ಕಾಮ್ಧಾರಿಯನ್ನು ನಾಮ್ಧಾರಿ ಸಹಿಸಲ್ಲ
Team Udayavani, Mar 21, 2019, 12:30 AM IST
ನವದೆಹಲಿ: ದುಡಿಮೆಯೇ ದೇವರೆನ್ನುವ ಜನರಲ್ಲಿ (ಕಾಮ್ದಾರ್) ದ್ವೇಷ ಬಿತ್ತುವ ಕೆಲಸವನ್ನು ನಾಮಧಾರ್ (ವಂಶಪಾರಂಪರ್ಯ ರಾಜಕಾರಣಿಗಳು) ಮಾಡುತ್ತಿದ್ದಾರೆ.
ಕಾಮ್ಧಾರಿಗಳಲ್ಲಿ ಯಾರೋ ಒಬ್ಬರು ಪ್ರಧಾನಿಯಾದರೆ ಅದನ್ನು ನಾಮ್ಧಾರಿಗೆ ಸಹಿಸಿಕೊಳ್ಳಲು ಆಗುವುದಿಲ್ಲ …
ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ಟೀಕಾ ಪ್ರಹಾರ ನಡೆಸಿದ್ದಾರೆ. ಚೌಕಿದಾರ್ ಚೋರ್ ಹೈ ಎಂಬ ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡುವ ನಿಟ್ಟಿನಲ್ಲಿ ಬುಧವಾರ 25 ಲಕ್ಷ ಮಂದಿ ಚೌಕಿದಾರರ ಜತೆಗೆ ಪ್ರಧಾನಿ ಮೋದಿ ನಡೆಸಿದ ಸಂವಾದದಲ್ಲಿ ಈ ಮಾತುಗಳನ್ನಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಟಿವಿಗಳಲ್ಲಿ ಮೈ ಭೀ ಚೌಕಿದಾರ್ ಎಂಬ ದೊಡ್ಡ ಆಂದೋಲನವೇ ನಡೆಯುತ್ತಿದೆ. ದೇಶಭಕ್ತಿಯುಳ್ಳ ಅನೇಕರು ತಮ್ಮ ಸಾಮಾಜಿಕ ಜಾಲತಾಣದ ಹೆಸರಿನ ಜತೆಗೆ ಮೈ ಭೀ ಚೌಕಿದಾರ್ ಎಂದು ಬರೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ ಪ್ರಧಾನಿ. ವಿದೇಶಗಳಲ್ಲಿರುವ ಭಾರತೀಯರಲ್ಲೂ ಇದೊಂದು ಟ್ರೆಂಡ್ ಆಗಿದೆ. ಚೌಕೀದಾರರನ್ನು ಅವಮಾನಿಸಲು ಬಳಸಿದ ಪದವೊಂದು ಇಂದು ದೇಶಭಕ್ತಿಯ ಪ್ರತೀಕವಾಗಿದೆ ಎಂದಿದ್ದಾರೆ.
ನನ್ನ ವಿರುದ್ಧ ನೇರವಾಗಿ ಆರೋಪ ಮಾಡಲು ಧೈರ್ಯವಿಲ್ಲದ ಜನ, ನನ್ನ ವಿರುದ್ಧ ಟೀಕೆಗಳನ್ನು ಮಾಡುವಾಗ ಇಡೀ ದೇಶದಲ್ಲಿ ಸ್ವಾಭಿಮಾನದಿಂದ ದುಡಿಯುತ್ತಿರುವ ಕಾವಲುಗಾರರ ಹೆಸರನ್ನು (ಚೌಕಿದಾರ್) ಬಳಕೆಗೆ ತಂದರು ಎಂದು ಅವರು ಹೇಳಿದ್ದಾರೆ. ಚೌಕಿದಾರ್ ಚೋರ್ (ಕಾವಲುಗಾರ ಕಳ್ಳ) ಎನ್ನುವವರ ಪರವಾಗಿ ಕ್ಷಮೆ ಯಾಚಿಸುತ್ತೇನೆ ಎಂದು ಪ್ರಧಾನಿ ಮೋದಿ ಹೃದಯಸ್ಪರ್ಶಿಯಾಗಿ ಮಾತನಾಡಿದ್ದಾರೆ. ನಮ್ಮ ವಿರುದ್ಧ ಯಾರು ಎಷ್ಟೇ ಟೀಕೆ ಮಾಡಲಿ, ನಾವು ಎದೆಗುಂದುವುದು ಬೇಡ. ಧೈರ್ಯಗೆಡುವುದು ಬೇಡಎಂದು ಅವರು ಮಾರ್ಮಿಕವಾಗಿ ಹೇಳಿದ್ದಾರೆ. ಐಎಎಫ್ ಯೋಧರು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಯನ್ನು ಧ್ವಂಸ ಮಾಡಿದಾಗ ಪ್ರತಿಪಕ್ಷಗಳು ವ್ಯಕ್ತಪಡಿಸಿದ ಅಭಿಪ್ರಾಯ ಆಘಾತಕಾರಿಯಾದದ್ದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ