಳಿಮುಖ
-ರಾಜ್ಯದ ಮೊದಲ ಜನೌಷಧ ಕೇಂದ್ರ ಸ್ಥಾಪನೆ
-3 ಶುದ್ಧ ಕುಡಿಯುವ ನೀರಿನ ಘಟಕಗಳು
-ಶಾಲಾ ಕೊಠಡಿಗಳ ನಿರ್ಮಾಣ

ನಿರೀಕ್ಷೆಗಳು
-ಹನುಮಂತನಗರ ಮುಖ್ಯರಸ್ತೆ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಸಂಚಾರದಟ್ಟಣೆ ಸಮಸ್ಯೆ ನಿವಾರಣೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ
-ವಿಧಾನಸಭಾ ಕ್ಷೇತ್ರ- ಬಸವನಗುಡಿ
-ವಾರ್ಡ್‌ಗಳು- 6
-ಬಿಜೆಪಿ- 6
-ಕಾಂಗ್ರೆಸ್‌- 0
-ಜೆಡಿಎಸ್‌- 0

-ಜನಸಂಖ್ಯೆ- 3,49,297
-ಮತದಾರರ ಸಂಖ್ಯೆ- 2,30,175
-ಪುರುಷರು- 1,17,851
-ಮಹಿಳೆಯರು- 1,12,324

2014ರ ಚುನಾವಣೆಯಲ್ಲಿ
ಚಲಾವಣೆಯಾದ ಮತಗಳು- 1,22,231 (ಶೇ. 55.46)
ಬಿಜೆಪಿ ಪಡೆದ ಮತಗಳು- 84,149 (ಶೇ. 68.8)
ಕಾಂಗ್ರೆಸ್‌ ಪಡೆದ ಮತಗಳು- 30,585 (ಶೇ. 25)
ಜೆಡಿಎಸ್‌ ಪಡೆದ ಮತಗಳು- 3,725 (ಶೇ. 3)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಶಾಸಕ- ಎಲ್‌.ಎ. ರವಿಸುಬ್ರಹ್ಮಣ್ಯ (ಬಿಜೆಪಿ)
-ಪಾಲಿಕೆಯಲ್ಲಿ ಕಾಂಗ್ರೆಸ್‌ ಸದಸ್ಯರು- 1
-ಬಿಜೆಪಿ ಸದಸ್ಯರು- 4
-ಜೆಡಿಎಸ್‌- 1

ಮಾಹಿತಿ: ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.