ಎನ್‌ಎಸ್‌ಎಸ್‌ ದೇಶಾಭಿವೃದ್ಧಿಗೆ ಪೂರಕ


Team Udayavani, Mar 19, 2019, 7:15 AM IST

deshabi.jpg

ತುಮಕೂರು: ಹಲವು ಬಗೆಯ ಚಟುವಟಿಕೆಗಳಿಂದ ಹಾಗೂ ಸರ್ವ ಸಮುದಾಯದ ಸಮ್ಮಿಲನದಿಂದ ದೇಶದಲ್ಲಿ ಸೃಜನಶೀಲ ಕಾರ್ಯಕ್ರಮಗಳು ಪ್ರಸ್ತುತಗೊಳ್ಳುತ್ತಿವೆ. ಜತೆಗೆ ಎನ್‌ಎಸ್‌ಎಸ್‌ನ ಕಾರ್ಯಗಳು ದೇಶದ ಅಭಿವೃದ್ಧಿಗೆ ಪೂರಕವಾಗಿವೆ ಎಂದು ತುಮಕೂರು ವಿವಿ ಕುಲಪತಿ ಪ್ರೊ.ವೈ.ಎಸ್‌.ಸಿದ್ದೇಗೌಡ ತಿಳಿಸಿದರು.

ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕ್ರೀಡಾ ಮತ್ತು ಯುವ ಸಬಲೀಕರಣ, ರಾಜ್ಯ, ರಾಷ್ಟ್ರೀಯ ಸೇವಾ ಶಿಬಿರ ಮತ್ತು ಸಿದ್ಧಾರ್ಥ ಉನ್ನತ ಶಿಕ್ಷಣ ಅಕಾಡೆಮಿ ಜಂಟಿಯಾಗಿ ಸೋಮವಾರ ಆಯೋಜಿಸಿದ್ದ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸೇವಾ ಮನೋಭಾವನೆ: ರಾಷ್ಟ್ರೀಯ ಭಾವೈಕ್ಯತೆ ಶಿಬಿರಗಳು ಸೇವಾ ಮನೋಭಾವನೆ ಬೆಳೆಸುತ್ತವೆ ಹಾಗೂ ದೇಶದ ಅಭಿವೃದ್ಧಿಗೆ ದಾರಿ ದೀಪವಾಗುತ್ತವೆ. ಯುವಕರು ತಮ್ಮ ಜೀವನದ ತಿರುವುಗಳನ್ನು ಕಂಡುಕೊಳ್ಳಲು ವೇದಿಕೆಯಾಗಿದ್ದು, ಇಲ್ಲಿ ಯಾವುದೇ ಜಾತಿ, ಧರ್ಮ, ಲಿಂಗ ಭೇದಗಳು ತಲೆದೂರುವುದಿಲ್ಲ. ಇದರಿಂದ ಸ್ಪರ್ಧಾತ್ಮಕ ಜಗದಲ್ಲಿ ಮುನ್ನುಗ್ಗಬಹುದು ಎಂದು ತಿಳಿಸಿದರು.

ಶಿಬಿರಾರ್ಥಿಯಾಗಿ ಸೇವೆ ಸಲ್ಲಿಸಿದ್ದೇನೆ: ಕ್ರೀಡೆ, ವಿವಿಧ ಬಗೆಯ ಕಲೆಗಳು, ರೆಡ್‌ ಕ್ರಾಸ್‌ ಇನ್ನಿತರ ಕಾರ್ಯಗಳು ಯುವಜನರ ಸೆಳೆಯುವಲ್ಲಿ ಸಫ‌ಲವಾಗುತ್ತದೆ. ಇದಲ್ಲದೆ ನಾನು ವಿದ್ಯಾರ್ಥಿ ದಿಸೆಯಲ್ಲಿ ಎನ್‌ಎಸ್‌ಎಸ್‌ನ ಶಿಬಿರಾರ್ಥಿಯಾಗಿ ಸೇವೆ ಸಲ್ಲಿಸಿದ್ದೇನೆಂದು ಸಂತಸ ವ್ಯಕ್ತಪಡಿಸಿದರು.

ಜ್ಞಾನ ಮುಖ್ಯವಾದದ್ದು: ಸಿದ್ಧಾರ್ಥ ಉನ್ನತ ಶಿಕ್ಷಣ ಅಕಾಡೆಮಿಯ ಉಪಕುಲಪತಿ ಡಾ.ಪಿ.ಬಾಲಕೃಷ್ಣ ಶೆಟ್ಟಿ ಮಾತನಾಡಿ, ದೇಶದ ಅಭಿವೃದ್ಧಿಗೆ ದತ್ತಾಂಶ ಸಂಗ್ರಹಣೆಗಿಂತ ಜ್ಞಾನ ಮುಖ್ಯವಾದದ್ದು, ಜಗತ್ತಿನಲ್ಲಿ ಬಲ, ಶ್ರೀಮಂತ ವ್ಯಕ್ತಿಗಳನ್ನು ಗುರುತಿಸಬಹುದು. ಆದರೆ, ಖುಷಿಯಾಗಿರುವವರನ್ನು ಈ ಶಿಬಿರಗಳಲ್ಲಿ ಕಾಣಬಹುದು. ಮತ್ತು ಜ್ಞಾನ ಕೇವಲ ಮಾತಲ್ಲ ಸೃಜನ ಶೀಲತೆಯ ಯೋಚನೆಯಾಗಬೇಕೆಂದು ತಿಳಿಸಿದರು.

ಅಭಿವೃದ್ಧಿಗೆ ಕೈಜೋಡಿಸಿ: ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎಂ.ಕೆ.ವೀರಯ್ಯ ಮಾತನಾಡಿ, ಈ ಶಿಬಿರವು ಸಮಾಜ ಸೇವೆ ಪ್ರತಿಪಾದಿಸುದಾಗಿದ್ದು, ಗಿಡಮರಗಳನ್ನು ಪೋಷಿಸುವುದು. ಪ್ರಾಣಿಸಂಕುಲ ವೀಕೋಪಗಳಲ್ಲಿ ಸಿಲುಕಿದವರನ್ನು ಕಾಪಾಡಲು ಮಹತ್ತರ ಪಾತ್ರ ವಹಿಸುತ್ತದೆ. ಆದ ಕಾರಣ ಶಿಬಿರಾರ್ಥಿಗಳು ಸಕಾರಾತ್ಮಕ ಯೋಚನೆಗಳಿಂದ ದೇಶದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಕಿವಿಮಾತು ಹೇಳಿದರು.

ಸಮಾರಂಭದಲ್ಲಿ ಕಾಲೇಜಿನ ರಿಜಿಸ್ಟ್ರಾರ್‌ ಡಾ.ಎಂ.ಝಡ್‌. ಕುರಿಯನ್‌, ಡೀನ್‌ ಡಾ.ಎಂ ಸಿದ್ದಪ್ಪ, ಕಾರ್ಯಕ್ರಮ ಸಂಯೋಜಕ ಡಾ. ಬಿ.ಎಸ್‌. ರವಿಕಿರಣ್‌, ಎನ್‌ಎಸ್‌ಎಸ್‌ ಅಧಿಕಾರಿ ಪ್ರೊ.ಎಸ್‌.ಎಸ್‌.ಜೀವಿತ್‌, ಸಂಸ್ಥೆಯ ಆಡಳಿತಾಧಿಕಾರಿ ಡಾ.ವೈ.ಎಂ.ರೆಡ್ಡಿ, ಅನಂತಪುರ, ಪಾಂಡಿಚೇರಿ, ಮಧುರೈ, ಕೇರಳ, ಅಂಕೋಲ, ಮೈಸೂರು, ಬೆಂಗಳೂರು, ಮಂಗಳೂರು ವಿವಿಗಳ ಶಿಬಿರಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹತ್ತು ಶಿಬಿರ ಹಮ್ಮಿಕೊಂಡಿದ್ದು ಇದು ಒಂದಾಗಿದೆ. ದೇಶ್ಯಾದ್ಯಂತ ನಲವತ್ತು ಲಕ್ಷ ಶಿಬಿರಾರ್ಥಿಗಳು ಇದ್ದು, ಸರ್ಕಾರವು ಇದನ್ನು ಪ್ರೋತ್ಸಾಹಿಸುತ್ತಿದೆ. ಹಾಗೆಯೇ ಎನ್‌ಎಸ್‌ಎಸ್‌ ಸಮುದಾಯ, ಜಾತಿ, ಧರ್ಮ ಮೀರಿ ಭಾವೈಕ್ಯತೆ ಮೆರೆಯಲು, ಪ್ರೀತಿ, ಗೌರವವನ್ನು ಹಂಚಿಕೊಳ್ಳಲು ಪೂರಕ.
-ಡಾ.ಗಣನಾಥ್‌ ಶೆಟ್ಟಿ, ರಾಜ್ಯ ರಾಷ್ಟ್ರೀಯ ಸೇವಾ ಶಿಬಿರದ ಅಧಿಕಾರಿ 

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.