ಎಲಿವೇಟೆಡ್‌ ಕುರಿತು ಜನಾಭಿಪ್ರಾಯ ಸಂಗ್ರಹ


Team Udayavani, Mar 20, 2019, 6:35 AM IST

elivated.jpg

ಬೆಂಗಳೂರು: “ವಿವಾದಿತ ಎಲಿವೇಟೆಡ್‌ ಕಾರಿಡಾರ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ, ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಈ ಮೂಲಕ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಿದೆ. 

ಗೃಹ ಕಚೇರಿ “ಕೃಷ್ಣಾ’ದಲ್ಲಿ ಮಂಗಳವಾರ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ಸರ್ಕಾರ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ನಗರದ ಸಂಚಾರದಟ್ಟಣೆ ಸಮಸ್ಯೆಗೆ ಮುಂದಿನ 20 ವರ್ಷಗಳ ಕಾಲ ಶಾಶ್ವತ ಪರಿಹಾರ ಕಂಡುಕೊಳ್ಳುವುದು ನಮ್ಮ ಉದ್ದೇಶ.

ಈ ನಿಟ್ಟಿನಲ್ಲಿ ಸಮಗ್ರ ಯೋಜನೆಯನ್ನು ರೂಪಿಸಲು ಉದ್ದೇಶಿಸಲಾಗಿದೆ. ಕಾರಿಡಾರ್‌ಗೆ ಪರ್ಯಾಯಗಳಿದ್ದರೆ, ಆ ನಿಟ್ಟಿನಲ್ಲೂ ಪರಿಶೀಲಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಪರಿಸರ ಹೋರಾಟಗಾರ ಲಿಯೊ ಸಲ್ಡಾನ, ಐಐಎಸ್ಸಿಯ ಪ್ರೊ.ಆಶಿಶ್‌ ವರ್ಮ, ರಂಗಕರ್ಮಿ ಪ್ರಕಾಶ ಬೆಳವಾಡಿ, ವಾಸ್ತುಶಿಲ್ಪಿ ನರೇಷ್‌ ನರಸಿಂಹನ್‌, ಬೆಂಗಳೂರು ಬಸ್‌ ಪ್ರಾಯಣಿಕರ ವೇದಿಕೆಯ ವಿನಯ್‌ ಶ್ರೀನಿವಾಸ್‌, ವೈಟ್‌ಫೀಲ್ಡ್ ರೈಸಿಂಗ್‌ನ ಜಿ.ಬಿ. ಜಮಾಲ್,

ಕರ್ನಾಟಕ ಕೊಳಚೆ ಪ್ರದೇಶ ನಿವಾಸಿಗಳ ಸಂಫ‌ಟನೆಯ ಐಸಾಕ್‌ ಅಮೃತ್‌ರಾಜ್‌, ಸಿಟಿಜನ್ಸ್ ಫಾರ್‌ ಬೆಂಗಳೂರಿನ ತಾರಾ ಕೃಷ್ಣಸ್ವಾಮಿ ಹಾಗೂ ಶ್ರೀನಿವಾಸ್‌ ಅಲವಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಎಲಿವೇಟೆಡ್‌ ಕಾರಿಡಾರ್‌ನ ಸಾಧಕ-ಬಾಧಕಗಳ ಬಗ್ಗೆ ಐಐಎಸ್ಸಿಯ ಮೂಲಸೌಕರ್ಯ, ಸುಸ್ಥಿರ ಸಾರಿಗೆ ಮತ್ತು ನಗರ ಯೋಜನೆ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಆಶಿಶ್‌ ವರ್ಮ ತಯಾರಿಸಿದ ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಪ್ರೋತ್ಸಾಹಿಸಬೇಕು.ಬಸ್‌ ಪ್ರಯಾಣ ದರ ಇಳಿಕೆ ಮಾಡಬೇಕು. ಹೊರವರ್ತುಲ ರಸ್ತೆಯಲ್ಲಿ ಬಸ್‌ ರ್ಯಾಪಿಡ್‌ ಟ್ರಾನ್ಸಿಟ್‌ ಸಿಸ್ಟ್‌ಂ ಅನುಷ್ಠಾನಗೊಳಿಸಬೇಕು. ಹೊರವರ್ತುಲ ರಸ್ತೆಯಲ್ಲಿ ಮೆಟ್ರೋ ನಿರ್ಮಾಣ ಯೋಜನೆ ಕಾರ್ಯ ತ್ವರಿತಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದರು.

ಚುನಾವಣೆ ಬಳಿಕ ಮತ್ತೂಮ್ಮೆ ಚರ್ಚೆ: ಎಲಿವೇಟೆಡ್‌ ಕಾರಿಡಾರ್‌ ನಿರ್ಮಾಣ ವಿಚಾರದಲ್ಲಿ ಮುಂದುವರಿಯುವ ಮುನ್ನ ತಜ್ಞರು ಹಾಗೂ ಸಾರ್ವಜನಿಕರೊಂದಿಗೆ ಸಭೆಗಳನ್ನು ನಡೆಸಲಾಗುವುದು. ಅಭಿಪ್ರಾಯಗಳನ್ನು ಸಂಗ್ರಹಿಸಿ, ನಂತರವಷ್ಟೇ ನಿರ್ಧಾರಕ್ಕೆ ಬರಲಾಗುವುದು ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ, ಲೋಕಸಭಾ ಚುನಾವಣೆ ಬಳಿಕ ಈ ಸಂಬಂಧ ಮತ್ತೂಮ್ಮೆ ಚರ್ಚೆ ನಡೆಸಲಾಗುವುದು ಎಂದೂ ಹೇಳಿದರು. ಉದ್ದೇಶಿತ ಯೋಜನೆ ವಿರೋಧಿಸಿ ನಗರದಲ್ಲಿ ಈಚೆಗೆ ನಡೆದ ಪ್ರತಿಭಟನೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಬೇಕು ಎನ್ನುವುದು ಪ್ರಮುಖ ಬೇಡಿಕೆ ಆಗಿತ್ತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.