ಲೋಕಸಭೆಯಲ್ಲಿ ಬಿಜೆಪಿ ಜಪ
Team Udayavani, Mar 20, 2019, 6:35 AM IST
ಕ್ಷೇತ್ರದ ವಸ್ತುಸ್ಥಿತಿ: ಸತತ ಎರಡನೇ ಅವಧಿಗೆ ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೂ, ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನ ಬಿಜೆಪಿ ಪರವಾಗಿದ್ದಾರೆ. 18 ವರ್ಷಗಳ ಕಾಲ ಆನೇಕಲ್ ಬಿಜೆಪಿಯ ಭದ್ರಕೋಟೆಯಾಗಿತ್ತಾದರೂ, 2013ರ ನಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಡಿತವಿದೆ. ಆದರೆ, ಪುರಸಭೆ, ನಗರಸಭೆ ಹಾಗೂ ತಾಲೂಕು ಪಂಚಾಯಿತಿಯಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ಲೋಕಸಭೆ ಚುನಾವಣೆ ಬಂದಾಗ ಮತದಾರ ಬಿಜೆಪಿಯತ್ತ ವಾಲುವುದು ಕಂಡುಬಂದಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ 1,90,478 ಮತಗಳು ಚಲಾವಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಪಿ.ಮುನಿರಾಜು ಗೌಡ 86,230, ಹಾಲಿ ಸಂಸದ ಸುರೇಶ್ 79,611 ಮತ ಪಡೆದಿದ್ದರು. ಜೆಡಿಎಸ್ನ ಪ್ರಭಾಕರ್ ರೆಡ್ಡಿ 16,889 ಮತ ಗಳಿಸಿದ್ದರು. ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಪೈಪೋಟಿಯಿದೆ. ಆದರೆ, ಜೆಡಿಎಸ್ ಬೆಂಬಲ ಕಾಂಗ್ರೆಸ್ಗೆ ದೊರೆಯುವುದರಿಂದ ಕಾಂಗ್ರೆಸ್ ಹಿಡಿತ ಸ್ವಲ್ಪಮಟ್ಟಿಗೆ ಹೆಚ್ಚಾದರೂ,
-ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು ಬಿಜೆಪಿಗೆ ವರವಾಗಬಹುದು. ಕ್ಷೇತ್ರದ ಹಲವು ಬಡಾವಣೆಗಳಿಗೆ ಕಾವೇರಿ ನೀರು ಹಾಗೂ ಏತನೀರಾವರಿ ಮೂಲಕ ಕೆರೆಗಳ ತುಂಬಿಸುವ ಕೆಲಸ ಹಾಗೂ ಬಹುತೇಕ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಸಂಸದರ ಸಾಧನೆ. ಹೀಗಾಗಿ ಈ ಬಾರಿ ಹೆಚ್ಚು ಮತ ಬರಲಿವೆ ಎಂಬುದು ಕಾಂಗ್ರೆಸ್ ನಿರೀಕ್ಷೆ.
ಸಂಸದರಿಂದ ಬಂದ ಪ್ರಮುಖ ಕೊಡುಗೆಗಳು
-ಕ್ಷೇತ್ರಕ್ಕೆ ಕಾವೇರಿ ನೀರು ತರುವಲ್ಲಿ ಪ್ರಮುಖ ಪಾತ್ರ
-ಏತ ನೀರಾವರಿ ಯೋಜನೆ ಮೂಲಕ ಕೆರೆ ತುಂಬುವ ಕೆಲಸ
-30ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ
-ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅನುದಾನ
ನಿರೀಕ್ಷೆಗಳು
-ಮುತ್ಯಾಲ ಮಡು ಪ್ರವಾಸಿ ತಾಣದ ಅಭಿವೃದ್ಧಿ
-ಆನೇಕಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿ
-ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಕರ್ಯ
-ಪುರಸಭೆ: 4
-ಬಿಜೆಪಿ- 3
-ಕಾಂಗ್ರೆಸ್- 1
-ಜೆಡಿಎಸ್- 0
-ಹೆಬ್ಬಗೋಡಿ ನಗರಸಭೆ, ಆನೇಕಲ್ ತಾ.ಪಂ (ಬಿಜೆಪಿ)
-ಜನಸಂಖ್ಯೆ- 5,38,571
-ಮತದಾರರ ಸಂಖ್ಯೆ- 3,56,632
-ಪುರುಷರು- 1,88,716
-ಮಹಿಳೆಯರು- 1,67,916
2014ರ ಚುನಾವಣೆಯಲ್ಲಿ
-ಚಲಾವಣೆಯಾದ ಮತಗಳು- 1,90,478 (ಶೇ.62.30)
-ಬಿಜೆಪಿ ಪಡೆದ ಮತಗಳು- 86,230 (ಶೇ.45.6)
-ಕಾಂಗ್ರೆಸ್ ಪಡೆದ ಮತಗಳು- 79,611 (ಶೇ.42.1)
-ಜೆಡಿಎಸ್ ಪಡೆದ ಮತಗಳು- 16,889 (ಶೇ.8.9)
2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಬಿ.ಶಿವಣ್ಣ ಕಾಂಗ್ರೆಸ್ ಶಾಸಕ
-ಆನೇಕಲ್ ಪುರಸಭೆಯಲ್ಲಿ ಬಿಜೆಪಿ ಆಡಳಿತದಲ್ಲಿತ್ತು
ಮಾಹಿತಿ: ವೆಂ.ಸುನೀಲ್ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!