ಲೋಕಸಭಾ ಚುನಾವಣ ಕಾವು ಮರೆಯಾಯಿತೇ ಬೋಟ್‌ ಪ್ರಕರಣ?


Team Udayavani, Mar 21, 2019, 1:00 AM IST

suvarna.jpg

ಮಲ್ಪೆ: ಲೋಕಸಭಾ ಚುನಾವಣೆಯ ಕಾವು ಏರತೊಡ ಗಿದ್ದು, ಸೀಟಿಗಾಗಿ ಕಾದಾಟ, ಮೇಲಾಟ ನಡೆಯುತ್ತಿದೆ. ಈ ಮಧ್ಯೆ ಮೂರು ತಿಂಗಳ ಹಿಂದೆ ನಡೆದ 7 ಮಂದಿ ಮೀನುಗಾರರು ನಾಪತ್ತೆ ಪ್ರಕರಣ ಆಡಳಿತ ವರ್ಗ ಮತ್ತು ಜನಮಾನಸದಿಂದ ಮೆಲ್ಲನೆ ಮರೆಯಾಗುತ್ತಿದೆ.

ಆದರೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಏಳು ಮಂದಿ ಮೀನುಗಾರರ ಮನೆಗಳಲ್ಲಿ ಮಾತ್ರ ಮೌನ ಆವರಿಸಿದೆ.

ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಮನೆಯವರು ನಿತ್ಯ ಕಣ್ಣೀರು ಹಾಕುತ್ತಿದ್ದಾರೆ.

ಡಿ. 13ರಂದು ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್‌ ಮತ್ತು ಅದರಲ್ಲಿ 7 ಮಂದಿ ಮೀನುಗಾರರು ನಾಪತ್ತೆ ಯಾಗಿ ಇಂದಿಗೆ 95 ದಿನಗಳು ಕಳೆದಿವೆ. ಕಣ್ಮರೆಯಾದ ಸಮಯದಲ್ಲಿ ಜನಪ್ರತಿನಿಧಿಗಳು ಸಾಲು ಸಾಲಾಗಿ ಮನೆಗಳಿಗೆ ಭೇಟಿ ನೀಡುವ, ಸಾಂತ್ವನ ಹೇಳುವ ಕಾರ್ಯ ನಡೆಸು ತ್ತಿದ್ದರು. ಆದರೆ ಈಗ ಎಲ್ಲವೂ  ಸ್ಥಗಿತವಾಗಿದೆ. 
ಊಹಾಪೋಹದಿಂದ ಗೊಂದಲ
ಒಂದು ಸಲ ಅಪಹರಿಸಲಾಗಿದೆ, ಮತ್ತೂಂದು ಸಲ ಯುದ್ಧ ನೌಕೆ ಢಿಕ್ಕಿ ಹೊಡೆದಿದೆ ಎನ್ನಲಾಯಿತು. ಅನಂತರ ನಾಪತ್ತೆಯಾದವರ ಮೊಬೈಲಿಗೆ ಕರೆ ಹೋಯಿತು; ಇಬ್ಬರ ಪೋನ್‌ ರಿಂಗಣಿಸಿತು ಎನ್ನುವುದಾಗಿ ಸುದ್ದಿಯಾಯಿತು. ಮತ್ತೂಮ್ಮೆ ಸಮುದ್ರದಡಿಯಲ್ಲಿ ಬೋಟ್‌ ಮಾದರಿಯ ವಸ್ತು ಪತ್ತೆಯಾಗಿದೆ ಎಂದೂ ಕೆಲವು ದಿನಗಳ ಬಳಿಕ ಅದು ಕಲ್ಲು ಎಂದೂ ಹೇಳಲಾಯಿತು. ಶ್ರೀಲಂಕದಲ್ಲಿ ಇದ್ದಾರೆ, ದುಬಾೖಯಲ್ಲಿ ಇರುವ ಸಾಧ್ಯತೆ ಇದೆ ಎಂಬೆಲ್ಲ ಊಹಾಪೋಹಗಳು ನಮಗೆ ಗೊಂದಲಕ್ಕೆ ಕಾರಣವಾಗಿತ್ತು ಎಂದು ಮೀನುಗಾರರ ಮನೆಯವರು ತಿಳಿಸುತ್ತಾರೆ.
ಚುನಾವಣೆಯೊಳಗೆ ಸುಳಿವು ನೀಡಿ
ಚುನಾವಣೆ ದಿನಾಂಕದ ಒಳಗೆ ನಮ್ಮವರ ಸುಳಿವು ಸಿಗುವಂತೆ ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೇವೆ. ಮುಂದೆ ಎರಡೂ ಪಕ್ಷಗಳ ಅಭ್ಯರ್ಥಿಗಳಿಗೂ ಮನವಿ ನೀಡಿ ಆಗ್ರಹಿಸುತ್ತೇವೆ ಎಂದು ನಾಪತ್ತೆಯಾದ ಮೀನುಗಾರ ಕುಮಟಾದ ಲಕ್ಷ್ಮಣ ಅವರ ಸಹೋದರ ಗೊವಿಂದ ಹರಿಕಂತ್ರ ತಿಳಿಸಿದ್ದಾರೆ.

ನಾಪತ್ತೆಯಾದ ನಮ್ಮ ಉ.ಕ.ದ ಮೀನುಗಾರರ ಮನೆಯಲ್ಲಿ ಎಲ್ಲರೂ ಕಷ್ಟದಲ್ಲಿದ್ದಾರೆ. ಎರಡು ಮನೆಯಲ್ಲಿ ಒಂದು ಹೊತ್ತಿನ ಊಟಕ್ಕೂ ಗತಿಯಿಲ್ಲ. ಜನಪ್ರತಿನಿಧಿಗಳೆಲ್ಲರು ಬಡಪಾಯಿ ಮೀನುಗಾರರನ್ನು ಮರೆತಿದ್ದಾರೆ. ಚುನಾವಣಾ ಬಹಿಷ್ಕಾರದ ಚಿಂತನೆ ನಡೆಸಿದ್ದೇವೆ. ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ನೀಡಲಿದ್ದು, ಸೂಕ್ತ ಸ್ಪಂದನೆ ಸಿಗದಿದ್ದರೆ ಧರಣಿ ಕೂರುವುದೆಂದು ನಿರ್ಧರಿಸಿದ್ದೇವೆ.
– ಗಣಪತಿ ಮಾಂಗ್ರೆ ಕಾರವಾರ, 
ಮೀನುಗಾರ ಮುಖಂಡ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.