ಶಿಕ್ಷಕರ ವರ್ಗಾವಣೆ ಅಧಿನಿಯಮಕ್ಕೆ ಗೌರ್ನರ್‌ ಅಂಕಿತ


Team Udayavani, Mar 20, 2019, 12:30 AM IST

vidana-souda.jpg

ಬೆಂಗಳೂರು: ಆಡಳಿತ ಪಕ್ಷದ ಸದಸ್ಯರ ತೀವ್ರ ವಿರೋಧಕ್ಕೆ ಒಳಗಾಗಿದ್ದ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿರುವ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ(ಶಿಕ್ಷಕ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಅಧಿನಿಯಮ 2018ಕ್ಕೆ ರಾಜ್ಯಪಾಲ ರಿಂದ ಒಪ್ಪಿಗೆ ಪಡೆಯಲು ಸರ್ಕಾರ ಯಶಸ್ವಿಯಾಗಿದೆ.

ವರ್ಗಾವಣೆ ಕೌನ್ಸೆಲಿಂಗ್‌ ಪ್ರಕ್ರಿಯೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಲ್ಲಿ ತುಂಬುವ ಅಗತ್ಯವಿರುವ ಒಂದು ಸ್ಥಳವನ್ನು ಯಾವೊಬ್ಬ ಶಿಕ್ಷಕನೂ ಆಯ್ಕೆ ಮಾಡಿಕೊಳ್ಳದೇ ಇದ್ದಾಗ ಸರ್ಕಾರವೇ ಇದನ್ನು ಭರ್ತಿ ಮಾಡಲಿದೆ ಎಂಬ ಪ್ರಮುಖಾಂಶ ಸಹಿತವಾದ ತಿದ್ದುಪಡಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ವರ್ಗಾವಣೆ ಪ್ರಕ್ರಿಯೆಗೆ ಬೇಕಾದ ಮಾರ್ಗಸೂಚಿ ಇಲಾಖೆಯಿಂದ ಹೊರಡಿಸುವ ಸಾಧ್ಯತೆ ಇದೆ.

ಆಡಳಿತ ಪಕ್ಷದಿಂದಲೇ ವಿರೋಧ ವ್ಯಕ್ತವಾಗಿತ್ತು: ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ)(ತಿದ್ದುಪಡಿ)ವಿಧೇಯಕ-2018ಕ್ಕೆ ಫೆಬ್ರವರಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಆಡಳಿತ ಪಕ್ಷದ ಸದಸ್ಯರು ತೀವ್ರ ವಿರೋಧದ ವ್ಯಕ್ತಪಡಿಸಿದ್ದರು. ಆದರೂ, ಉಭಯ ಸದನಗಳಲ್ಲೂ ಅಂಗೀಕಾರಗೊಂಡಿತ್ತು.

ಮಾರ್ಗಸೂಚಿ ನಿಯಮದ ನಂತರ ಮತ್ತಷ್ಟು ವಿರೋಧ ವ್ಯಕ್ತವಾಗುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಈ ತಿದ್ದುಪಡಿ ಭ್ರಷ್ಟಾಚಾರಕ್ಕೆ ನೇರ ಅವಕಾಶ ಮಾಡಿಕೊಡುತ್ತದೆ. ಬಲಿಷ್ಠ ಶಿಕ್ಷಕರು ಸುಲಭದಲ್ಲಿ ವರ್ಗಾವಣೆ ಪಡೆಯಲಿದ್ದಾರೆ. ಈ ಹುದ್ದೆಯ ವರ್ಗಾವಣೆಗಾಗಿಯೇ ದಲ್ಲಾಳಿಗಳು ಹುಟ್ಟಿಕೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್‌ ನಲ್ಲಿ ಆಡಳಿತ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು

ಪ್ರಮುಖ ತಿದ್ದುಪಡಿ
ಶಿಕ್ಷಕರು ವರ್ಗಾವಣೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಲು ಇದ್ದ ಕನಿಷ್ಠ ಸೇವಾವಧಿಯನ್ನು 5 ವರ್ಷದಿಂದ 3 ರ್ಷಕ್ಕೆಇಳಿಸಲಾಗಿದೆ. ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣೆಗೆ ಸಂಬಂಧಿಸಿದಂತೆ ನಗರಪಾಲಿಕೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳನ್ನು ನಗರ ಪ್ರದೇಶದ ವ್ಯಾಪ್ತಿಯೊಳಗೆ ಸೇರುವುದಿಲ್ಲ. ಎ ವಲಯ(ನಗರ ಪ್ರದೇಶ)ದಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ಶಿಕ್ಷಕರನ್ನು ಸಿ ವಲಯ(ಗ್ರಾಮೀಣ ಪ್ರದೇಶ)ಕ್ಕೆ ಶೇ.5ರಷ್ಟು ಮಿತಿಯಲ್ಲಿ ಕಡ್ಡಾಯವರ್ಗಾವಣೆ ಮಾಡಲಾಗಿದೆ. ಒಬ್ಬ ಶಿಕ್ಷಕ ಅಥವಾ ಆ ಶಿಕ್ಷಕ ದಂಪತಿ ಅಥವಾ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಮತ್ತು ಅದಕ್ಕೆ ವೈದ್ಯಕೀಯ ಚಿಕಿತ್ಸೆ ದೊರೆಯದಿದ್ದಲ್ಲಿ, ದಂಪತಿ ಶಿಕ್ಷಕರ ವರ್ಗಾವಣೆಗಾಗಿ ಒಂದೇ ಸ್ಥಳದಲ್ಲಿ ನಿಯೋಜಿಸಲು ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲಾಗುತ್ತದೆ. ದಂಪತಿ ಶಿಕ್ಷಕರಲ್ಲಿ ಯಾರಾದರು ಒಬ್ಬರು ಸರ್ಕಾರಿ ಅಥವಾ ಸಾರ್ವಜನಿಕ ವಲಯದ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದರೆ ಆ ಪ್ರದೇಶಕ್ಕೆ ವರ್ಗಾವಣೆ ಮಾಡಲು ತಿದ್ದುಪಡಿ ತರಲಾಗಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.