ವಸಾಯಿ ಪಶ್ಚಿಮ  ಶ್ರೀ ಗುರು ನಾರಾಯಣ ಸೇವಾ ಸಮಿತಿ:ವಾರ್ಷಿಕ ಮಹಾಪೂಜೆ


Team Udayavani, Mar 19, 2019, 2:00 PM IST

1802mum05.jpg

ಮುಂಬಯಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಬದುಕು ಸನಾತನ ಧರ್ಮಕ್ಕೆ ಪೂರಕವಾಗಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಅವರ ತತ್ವಾದರ್ಶಗಳು, ಚಿಂತನೆಗಳು ಅಮೂಲ್ಯವಾಗಿದ್ದವು. ಅಧ್ಯಾತ್ಮಿಕ ಜ್ಞಾನವನ್ನು ಶ್ರೀಮಂತಗೊಳಿಸಿ ನೊಂದ ಹೃದಯಗಳನ್ನು ಸಾಂತ್ವನಗೊಳಿಸಿ ಬೆಳೆಸಿದರು. ದುರ್ಬಲರ ಸೇವೆಯಲ್ಲಿ  ಭಗವಂತನನ್ನು ಕಂಡ ಅವರ ಪ್ರಾಚೀನ ಮೌಲ್ಯಾಧಾರಿತ ಸಂದೇಶಗಳನ್ನು ಅನುಷ್ಠಾನಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಮಾಜ ಸೇವಕ, ಸೇವಾ ಸಮಿತಿಯ ಕಾರ್ಯದರ್ಶಿ ಒ. ಪಿ. ಪೂಜಾರಿ ಅವರು ಅಭಿಪ್ರಾಯಿಸಿದರು.

ಮಾ. 17ರಂದು ವಸಾಯಿ ಪಶ್ಚಿಮದ,  ಮೈತ್ರಿ ಪಾರ್ಕಿನ, ಗಣೇಶದೀಪ್‌ ಕಟ್ಟಡದಲ್ಲಿರುವ ಶ್ರೀ ಗುರು ನಾರಾಯಣ ಸೇವಾ ಸಮಿತಿ ಇದರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆಯ ಸಂಸ್ಮರ ಣಾರ್ಥ ಆಯೋಜಿಸಲಾದ  23ನೇ ವಾರ್ಷಿಕ ಮಹಾಪೂಜೆಯಲ್ಲಿ ಮಾತ ನಾಡಿದ ಅವರು, ಜಾತಿ,ಮತ,ವರ್ಗ ಭೇದಗಳನ್ನು ಮೀರಿ  ನಿಂತ ನಮ್ಮ ಸೇವಾಸಮಿತಿ  ಇತರ  ಸಮುದಾಯ ಸಂಘಟನೆಯೊಂದಿಗೆ ಪ್ರೀತಿ-ಸೌಹಾರ್ದತೆಯ ವಾತಾವರಣದಲ್ಲಿ ಬೆಳೆದಿದೆ. ಕೂಡಿ ಬಾಳುವ ಕಲೆ ನಮ್ಮದಾಗಲಿ ಎಂದು ಹಾರೈಸಿದರು.

ಸಮಾರಂಭದಲ್ಲಿ ಅನ್ನದಾನ ಸೇವಾರ್ಥಿ ಮುದ್ದು ಪಿ. ಪೂಜಾರಿ ದಂಪತಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಶ್ರೀ ಗುರು ನಾರಾಯಣ ಸೇವಾ ಸಮಿತಿಯ ಅಧ್ಯಕ್ಷ ಜಯರಾಮ ಕೆ. ಪೂಜಾರಿ, ಕಾರ್ಯದರ್ಶಿ ಒ. ಪಿ. ಪೂಜಾರಿ, ಉಪ ಕಾರ್ಯದರ್ಶಿ ಎನ್‌. ಪಿ. ಮಲ್ಲಾರ್‌, ಕೋಶಾಧಿಕಾರಿ ಭೋಜ ಟಿ. ಅಂಚನ್‌,  ಸದಸ್ಯರಾದ ಕೆ. ಬಿ. ಸುವರ್ಣ, ಎಚ್‌.  ಜಿ. ಕುಂದರ್‌, ದಾಸು ಎ. ಕುಂದರ್‌, ವಿಶ್ವೇಂದ್ರ ಅಮೀನ್‌, ಪೂಜಾ ಸಮಿತಿಯ ಅಧ್ಯಕ್ಷ ಕೇಶವ ಪೂಜಾರಿ, ಕಾರ್ಯದರ್ಶಿ ಮುದ್ದು ಪಿ. ಪೂಜಾರಿ, ಕೋಶಾಧಿಕಾರಿ ಶೇಖರ ಕೆ. ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಎಸ್‌. ಕೋಟ್ಯಾನ್‌, ಕಾರ್ಯದರ್ಶಿ ಜಯಶ್ರೀ ಪಿ. ಅಂಚನ್‌, ಕೋಶಾಧಿಕಾರಿ ಜಯಂತಿ ಎನ್‌. ಮಲ್ಲಾರ್‌, ಯುವ ವಿಭಾಗದವರು, ಕಾರ್ಯಕಾರಿ ಸಮಿತಿ ಸದಸ್ಯರು,  ಮಹಿಳಾ ಸದಸ್ಯೆಯರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಭಜನೆ, ಅರಸಿನ ಕುಂಕುಮ, ಮಧ್ಯಾಹ್ನ ಮಹಾಮಂಗಳಾರತಿ, ಅನಂತರ ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆ ನೆರವೇರಿತು. ವಸಾಯಿ ಪರಿಸರದ ಉದ್ಯಮಿಗಳು, ಸ್ಥಳೀಯ ನಗರ ಸೇವಕರು, ರಾಜಕೀಯ ಮುಖಂಡರು, ಪರಿಸರದ ತುಳು ಕನ್ನಡಿ ಗರು, ಸಮುದಾಯ ಸಂಘಟನೆಗಳ ಪ್ರತಿನಿಧಿಗಳು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಶ್ರೀಗುರು ದೇವರ ಅಶೀರ್ವಾದ ಪಡೆದರು. 

  ಚಿತ್ರ-ವರದಿ: ರಮೇಶ ಅಮೀನ್‌   

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.