ಬಂಡೀಪುರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡ್ಗಿಚ್ಚು
Team Udayavani, Mar 20, 2019, 12:30 AM IST
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿಯ ರುದ್ರ ನರ್ತನಕ್ಕೆ ನೂರು ಎಕರೆಗೂ ಹೆಚ್ಚಿನ ಅರಣ್ಯ ಪ್ರದೇಶ ಭಸ್ಮವಾಗಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಈ ಮೊದಲಿಗೆ ತಮಿಳುನಾಡಿಗೆ ಸೇರಿದ ಕನ್ನಡಿಗರ ಯಾತ್ರಾ ಕೇಂದ್ರ ಕೊಂಗಳ್ಳಿ ಬೆಟ್ಟದ ಬಳಿ ಮಧುಮಲೈ ರಾಷ್ಟ್ರೀಯ ಉದ್ಯಾನದಲ್ಲಿಮಂಗಳವಾರ ಸಂಜೆ 6 ಗಂಟೆ ವೇಳೆಗೆ ಪ್ರಾರಂಭವಾದ ಬೆಂಕಿಯು ನಂತರ ಬಂಡೀಪುರ ರಾಷ್ಟ್ರೀಯ ಉದ್ಯಾನದ ಕುಂದುಕೆರೆ ಅರಣ್ಯ ವಲಯಕ್ಕೂ ಹಬ್ಬಿದೆ. ಕುಂದುಕೆರೆ ಅರಣ್ಯ ವಲಯದ ಕುಂದುಕೆರೆ ಗ್ರಾಮದ ಬಳಿಯಿಂದ ಕೇವಲ ಒಂದು ಕಿ.ಮೀ.ದೂರದಲ್ಲಿಯೇ ಬೆಂಕಿ ಉರಿಯುತ್ತಿದೆ. ನಂತರ ಬಂಡೀಪುರ ಅರಣ್ಯ ವಲಯದತ್ತ ಬೆಂಕಿಯು ಹಬ್ಬುತ್ತಿದ್ದು, ಕುಂದುಕೆರೆ ಅರಣ್ಯ ವಲಯದ ಕಾಡಂಚಿನ ಗ್ರಾಮಗಳಾದ ಕಡಬೂರು, ಚಿರಕನಹಳ್ಳಿ ಮತ್ತು ಉಪಕಾರ ಕಾಲೋನಿಗಳ ಅರಣ್ಯದ ಗಡಿಯಂಚನ್ನು ದಾಟಿ ಬೆಂಕಿಯು ಮುನ್ನುಗ್ಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್