ಪಿಯು ಉಪನ್ಯಾಸಕರಿಗೆ ಹೋರಾಟಕ್ಕಿಂತ ಕರ್ತವ್ಯ ಮುಖ್ಯ


Team Udayavani, Mar 20, 2019, 7:23 AM IST

pu-upanya.jpg

ಚಿಕ್ಕಬಳ್ಳಾಪುರ: ಪದವಿ ಪೂರ್ವ ಕಾಲೇಜು ಉಪನ್ಯಾಸಕರು ತಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಬೇಕು. ಹೋರಾಟವನ್ನು ನಡೆಸಬೇಕು. ಆದರೆ ಕರ್ತವ್ಯ ಪ್ರಜ್ಞೆಯನ್ನು ರೂಢಿಸಿಕೊಂಡು ಕೆಲಸಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜನಾರ್ದನ್‌ ಪಿಯು ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಹೇಳುತ್ತಿರುವ ಉಪನ್ಯಾಸಕರಿಗೆ ಕಿವಿಮಾತು ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಉಪ ನಿರ್ದೇಶಕರಿಗೆ, ಮತ್ತು ನಿವೃತ್ತ  ಪ್ರಾಂಶುಪಾಲರಿಗೆ ಹಾಗೂ ಉಪನ್ಯಾಸಕರಿಗೆ ಸನ್ಮಾನ ಹಾಗೂ ಉಪನ್ಯಾಸಕರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ನಮ್ಮ ಹಕ್ಕುಗಳಿಗೆ ನಾವು ಹೋರಾಡುವುದರಲ್ಲಿ ತಪ್ಪಿಲ್ಲ. ಆದರೆ ನಮ್ಮ ಕರ್ತವ್ಯಗಳಿಗೂ ಚ್ಯುತಿ ಬಾರದಂತೆ ನಾವು ಕೆಲಸ ಮಾಡಬೇಕಿದೆ. ಈ ಹಿಂದೆ ರಾಜ್ಯದಲ್ಲಿ ಪದವಿ ಪೂರ್ವ ಉಪನ್ಯಾಸಕರ ಸಂಘ ಬಲಿಷ್ಟವಾಗಿಲ್ಲದಿದ್ದಾಗಲೂ ಅನೇಕ ಹೋರಾಟಗಳನ್ನು ನಡೆಸಲಾಗಿದೆ. ಬಲಿಷ್ಟವಾದ ಮೇಲೂ ಹೋರಾಟಗಳಿಗೆ ಯಶಸ್ಸು ಸಿಕ್ಕಿಲ್ಲ. ಹೋರಾಟದ ಜೊತೆಗೆ ಉಪನ್ಯಾಸಕರಿಗೆ ಕರ್ತವ್ಯ ಪ್ರಜ್ಞೆ  ಮುಖ್ಯ.

3000 ವಿದ್ಯಾರ್ಥಿಗಳ ಸಂಖ್ಯೆ ಇದ್ದ ಕಾಲೇಜುಗಳಲ್ಲಿ ಈಗ 800  ಮಕ್ಕಳು ಇದ್ದಾರೆ. ಪದವಿ ಪೂರ್ವ ಕಾಲೇಜುಗಳು ಉಳಿದರೆ ಮಾತ್ರ ಉಪನ್ಯಾಸಕರಿಗೆ ಉಳಿಗಾಲ ಎಂಬ ಅರಿವು ಅವಶ್ಯ. ಸರ್ಕಾರಿ ಪಿಯು ಕಾಲೇಜಿನಲ್ಲಿ ಇದ್ದಿದ್ದಕ್ಕೆ ನಾನು ಉಪನ್ಯಾಸಕನಿಂದ ಪ್ರಾಂಶುಪಾಲನಾಗಿ, ಇಲಾಖೆಯ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿದ್ದೇನೆ. ಮೊದಲು ಸರ್ಕಾರಿ ಕಾಲೇಜುಗಳ ಉಳಿವಿಗೆ ಶ್ರಮಿಸಬೇಕು. ಇಲ್ಲಿ ಬಹುತೇಕ ಬಡ, ನಿರ್ಗತಿಕ ಮಕ್ಕಳು ಸೇರುತ್ತಾರೆ. ಅವರನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದರು.

ಬೇಸಿಗೆ ರಜೆ ಕಡಿತಕ್ಕೆ ಆಕ್ರೋಶ: ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಮುನಿರೆಡ್ಡಿ ಮಾತನಾಡಿ, ರಾಜ್ಯದ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ  ಇಲಾಖೆ  ತಿಂಗಳ ಕಾಲ ಬೇಸಿಗೆ ರಜೆಯನ್ನು  ಕಡಿತಗೊಳಿಸಿದೆಯೆಂದು  ಕಿಡಿಕಾರಿದರು. ಪಿಯು ಉಪನ್ಯಾಸಕ ಸಂಘವೇ ಇಲ್ಲದೇ ಹೋಗಿದ್ದರೆ ಇಲಾಖೆ ಉಪನ್ಯಾಸಕರನ್ನು ಇನ್ನಷ್ಟು ತುಳಿದು ಬಿಡುತ್ತಿತ್ತು. ನಮ್ಮ  ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು.

ಇಲ್ಲದಿದ್ದರೆ ಪಿಯುಸಿ ಮೌಲ್ಯಮಾಪನ ಬಹಿಷ್ಕಾರ ಅನಿರ್ವಾಯ ಎಂದು ಎಚ್ಚರಿಸಿದರು. ಒಂದರೆಡು ದಿನದಲ್ಲಿ ಇಲಾಖೆ ಉಪನ್ಯಾಸಕರ ಪರವಾದ ನಿಲುವು ಹೊಂದಿದ್ದಲ್ಲಿ ರಾಜ್ಯ ಸಂಘ ಕೈಗೊಳ್ಳುವ ತಿರ್ಮಾನಕ್ಕೆ ಜಿಲ್ಲಾ ಸಂಘ ಬದ್ಧವಾಗಿರಲಿದೆ ಎಂದರು. ಜಿಲ್ಲೆಯಲ್ಲಿ ಹಲವು ವರ್ಷಗಳಿಂದಲೂ ಉಪನ್ಯಾಸಕರ ಸಂಘಕ್ಕೆ ಅಧ್ಯಕ್ಷರು ಇರಲಿಲ್ಲ. ಆದರೆ ಜಿಲ್ಲೆಯ ಉಪನ್ಯಾಸಕ ಸಂಘವನ್ನು ಬಲಿಷ್ಠಗೊಳಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಎನ್‌.ಮಂಜುನಾಥ ವಹಿಸಿದ್ದರು.

ವೇದಿಕೆಯಲ್ಲಿ ಕೋಲಾರ ಜಿಲ್ಲಾ ಪಿಯು ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ನಟರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೋಜಿರೆಡ್ಡಿ, ಚಿಕ್ಕಬಳ್ಳಾಪುರ ಕಾರ್ಯಾಧ್ಯಕ್ಷ ಎಂ.ಜಿ.ರವಿಚಂದ್ರ, ಜಿಲ್ಲಾ ಕಾರ್ಯದರ್ಶಿ ಎಚ್‌.ಸಿ.ಬಸವರಾಜ್‌, ಜಿಲ್ಲಾ ಖಜಾಂಚಿ ನಂಜರೆಡ್ಡಿ, ಚಿಂತಾಮಣಿ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಆರ್‌.ರಾಮಸುಬ್ಟಾರೆಡ್ಡಿ, ಖಜಾಂಚಿ ನಾಗಪ್ಪ, ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಹೆಚ್‌.ವಿ.ಶಿವಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ಕಾರ್ಯಾಧ್ಯಕ್ಷ ಸಿ.ವೆಂಕಟಶಿವಾರೆಡ್ಡಿ ಮತ್ತಿತರರು ಹಾಜರಿದ್ದರು.

ನಿವೃತ್ತಿಯಾಗಲಿರುವ ಉಪ ನಿರ್ದೇಶಕರಿಗೆ ಸನ್ಮಾನ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜನಾರ್ದನ್‌, ಗೌರಿಬಿದನೂರು ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಡಿ.ವಿ.ಬ್ರಹ್ಮರಾಯಪ್ಪ, ಚಿಕ್ಕಬಳ್ಳಾಪುರದ ಪಂಚಗಿರಿ ಪಿಯು ಕಾಲೇಜಿನ ಪ್ರಾಂಶುಪಾಲೆ ಸಿ.ಆರ್‌.ಕೋಮಲಾದೇವಿ.

ಚಿಂತಾಮಣಿಯ ಕೈವಾರದ ಸರ್ಕಾರಿ ಕಾಲೇಜಿನ ಉಪನ್ಯಾಸಕ ನೆರೇಂದ್ರ ಸೇರಿದಂತೆ ಸೇವೆಯಿಂದ ನಿವೃತ್ತಿಯಾಗುತ್ತಿರುವ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು ಹಾಗೂ ಉಪನ್ಯಾಸಕರನ್ನು ಉಪನ್ಯಾಸಕರ ಸಂಘದಿಂದ ನೆನೆಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಇದೇ ವೇಳೆ 2019 ರಿಂದ 2024ನೇ ಸಾಲಿನ ಉಪನ್ಯಾಸಕ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ತಾಲೂಕು ಘಟಕದ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.