ಪುತ್ತೂರು: ಸದ್ಬಳಕೆಯಾಗದ ಕಾಂಪೋಸ್ಟ್‌ ಪೈಪ್‌


Team Udayavani, Mar 21, 2019, 4:43 AM IST

21-march-2.jpg

ಪುತ್ತೂರು : ಸ್ವಚ್ಛ ಭಾರತ ಪರಿಕಲ್ಪನೆಯಂತೆ ನಿರ್ಮಲ ಗ್ರಾಮದ ಉದ್ದೇಶದೊಂದಿಗೆ ಗ್ರಾಮಗಳಲ್ಲಿ ಜಾರಿಗೊಳಿಸಲಾದ ಪೈಪ್‌ ಕಾಂಪೋಸ್ಟ್‌ ಆಂದೋಲನ ನಿರೀಕ್ಷಿತ ಫಲ ನೀಡಿಲ್ಲ. ಮನೆಗಳಿಗೆ ವಿತರಣೆಯಾದ ಪೈಪ್‌ ಗಳು ಕಾಂಪೋಸ್ಟ್‌ ಉದ್ದೇಶಗಳಿಗೆ ಬಳಕೆಯಾಗದೆ ಆಂದೋಲನ ಭಾಗಶಃ ವೈಫಲ್ಯವನ್ನು ಕಂಡಿದೆ.

ಕಳೆದ ಸಾಲಿನಲ್ಲಿ ಸರಕಾರ ನಿರ್ಮಲ ಗ್ರಾಮ ಪುರಸ್ಕಾರ ಯೋಜನೆಯಡಿ ದೊಡ್ಡ ಗ್ರಾ.ಪಂ.ಗಳಿಗೆ 4 ಲಕ್ಷ ರೂ. ಹಾಗೂ ಸಣ್ಣ ಗ್ರಾಮಗಳಿಗೆ 2 ಲಕ್ಷ ರೂ. ಅನುದಾನ ನೀಡಿತ್ತು. ಗ್ರಾಮದಲ್ಲಿ ಸ್ವಚ್ಛತೆ ಪಾಲನೆಗೆ ಸಂಬಂಧಿಸಿದಂತೆ ಈ ಅನುದಾನ ಬಳಕೆಯಾಗಬೇಕೆನ್ನುವ ಉದ್ದೇಶವನ್ನು ಸರಕಾರ ಹೊಂದಿತ್ತು. ಕೆಲವು ಗ್ರಾ.ಪಂ. ಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಸಿದರೆ, ಹೆಚ್ಚಿನ ಗ್ರಾ.ಪಂ.ಗಳು ಸಮರ್ಪಕ ಕಸ, ತ್ಯಾಜ್ಯ ವಿಲೇವಾರಿ ದೃಷ್ಟಿಯಿಂದ ಪೈಪ್‌ ಕಾಂಪೋಸ್ಟ್‌ ರಚನೆಗೆ ಪೈಪ್‌ ಒದಗಿಸಿದ್ದವು.

ಹೀಗೆ ಬಳಕೆಯಾಗಬೇಕಿತ್ತು
ಕಾಂಪೋಸ್ಟ್‌ ಮಾಡಲು ನೀಡಲಾದ ಪೈಪ್‌ಗೆ ಮನೆಯಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್‌ ಹೊರತು ಪಡಿಸಿದ ತ್ಯಾಜ್ಯ, ಕಸ ಗಳನ್ನು ಪೈಪ್‌ನೊಳಗೆ ಹಾಕಬೇಕು. 3-4 ತಿಂಗಳು ಹಾಕಿದ ಅನಂತರ ವೇಸ್ಟೇಜ್‌ಗೆ ಎರೆಹುಳು ಹಾಕಿ ಅಥವಾ ಎರೆಹುಳು ಉತ್ಪತ್ತಿಯಾಗುವ ವ್ಯವಸ್ಥೆ ಮಾಡಿ ಗೊಬ್ಬರವಾಗಿ ಪರಿವರ್ತಿಲು ಯೋಜಿಸಲಾಗಿತ್ತು. ಆದರೆ ಕಾಂಪೋಸ್ಟ್‌ ಉದ್ದೇಶದಿಂದ ಪೈಪ್‌ ತೆಗೆದುಕೊಂಡು ಹೋದ ಶೇ. 90 ಮಂದಿ ಅದನ್ನು ಬಳಕೆ ಮಾಡಿಕೊಂಡಿಲ್ಲ.

ಉದ್ದೇಶ ಈಡೇರಿಲ್ಲ
ಪುತ್ತೂರು ತಾಲೂಕು ವ್ಯಾಪ್ತಿಯ 41 ಗ್ರಾ.ಪಂ.ಗಳಲ್ಲಿ ಸುಮಾರು 5-6 ಸಾವಿರ ಪೈಪ್‌ ಗಳನ್ನು ಗ್ರಾ.ಪಂ.ಗಳ ಮೂಲಕ ಜನರಿಗೆ ವಿತರಿಸಲಾಗಿದೆ. ಒಂದು ಪೈಪ್‌ಗೆ 100 ರೂ.ನಂತೆ 5-6 ಲಕ್ಷ ರೂ. ಪೈಪ್‌ ಕಾಂಪೋಸ್ಟ್‌ ಉದ್ದೇಶಕ್ಕೆ ವಿನಿಯೋಗಿಸಲಾಗಿದೆ. ಆದರೆ ಸಮರ್ಪಕ ಬಳಕೆ ಯಾಗದೇ ಇರುವುದರಿಂದ ಉದ್ದೇಶವೂ ಈಡೇರಿಲ್ಲ, ಅನುದಾನವೂ ವ್ಯರ್ಥವಾಗಿದೆ.

ಎಷ್ಟು ನಿಗಾ ವಹಿಸಲಿ?
ಗ್ರಾ.ಪಂ.ಗಳು ಪೈಪ್‌ ವಿತರಿಸುವ ಸಂದರ್ಭ ಮನೆಗಳಿಗೆ ಭೇಟಿ ನೀಡಿ ಜನರಿಗೆ ಮಾಹಿತಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಸಮರ್ಪಕ ನಿರ್ವಹಣೆಯ ಜವಾಬ್ದಾರಿಯನ್ನು ಜನರು ತೋರಿಲ್ಲ. ಯೋಜನೆಯ ಪ್ರಗತಿಯ ಕುರಿತು ಪ್ರತಿ ಬಾರಿಯೂ ನಿಗಾ ವಹಿಸಲು ಸಾಧ್ಯವಿಲ್ಲ. ಜನರು ಆಸಕ್ತಿ ತೋರಿ ಪ್ರಯೋಜನಕಾರಿಯಾಗಿ ಬಳಸಿಕೊಂಡರೆ ಮಾತ್ರ ವ್ಯವಸ್ಥೆ ಸರಿಯಾಗಬಹುದು ಎನ್ನುವುದು ಗ್ರಾ.ಪಂ.ಅಧಿಕಾರಿಗಳ ಮಾತು.

ಗ್ರಾಮೀಣ ಭಾಗಗಳಲ್ಲಿ ಕಸ, ತ್ಯಾಜ್ಯಗಳನ್ನು ವಿಲೇವಾರಿ ಮಾಡಲು ಸಾಂಪ್ರದಾಯಿಕ ಕ್ರಮಗಳನ್ನೇ ಅನುಸರಿ ಸುತ್ತಿರುವುದರಿಂದ ಪೈಪ್‌ ಕಾಂಪೋಸ್ಟ್‌ನಂತಹ ಕ್ರಮಗಳ ಅಗತ್ಯವಿರುವುದಿಲ್ಲ ಎನ್ನುವುದು ಹಿರಿಯರೊಬ್ಬರ ಅಭಿಪ್ರಾಯ. 

ಜನರಿಗೆ ಆಸಕ್ತಿ ಇಲ್ಲ!
ಸ್ವಚ್ಛತೆ ಕುರಿತ ನಿಜವಾದ ಜಾಗೃತಿ ಜನರಲ್ಲಿ ಇನ್ನೂ ಆಗಿಲ್ಲ. ಗ್ರಾ.ಪಂ.ಗಳಿಂದ ಪೈಪ್‌ ಗಳನ್ನು ಪಡೆದುಕೊಂಡ ಜನರಲ್ಲಿ ಕೆಲವರು  ಪೋಸ್ಟ್‌ ಉದ್ದೇಶಕ್ಕೆ ಅಳವಡಿಸಿ ಮತ್ತೆ ಬೇರೆ ಉದ್ದೇಶಗಳಿಗೆ ಬಳಸಿದರೆ, ಮತ್ತೆ ಕೆಲವರು ಕಸ ಹಾಕಲು, ಕಾಂಪೋಸ್ಟ್‌ ಮಾಡಲು ಮನಸ್ಸೇ ಮಾಡಿಲ್ಲ. ಜನರಲ್ಲಿ ಆಸಕ್ತಿ ಇಲ್ಲವೋ ಅಥವಾ ಉದಾಸೀನ ಭಾವವೋ ಎನ್ನುವುದು ಅಧಿಕಾರಿಗಳಿಗೂ ತಿಳಿಯುತ್ತಿಲ್ಲ.

ಜನ ಮುತುವರ್ಜಿ ವಹಿಸುತ್ತಿಲ್ಲ
ಸ್ವಚ್ಛತೆಯ ಜಾಗೃತಿ ಮನೆಯಿಂದಲೇ ಆರಂಭವಾಗಬೇಕೆಂಬ ಉದ್ದೇಶದಿಂದ ನಿರ್ಮಲ ಗ್ರಾಮ ಪುರಸ್ಕಾರದ ಅನುದಾನದಲ್ಲಿ ಪೈಪ್‌ ಕಾಂಪೋಸ್ಟ್‌ಗೆ ಒತ್ತು ನೀಡಲಾಗಿತ್ತು. ಜನರಿಗೆ ಜಾಗೃತಿ ಮೂಡಿಸುವ, ಮಾಹಿತಿ ನೀಡುವ ಕೆಲಸವನ್ನು ಮಾಡಲಾಗಿದೆ. ಆದರೆ ಜನರು ಮುತುವರ್ಜಿ ವಹಿಸುತ್ತಿಲ್ಲ. ಚುನಾವಣೆಯ ಬಳಿಕ ಈ ಕುರಿತು ಮತ್ತೆ  ಗಮನಹರಿಸಲಾಗುವುದು.
-ಜಗದೀಶ್‌ ಎಸ್‌.
ಪುತ್ತೂರು ತಾ.ಪಂ. ಇಒ

ರಾಜೇಶ್‌ ಪಟ್ಟೆ 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.