ಚೆನ್ನೈನಲ್ಲೂ ಕನ್ನಡದ ಅಡಚಣೆ!


Team Udayavani, Mar 20, 2019, 5:42 AM IST

adachanegaagi-kshemisi.jpg

ಕನ್ನಡ ಚಿತ್ರಗಳಿಗೆ ಈಗ ಮೆಲ್ಲನೆ ಪರಭಾಷೆಯಲ್ಲೂ ಬೇಡಿಕೆ ಹೆಚ್ಚುತ್ತಿದೆ. ಇದುವರೆಗೆ ಸ್ಟಾರ್‌ ನಟರ ಚಿತ್ರಗಳು ಮಾತ್ರ ತೆಲುಗು, ತಮಿಳು ಚಿತ್ರರಂಗದಲ್ಲಿ ತೆರೆಕಾಣುತ್ತಿದ್ದವು. ಈಗ ಹೊಸಬರೇ ಸೇರಿ ಮಾಡಿರುವ “ಅಡಚಣೆಗಾಗಿ ಕ್ಷಮಿಸಿ’ ಚಿತ್ರ ಕೂಡ ಚೆನ್ನೈನಲ್ಲಿ ತೆರೆ ಕಾಣುತ್ತಿರುವುದು ವಿಶೇಷ. ಹೌದು, ಇತ್ತೀಚೆಗಷ್ಟೇ “ಅಡಚಣೆಗಾಗಿ ಕ್ಷಮಿಸಿ’ ಚಿತ್ರದ ಪೂರ್ವಭಾವಿ ಪ್ರದರ್ಶನವನ್ನು ನಾರ್ವೆ ದೇಶದಲ್ಲಿ ಏರ್ಪಡಿಸಲಾಗಿತ್ತು.

ಅಲ್ಲಿನ ಕನ್ನಡಿಗರು ಸಿನಿಮಾ ನೋಡಿ, ಮೆಚ್ಚಿಕೊಂಡಿದ್ದಲ್ಲದೆ, ಸೋಷಿಯಲ್‌ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಒಳ್ಳೆಯ ಅನಿಸಿಕೆ ವ್ಯಕ್ತಪಡಿಸಿದ್ದರು. ಈ ಚಿತ್ರ ಮಾ.22 ರಂದು ಬಿಡುಗಡೆಯಾಗುತ್ತಿದೆ. ಆರಂಭದಿಂದಲೂ ಪೋಸ್ಟರ್‌ ಮೂಲಕ ಕುತೂಹಲ ಹುಟ್ಟಿಸಿದ್ದ ಈ ಚಿತ್ರ ಟೀಸರ್‌, ಟ್ರೇಲರ್‌ನಲ್ಲೂ ಆ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿತ್ತು. ಈಗ ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿರುವ ಚಿತ್ರ ಚೆನ್ನೈನಲ್ಲೂ ಬಿಡುಗಡೆಯಾಗುತ್ತಿದೆ ಎಂಬುದು ವಿಶೇಷ.

ಕನ್ನಡದ ಅದರಲ್ಲೂ ಹೊಸಬರ ಚಿತ್ರ ಚೆನ್ನೈನ ಪಿವಿಆರ್‌ನಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ಹೇಳುವ ಹೀರೋ ಕಮ್‌ ನಿರ್ಮಾಪಕ ಪ್ರದೀಪ್‌ ವರ್ಮ, ಜರ್ಮನ್‌ ಮತ್ತು ಆಸ್ಟ್ರೇಲಿಯಾದಲ್ಲೂ ಚಿತ್ರ ಬಿಡುಗಡೆಗೆ ಬೇಡಿಕೆ ಬಂದಿದೆ. ಅಲ್ಲಿನ ಕನ್ನಡಿಗರು ಚಿತ್ರದ ಟೀಸರ್‌ ಮೆಚ್ಚಿಕೊಂಡು, ಸಿನಿಮಾ ಬಿಡುಗಡೆ ಮಾಡುವಂತೆ ಕೋರಿಕೊಂಡಿದ್ದಾರೆ. ಇಲ್ಲಿ ಬಿಡುಗಡೆ ಬಳಿಕ ಅಲ್ಲೂ ಸಹ ಬಿಡುಗಡೆಯಾಗಲಿದೆ.

ಇನ್ನು, ರಾಜ್ಯಾದ್ಯಂತ ಸುಮಾರು 60 ಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ’ ಎಂದು ವಿವರ ಕೊಡುತ್ತಾರೆ ಪ್ರದೀಪ್‌ ವರ್ಮ. ಚಿತ್ರಕ್ಕೆ ಭರತ್‌ ನಾವುಂದ ನಿರ್ದೇಶಕರು. ಚಿತ್ರದಲ್ಲಿ ಒಂಭತ್ತು ಮುಖ್ಯ ಪಾತ್ರಗಳಿದ್ದು, ಅವುಗಳ ಸುತ್ತವೇ ಚಿತ್ರ ಸಾಗಲಿದೆ. ಸಸ್ಪೆನ್ಸ್‌ ಥ್ರಿಲ್ಲರ್‌ ಅಂಶಗಳು ಚಿತ್ರದ ಪ್ರಮುಖ ಅಂಶ ಎನ್ನುವ ನಿರ್ದೇಶಕರು, ಇದೊಂದು ಸೈಕಲಾಜಿಕಲ್‌ ಥ್ರಿಲ್ಲರ್‌ ಕಥೆ.

ಥ್ರಿಲ್ಲರ್‌ ಅಂದಾಗ, ನೋಡುಗ ಒಂದೊಂದು ದೃಶ್ಯವನ್ನೂ ಕಲ್ಪನೆ ಮಾಡಿಕೊಳ್ಳುತ್ತಾನೆ. ಮುಂದಿನ ದೃಶ್ಯದ ಕಲ್ಪನೆಗೆ ಅಡಚಣೆ ಮಾಡುವ ಪ್ರಯತ್ನ ಚಿತ್ರಕಥೆಯಲ್ಲಿದೆ. ಹಾಗಾಗಿ ಆ ಶೀರ್ಷಿಕೆ ಇಡಲಾಗಿದೆ. ಇನ್ನು, ಇಡೀ ಚಿತ್ರ ಮರ್ಡರ್‌ ಮಿಸ್ಟ್ರಿ ಹಿಂದೆ ನಡೆಯಲಿದೆ. ಇಲ್ಲಿ ಒಂದು ಕಥೆ, ಎರಡು ಚಿತ್ರಕಥೆಗಳಿವೆ ಎನ್ನುತ್ತಾರೆ ಭರತ್‌ ನಾವುಂದ. ಚಿತ್ರಕ್ಕೆ ಗಂಗು ಕ್ಯಾಮೆರಾ ಹಿಡಿದಿದ್ದಾರೆ. ಬೆಂಗಳೂರು, ಮಡಿಕೇರಿಯಲ್ಲಿ ಚಿತ್ರೀಕರಣ ನಡೆದಿದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.