ವರ್ಷಾಂತ್ಯಕ್ಕೆ ಬನ್ನಂಜೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣ


Team Udayavani, Mar 21, 2019, 1:00 AM IST

ksrtc.jpg

ಉಡುಪಿ: ವರ್ಷಾಂತ್ಯದಲ್ಲಿ ಬನ್ನಂಜೆಯಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ ಸುಸಜ್ಜಿತ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣ ತಲೆಎತ್ತಲಿದೆ.

ನಾರಾಯಣ ಗುರು ಸಭಾಂಗಣದ ಮುಂದಿರುವ ಲೋಕೋಪಯೋಗಿ ಇಲಾಖೆಯ 2.5 ಎಕರೆ ಜಾಗದಲ್ಲಿ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣದ ಕಾಮಗಾರಿ ಭರದಿಂದ ಸಾಗುತ್ತಿದೆ. 2018ರ ನವೆಂಬರ್‌ 24ಕ್ಕೆ ಕಾಮಗಾರಿ ಆರಂಭಗೊಂಡಿತ್ತು. ಸುಮಾರು 31.34 ಕೋ.ರೂ.ವೆಚ್ಚದ ಕಾಮಗಾರಿ ಇದಾಗಿದ್ದು, ಶೇ. 20ರಿಂದ 30 ಕಾಮಗಾರಿ ಈಗಾಗಲೇ ಪೂರ್ಣ ಗೊಂಡಿದೆ. 2019ರ ನವೆಂಬರ್‌ ಅಂತ್ಯಕ್ಕೆ ಉದ್ಘಾಟನೆಗೆ ಸಜ್ಜಾಗಲಿದೆ.

ಸುಸಜ್ಜಿತ ವ್ಯವಸ್ಥೆ
ಈ ಕಟ್ಟಡದಲ್ಲಿ ನಾಲ್ಕು ಫ್ಲೋರ್‌ಗಳಿವೆ. ಕೆಳ ಅಂತಸ್ತಿನಲ್ಲಿ ವಾಹನಗಳ ಪಾರ್ಕಿಂಗ್‌ ಇದೆ. ಇಲ್ಲಿ ಸುಮಾರು 64 ಕಾರುಗಳು ಸಹಿತ ಬೈಕ್‌ಗಳನ್ನು ಪಾರ್ಕಿಂಗ್‌ ಮಾಡಬಹುದಾಗಿದೆ. ಮೇಲಿನ ಅಂತಸ್ತಿನಲ್ಲಿ ಏಕಕಾಲದಲ್ಲಿ 18 ಬಸ್ಸುಗಳು ಬಂದು ಹೋಗಲು ವ್ಯವಸ್ಥೆ ಕಲ್ಪಿಸಲಾಗಿದೆ. 100ರಷ್ಟು ಬಸ್ಸು ನಿಲ್ಲಿಸುವಷ್ಟು ಸ್ಥಳಾವಕಾಶ ಇಲ್ಲಿದೆ. ಉಳಿದ ಮಹಡಿಗಳಲ್ಲಿ ಕಚೇರಿ ಸಹಿತ ವ್ಯಾಪಾರದ ಉದ್ದೇಶಕ್ಕೆ ಬಳಕೆಯಾಗಲಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿವೆ. 

ಕಾಮಗಾರಿಗೆ ವೇಗ
1ಲಕ್ಷ 30 ಸಾವಿರ ಚದರಡಿಯಲ್ಲಿ ಈ ಕಟ್ಟಡ ನಿರ್ಮಾಣವಾಗುತ್ತಿದೆ. ಮಂಗಳೂರು ಕೆಎಸ್ಸಾರ್ಟಿಸಿ ನಿಲ್ದಾಣಕ್ಕೆ ಹೋಲಿಸಿದರೆ ಇದು ದೊಡ್ಡ ಕಟ್ಟಡವಾಗಿದ್ದು ಸುಸಜ್ಜಿತವಾಗಿ ಮೂಡಿಬರಲಿದೆ. ಸುಮಾರು 100ರಿಂದ 110 ಮಂದಿ ಕಾರ್ಮಿಕರು ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ನವೆಂಬರ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಅವಿರತ ಕೆಲಸ ಕಾರ್ಯಗಳು ನಡೆಯುತ್ತಿವೆ.

ಬಹುಕಾಲದ ಬೇಡಿಕೆ
ಸದ್ಯ 271 ಬಸ್ಸುಗಳು ಉಡುಪಿ ನಿಲ್ದಾಣದಿಂದ ವಿವಿಧೆಡೆಗಳಿಗೆ ಸಂಚರಿಸುತ್ತಿದೆ. ಉಡುಪಿಯಿಂದ ರಾಜ್ಯದ ವಿವಿಧೆಡೆಗೆ ಪ್ರಯಾಣಿಸುವ ಸಾವಿರಾರು ಜನರಿದ್ದರೂ ಕೂಡ ಇಲ್ಲಿ ಸುಸಜ್ಜಿತ ಬಸ್‌ ತಂಗುದಾಣ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದರು. ಪ್ರಸ್ತುತ ಇರುವ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣ ನಗರಸಭೆಯ ಅಧೀನದಲ್ಲಿದೆ.  

ಎಸ್ಕಲೇಟರ್‌, ಲಿಫ್ಟ್ ಸೌಲಭ್ಯ
ಅಂಗಡಿಗಳು, ಶೌಚಾಲಯ, ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳು, ನೋಂದಣಿ ಕೇಂದ್ರಗಳು ಇರಲಿವೆ. ಕಟ್ಟಡದ ಒಳಗೆ ಎಸ್ಕಲೇಟರ್‌ ಹಾಗೂ ಲಿಫ್ಟ್ ವ್ಯವಸ್ಥೆ, ಮೆಟ್ಟಿಲು ಕೂಡ ಇರಲಿದೆ. ಈಗಾಗಲೇ ಮೈಸೂರು, ಬೆಂಗಳೂರಿನಲ್ಲಿರುವ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣಗಳಲ್ಲಿ ಎಸ್ಕಲೇಟರ್‌ ವ್ಯವಸ್ಥೆ ಇದೆ. ಕರಾವಳಿಗೆ ಹೋಲಿಸಿದರೆ ಎಸ್ಕಲೇಟರ್‌ ವ್ಯವಸ್ಥೆ ಹೊಂದಿರುವ ಪ್ರಪ್ರಥಮ ಬಸ್ಸು ತಂಗುದಾಣ ಇದಾಗಲಿದೆ. 

ಶೇ. 25 ಕಾಮಗಾರಿ ಪೂರ್ಣ
ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಕಾಮಗಾರಿಗಳು ವೇಗದಿಂದ ನಡೆಯುತ್ತಿದೆ.  ಶೇ. 25  ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ನವೆಂಬರ್‌ ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವ ಯೋಜನೆ ಇದೆ. 
-ಪ್ರಭಾಕರ ಯೆಯ್ನಾಡಿ, ಪ್ರಾಜೆಕ್ಟ್  ಮ್ಯಾನೇಜರ್‌

ಸದ್ಯಕ್ಕಿಲ್ಲ ಥಿಯೇಟರ್‌
ಥಿಯೇಟರ್‌ ನಿರ್ಮಾಣದ ಪ್ರಸ್ತಾವನೆ ಈ ಹಿಂದೆ ಇದ್ದು ಆದರೆ ಈಗ ನಿರ್ಮಾಣಗೊಳ್ಳುತ್ತಿಲ್ಲ. ಅದಕ್ಕಾಗಿ ಈ ಕಟ್ಟಡದಲ್ಲೇ ಜಾಗ ಮೀಸಲಿರಿಸಲಾಗುವುದು. ಕಟ್ಟಡ ಪೂರ್ಣಗೊಂಡ ಬಳಿಕ ಖಾಸಗಿಯವರು ಆಸಕ್ತಿ ವಹಿಸಿ ಮುಂದೆ ಬಂದರೆ ಥಿಯೇಟರ್‌ ನಿರ್ಮಾಣಕ್ಕೆ ಅನುಮತಿ ಕೊಡಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿವೆ. 

– ಪುನೀತ್‌  ಸಾಲ್ಯಾನ್‌

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.