ಬರಿದಾಗುತ್ತಿದೆ ನದಿ ಒಡಲು: ಕುಡಿಯುವ ನೀರಿಗೆ ಬರ ಭೀತಿ


Team Udayavani, Mar 20, 2019, 6:12 AM IST

20-march-5.jpg

ಬೆಳ್ತಂಗಡಿ : ದಿನೇ ದಿನೇ ಏರುತ್ತಿರುವ ತಾಪಮಾನದಿಂದ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಬಾವಿ, ಕೆರೆ, ಕೊಳವೆ ಬಾವಿಗಳು ತಳ ಹಿಡಿಯುತ್ತಿವೆ. ನೀರಿನ ಒರತೆ ಕಡಿಮೆಯಾಗುತ್ತಿರುವುದರಿಂದ ಕುಡಿಯುವ ನೀರಿಗೆ ಬರ ಭೀತಿಯಿದೆ. ಕೃಷಿಕರು ಕಂಗಾಲಾ ಗಿದ್ದಾರೆ. ಪ್ರಾಣಿ, ಪಕ್ಷಿ ಸಂಕುಲ ನೀರಿನ ದಾಹಕ್ಕೆ ಹಾತೊರೆಯುವಂತಾಗಿದೆ. ನದಿ, ಕೆರೆಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿರುವುದರಿಂದ ವಿವಿಧ ಪ್ರಭೇದಗಳ ಮತ್ಸé ಸಂಕುಲವೂ ಅವನತಿಯತ್ತ ಮುಖ ಮಾಡತೊಡಗಿದೆ.

 ಕ್ಷೀಣಿಸಿದ ಹರಿವು
ತಾಲೂಕಿನಾದ್ಯಂತ ಬಹು ತೇಕ ನದಿಗಳು ಬತ್ತುತ್ತಿದ್ದು, ನೇತ್ರಾವತಿ, ಸೋಮಾವತಿ, ಮೃತ್ಯುಂಜಯ ಮೊದಲಾದ ನದಿಗಳಲ್ಲಿ ನೀರಿನ ಹರಿವು ಕ್ಷೀಣಿ ಸಿದೆ. ಬೆಳ್ತಂಗಡಿ ನಗರ ವ್ಯಾಪ್ತಿಗೆ ನೀರಿನಾಶ್ರಯವಾಗಿರುವ ಸೋಮಾವತಿ ನದಿ ವರ್ಷಂಪ್ರತಿ ಎಪ್ರಿಲ್‌ ಕೊನೆಯಲ್ಲಿ ಬತ್ತುತ್ತಿದ್ದು, ಈ ಬಾರಿ ಮಾರ್ಚ್‌ ಆರಂಭದಲ್ಲೇ ಬತ್ತಿದ್ದು, ಬೆಳ್ತಂಗಡಿ ನಗರದಲ್ಲಿ ನೀರಿನ ಕೊರತೆ ಆಗುವ ಸೂಚನೆ ನೀಡಿದಂತಿದೆ. 

ಬೆಳ್ತಂಗಡಿ ನಗರಕ್ಕೆ ಸುಧಾರಿತ ನೀರು ಸರಬರಾಜು ಮಾಡುವ ಉದ್ದೇಶದಿಂದ ಇಲ್ಲಿನ ಸೋಮಾವತಿ ನದಿ ದಡದಲ್ಲಿ ಅಂದಾಜು 13 ಕೋ. ರೂ. ವೆಚ್ಚ ದಲ್ಲಿ ಜ್ಯಾಕ್‌ವೆಲ್‌ ಹಾಗೂ ಪಂಪ್‌ಹೌಸ್‌ ನಿರ್ಮಿಸಿ ಇದರಲ್ಲಿ ಶುದ್ಧೀಕರಿಸಿದ ನೀರು ನಗರದ ಬಹುತೇಕ ಕಡೆಗೆ ಉಪಯೋಗಕ್ಕೆ ಬಳಸಲಾಗುತ್ತಿದೆ. ಈ ಟ್ಯಾಂಕ್‌ಗೆ ನೀರು ತುಂಬಲು ಮಳೆಗಾಲ ಮುಗಿದ ಬಳಿಕ ತಾತ್ಕಾಲಿಕವಾಗಿ ಮಣ್ಣಿನಿಂದ ಕಟ್ಟವನ್ನು ನಿರ್ಮಾಣ ಮಾಡಲಾಗುತ್ತದೆ. ಆದರೆ ಈ ಬಾರಿ ಕಟ್ಟ ನಿರ್ಮಿಸಿದ ಕೆಲವು ದಿನಗಳಲ್ಲೇ ನೀರಿನ ಪ್ರಮಾಣ ಕಡಿಮೆಯಾಗಿ ನೀರಿನ ಬರ ಎದುರಿಸುವ ಮುನ್ಸೂಚನೆ ರವಾನೆ ಮಾಡಿದಂತಿದೆ. ಇನ್ನು ಅನೇಕರು ನಗರ ಪ್ರದೇಶದಲ್ಲಿರುವ ಕೊಳವೆ ಬಾವಿಗಳನ್ನು ನಂಬಿದ್ದು ಅದರಲ್ಲೂ ಎಪ್ರಿಲ್‌, ಮೇ ತಿಂಗಳಲ್ಲಿ ಜಲಮಟ್ಟ ಇಳಿಕೆಯಾಗುವ ಸಾಧ್ಯತೆಯಿದೆ.

ಕೊಳವೆ ಬಾವಿಗೆ ಬೇಡಿಕೆ
ತಾಲೂಕಿನಾದ್ಯಂತ ಕೆಲವು ಕಡೆಗಳಲ್ಲಿ ಕೊಳವೆ ಬಾವಿ ತೆಗೆದರೂ ನೀರು ಸಿಗದೇ ಇರುವ ಉದಾಹರಣೆಗಳಿವೆ. ಒಂದು ಕೊಳವೆ ಬಾವಿಯನ್ನು ಸುಮಾರು 700 ಅಡಿ ತನಕ ಕೊರೆಯಬೇಕಾದ ಪರಿಸ್ಥಿತಿ ಇದ್ದು, ಇದಕ್ಕೆ ಸುಮಾರು 1.5 ಲಕ್ಷ ರೂ. ತನಕ ವೆಚ್ಚ ಮಾಡಬೇಕಾಗಿದೆ.

 ದುರಸ್ತಿ ಕಾರ್ಯವಾಗಲಿ
ತಾಲೂಕಿನ ಕೆಲವು ಗ್ರಾಮಗಳಲ್ಲಿರುವ ಅಲ್ಪಸ್ವಲ್ಪ ನೀರಿದ್ದು, ಪಾಳು ಬಿದ್ದಿರುವ ಸರಕಾರಿ ಬಾವಿ, ಕೆರೆಗಳ ದುರಸ್ತಿ ಕಾರ್ಯ ನಡೆಸಿದರೆ ಗ್ರಾಮೀಣ ಭಾಗದ ಕೆಲವು ಕುಟುಂಬಗಳಿಗೆ ನೀರಿನ ಪ್ರಯೋಜನವಾಗಬಹುದು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.