ಚಿಕ್ಕಕೊಳತ್ತೂರು  ಶ್ರೀಬಾವಿ ಬಸವಣ್ಣ ಪೂಜಾ ಮಹೋತ್ಸವ ಸಂಪನ್ನ


Team Udayavani, Mar 20, 2019, 1:00 AM IST

chikka-kolattur.jpg

ಶನಿವಾರಸಂತೆ: ಸಮೀಪದ ಚಿಕ್ಕಕೊಳತ್ತೂರು ಗ್ರಾಮದಲ್ಲಿರುವ ಶ್ರೀ ಬಾವಿ ಬಸವಣ್ಣ ದೇವರ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಚಿಕ್ಕಕೊಳತ್ತೂರು ಗ್ರಾಮದ ಗ್ರಾಮ ದೇವರಾದ ಬಾವಿ ಬಸವಣ್ಣ ಈ ಭಾಗದ ಜನರಿಗೆ ಕುಲದೇವತೆ ಕೂಡ ಆಗಿದೆ. ಈ ಗ್ರಾಮದ ಹೆಣ್ಣು ಮಕ್ಕಳನ್ನು ದೂರದ ಊರಿಗೆ ವಿವಾಹ ಮಾಡಿಕೊಟ್ಟ ಮೇಲೆ ವಿವಾಹಿತ ಹೆಣ್ಣು ಮಕ್ಕಳು ತಪ್ಪದೆ ಪ್ರತಿವರ್ಷವೂ ತವರೂರಿಗೆ ಬಂದು ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಬಾವಿ ಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಇದೆ ಗ್ರಾಮದ ಯುವಕರು ಹಾಗೂ ಇಲ್ಲಿಂದ ಬೇರೆ ಊರಿಗೆ ವಲಸೆ ಹೋದವರೂ ಸಹ ತವರೂರಿಗೆ ಬಂದು ವರ್ಷಕ್ಕೊಮ್ಮೆ ನಡೆಯುವ ಬಾವಿ ಬಸವಣ್ಣ ಪೂಜ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

ಅಕ್ಕಪಕ್ಕದ ಗ್ರಾಮಸ್ಥರು, ಭಕ್ತರು ತಮ್ಮ ಇಷ್ಟಾರ್ಥ ಕೋರಿ ಬಾವಿ ಬಸವಣ್ಣ ದೇವರಿಗೆ ಹರಕೆ ಮಾಡಿಕೊಳ್ಳುತ್ತಾರೆ, ಕೆಲವು ರಾಜಕಾರಣಿಗಳು ಸಹ ಇಷ್ಟಾರ್ಥ ಕೋರಿ ಬಾವಿ ಬಸವಣ್ಣ ದೇವರಲ್ಲಿ ಹರಿಕೆ ಸಲ್ಲಿಸುತ್ತಾರೆ ಈ ಎಲ್ಲ  ಭಕ್ತರು ಬಾವಿ ಬಸವಣ್ಣ ದೇವರು ತಮ್ಮ ಬೇಡಿಕೆ ಈಡೇರಿಸಿದ ನಂಬಿಕೆಯಿಂದ ಬಾವಿ ಬಸವಣ್ಣ ಪೂಜಾ ಮಹೋತ್ಸವದಲ್ಲಿ ನೂರ ಒಂದು ಈಡುಗಾಯಿ ಒಡೆ ಯುವ ಮೂಲಕ ಹಾಗೂ ಕೈಹಿಡಿ ಗಳಷ್ಟು ನಾಣ್ಯವನ್ನು ಬಾವಿಯೊಳಗೆ ಉದ್ಭವಗೊಂಡಿದೆ ಎಂದು ಹೇಳಲಾದ ಬಾವಿ ಬಸವಣ್ಣ ದೇವರಿಗೆ ಹರಕೆ ಸಲ್ಲಿಸುತ್ತಾರೆ.

ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಬಾವಿಯೊಳಗಿರುವ ಉದ್ಬವ ಬಸವಣ್ಣ ದೇವರಿಗೆ ಹರಕೆ ರೂಪದಲ್ಲಿ ಹಿಡಿ ನಾಣ್ಯವನ್ನು ಹಾಕುತ್ತಾರೆ. ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಭಕ್ತರು ಬಾವಿಯೊಳಗೆ ಹಾಕಿದ ನಾಣ್ಯವನ್ನು ಮುಂದಿನ ವರ್ಷ ನಡೆಯುವ ಪೂಜಾ ಮಹೋತ್ಸವದ ಖರ್ಚಿಗೆ ಬಳಕೆ ಮಾಡಿಕೊಳ್ಳುತ್ತಾರೆ. 

ಸೋಮವಾರ ಬೆಳಗ್ಗೆಯಿಂದ ಸಂಜೆ ತನಕ ಚಿಕ್ಕಕೊಳತ್ತೂರು ಬಾವಿ ಬಸವಣ್ಣ ದೇವರ ವಾರ್ಷಿಕ ಪೂಜಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಅಕ್ಕಪಕ್ಕದ ಗ್ರಾಮಗಳಿಂದ ಸಾವಿರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹರಕೆ ಸಲ್ಲಿಸಿದ್ದರು. ಪೂಜಾ ಮಹೋತ್ಸವ ಪ್ರಯುಕ್ತ ಅನ್ನ ಸಂತರ್ಪಣೆ ನಡೆಸಲಾಯಿತು.  ಗ್ರಾಮದ ಪ್ರಮುಖರಾದ ಸಿ.ಕೆ.ಕೊಮರಪ್ಪ, ಸಿ.ಜೆ.ಗಿರೀಶ್‌, ಬೆಳ್ಳಿಗೌಡ ಮುಂತಾದವರಿದ್ದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.