ನಾನು ಯಾರು ಎಂಬ ಪ್ರಶ್ನೆಗೆ ಮಂಡ್ಯದ ಜನರು ಉತ್ತರಿಸಬೇಕು: ಸುಮಲತಾ
Team Udayavani, Mar 20, 2019, 10:27 AM IST
ಮಂಡ್ಯ: ನಾನು ಈ ಮಂಡ್ಯದ ಸೊಸೆ, ಅಂಬರೀಶ್ ಅವರ ಧರ್ಮಪತ್ನಿಯಾಗಿದ್ದೇನೆ. ನನ್ನ ಮುಂದಿರುವ ಸವಾಲಿನ ಪ್ರಕಾರ, ನಿಮ್ಮ ಆಹ್ವಾನದ ಮೇಲೆ ಸ್ಪರ್ಧಿಸುತ್ತಿದ್ದೇನೆ. ಹೀಗಾಗಿ ನಾನು ಯಾರು ಎಂದು ಪ್ರಶ್ನಿಸುವವರಿಗೆ ನೀವು ಉತ್ತರಿಸಬೇಕು. ಈ ಅವಮಾನಗಳಿಗೆ ಮಂಡ್ಯದ ಜನರೇ ಉತ್ತರ ನೀಡಬೇಕು ಎಂದು ಸುಮಲತಾ ಅಂಬರೀಶ್ ಹೇಳಿದರು.
ಬುಧವಾರ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸಿಲ್ವರ್ ಜುಬಿಲಿ ಪಾರ್ಕ್ ನಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಟೀಕೆ, ಅವಮಾನದ ಮಾತುಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಪರವಾಗಿ ಮಕ್ಕಳು ಬಂದು ಪ್ರಚಾರ ಮಾಡುವುದು ತಪ್ಪಾ? ದರ್ಶನ್ ಮತ್ತು ಯಶ್ ನನ್ನ ಮನೆ ಮಕ್ಕಳು. ಅವರು ಅಂಬಿಯ ಅಭಿಮಾನ ಉಳಿಸಿಕೊಂಡಿರುವ ನಟರಾಗಿದ್ದಾರೆ. ನಿಮ್ಮ ಮಾತು ಅಭಿಮಾನಿಗಳಿಗೆ ನೋವು ತಂದಿದೆ ಎಂದು ಈ ಸಂದರ್ಭದಲ್ಲಿ ಟೀಕಾಕಾರರಿಗೆ ತಿರುಗೇಟು ನೀಡಿದರು.
ನಿಮ್ಮ ಧ್ವನಿಯಾಗಿ ನಾನು ಪ್ರತಿನಿಧಿಸ್ತೇನೆ. ನನ್ನ ಜೊತೆ ನೀವು ಕೈಜೋಡಿಸುತ್ತೀರಿ ಎಂದು ಮಾತು ಕೊಡಿ ಎಂದು ಹೇಳಿದ ಸುಮಲತಾ ಭಾವುಕರಾದರು. ನಿಮ್ಮನ್ನು ಬಿಟ್ಟು ನಾನು ಎಲ್ಲಿಯೂ ಹೋಗಲ್ಲ. 27 ವರ್ಷಗಳಿಂದ ಮಂಡ್ಯದ ಸೊಸೆಯಾಗಿ, ಅಂಬರೀಶ್ ಅವರ ಧರ್ಮಪತ್ನಿಯಾಗಿ, 40 ವರ್ಷಗಳ ಕಾಲ ಚಿತ್ರರಂಗದಲ್ಲಿ ದುಡಿದಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್