ಎಸೆಸೆಲ್ಸಿ  ಪರೀಕ್ಷೆ : ಸಿಹಿ ಸುಲಭದ ಆರಂಭ


Team Udayavani, Mar 22, 2019, 1:00 AM IST

slc-exam.jpg

ಕುಂದಾಪುರ: ರಾಜ್ಯಾದ್ಯಂತ ಗುರುವಾರ ಎಸೆಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ಮೊದಲ ದಿನದ ಭಾಷಾ ಪರೀಕ್ಷೆ ಗೊಂದಲವಿಲ್ಲದೆ, ಪ್ರಶ್ನೆ ಪತ್ರಿಕೆಯಲ್ಲೂ ಲೋಪವಿಲ್ಲದೆ ಸುಸೂತ್ರವಾಗಿ ನಡೆದಿದೆ. ಭಾಷಾ ಪರೀಕ್ಷೆಗಳೆಲ್ಲ ಸುಲಭವಿದ್ದವು ಎಂಬ ಖುಷಿ ಬಹುತೇಕ ಎಲ್ಲ ವಿದ್ಯಾರ್ಥಿಗಳದ್ದು.

ಬಹುತೇಕ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳ ಪ್ರಥಮ ಭಾಷಾ ಪರೀಕ್ಷೆ ಎದುರಿಸಿದ್ದಾರೆ. ಹಿಂದಿ, ಸಂಸ್ಕೃತಗಳನ್ನು ಆಯ್ದುಕೊಂಡ ಮಕ್ಕಳ ಸಂಖ್ಯೆ ಕಡಿಮೆ. ಗಂಗೊಳ್ಳಿಯಲ್ಲಿ 9 ಮಂದಿ ಉರ್ದು ಪ್ರಥಮ ಭಾಷೆ ಪರೀಕ್ಷೆ ಬರೆದಿದ್ದಾರೆ. ಪಠ್ಯ, ನೀಲನಕಾಶೆಗೆ ಹೊರತಾದ ಯಾವುದೇ ಪ್ರಶ್ನೆಗಳು ಬಂದಿಲ್ಲ ಎಂದು ವಿದ್ಯಾರ್ಥಿಗಳು, ಶಿಕ್ಷಕರು ತಿಳಿಸಿದ್ದಾರೆ.

ಪೋಷಕರಿಗೂ ಆಸಕ್ತಿ!
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ ಗಳು ಮಕ್ಕಳು ಮಾತ್ರವಲ್ಲದೆ, ಕರೆ ತರಲು- ಕರೆದುಕೊಂಡು ಹೋಗಲು ಅನೇಕ ಮಂದಿ ಪೋಷಕರೂ ಆಗಮಿಸಿ ದ್ದರು. ಇವರಲ್ಲನೇಕರು ಮಧ್ಯಾಹ್ನ ಪರೀಕ್ಷೆ ಮುಗಿಯುವ ವರೆಗೂ ಕಾಯುತ್ತಿದ್ದರು. ಪರೀಕ್ಷೆ ಮುಗಿದ ಬಳಿಕ ಮಕ್ಕಳ ಜತೆಗೆ “ಹೇಗಿತ್ತು, ಯಾವ ರೀತಿ ಬರೆದೆ’ ಎಂದು ಕಾಳಜಿಯಿಂದ ಪ್ರಶ್ನಿಸುತ್ತಿದ್ದುದು ಕಾಣಿಸಿತು.

ಪರೀಕ್ಷೆಯ ಉತ್ಸವ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಂಟೆಪದವು ಸರಕಾರಿ ಪ.ಪೂ. ಕಾಲೇಜು ಮತ್ತು ದೇರಳಕಟ್ಟೆಯ ನೇತಾಜಿ ಸುಭಾಶ್ಚಂದ್ರ ಬೋಸ್‌ ಸರಕಾರಿ ಪ್ರೌಢಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಮೂರು ಧರ್ಮಗಳ ಗುರುಗಳು ಆಶೀರ್ವಾದ ಮಾಡಿದರು. ವಗ್ಗ ಪ.ಪೂ. ಕಾಲೇಜನ್ನು ಸಿಂಗರಿಸಿದ್ದೂ ಅಲ್ಲದೆ ವಿದ್ಯಾರ್ಥಿಗಳಿಗೆ ಬೆಳಗ್ಗೆ ತಂಪು ಪಾನೀಯ ವಿತರಿಸಲಾಯಿತು. ಬೆಳ್ತಂಗಡಿ ತಾಲೂಕಿನ 3 ಕೇಂದ್ರಗಳಲ್ಲಿ 7 ಮಂದಿ ವಿಶೇಷ ಮಕ್ಕಳು ಪರೀಕ್ಷೆ ಬರೆದರು. ಅವರಿಗೆ ವೈದ್ಯರ ಸಲಹೆಯಂತೆ ಹೆಚ್ಚುವರಿ 30 ನಿಮಿಷ ನೀಡಲಾಗಿತ್ತು. 

ಉಡುಪಿಯಲ್ಲಿ  12 ವಿಶೇಷ  ಮಕ್ಕಳು
ಉಡುಪಿ:
ಖಾಸಗಿಯಾಗಿ ಹಾಜರಾಗುತ್ತಿರುವ 12 ಮಂದಿ ಅಂಗವಿಕಲ ಮಕ್ಕಳು ಉಡುಪಿ ಬೋರ್ಡ್‌ ಹೈಸ್ಕೂಲ್‌ನಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದಾರೆ. ಅಶ್ವತ್ಥ ಎಂಬ ವಿದ್ಯಾರ್ಥಿಯ ಪರವಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿ ವಿಜಯ ಉತ್ತರಿಸಿದ್ದಾನೆ. ವಯಸ್ಕ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ 10ನೇ ತರಗತಿ ಪರೀಕ್ಷೆ ಬರೆದಿರುವುದು ವಿಶೇಷ. 

ಮೊದಲ ದಿನ  563 ಮಂದಿ ಗೈರು
ಮಂಗಳೂರು/ಉಡುಪಿ
: ಎಸೆಸೆಲ್ಸಿ ಪರೀಕ್ಷೆಯ ಮೊದಲ ದಿನ ಪ್ರಥಮ ಭಾಷಿಕ ಪರೀಕ್ಷೆಗಳಿಗೆ ದ.ಕ. ಜಿಲ್ಲೆಯಲ್ಲಿ 392 ಮತ್ತು ಉಡುಪಿ ಜಿಲ್ಲೆಯಲ್ಲಿ 171 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಗುರುವಾರ ಕನ್ನಡ, ಇಂಗ್ಲಿಷ್‌, ಸಂಸ್ಕೃತ, ಉರ್ದು, ಹಿಂದಿ ಪರೀಕ್ಷೆ ನಡೆ ಯಿತು. ದ.ಕ. ಜಿಲ್ಲೆಯಲ್ಲಿ ನೋಂದಣಿ ಮಾಡಿಕೊಂಡ ಒಟ್ಟು 29,097 ಮಂದಿ ಯಲ್ಲಿ 28,705 ಮಂದಿ ಹಾಜರಾಗಿದ್ದರು. 392 ಮಂದಿ ಗೈರಾಗಿದ್ದರು. ಉಡುಪಿ ಯಲ್ಲಿ 13,998 ವಿದ್ಯಾರ್ಥಿಗಳಲ್ಲಿ 13,827 ಮಂದಿ ಹಾಜರಾಗಿದ್ದರು. 171 ಮಂದಿ ಗೈರಾಗಿದ್ದರು. 2ನೇ ಗಣಿತ ಪರೀಕ್ಷೆ ಮಾ. 25ರಂದು ನಡೆಯಲಿದೆ. ಪ್ರಶ್ನೆ ಪತ್ರಿಕೆಗಳನ್ನು ರೂಟ್‌ ಪ್ರಕಾರ ಸೂಕ್ತ ಬಂದೋಬಸ್ತ್ನಲ್ಲಿ ಕೊಂಡೊಯ್ಯಲಾಗಿದೆ. ಉತ್ತರ ಪತ್ರಿಕೆ ಇಡುವ ಸ್ಥಳದಲ್ಲೂ ಬಿಗಿ ಬಂದೋಬಸ್ತು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆಗಳನ್ನು ಇರಿಸುವ ಕೊಠಡಿಗಳಲ್ಲಿ 24×7 ಪೊಲೀಸರು ಕಾರ್ಯ ನಿರ್ವಹಿಸಲಿದ್ದು, ಸಿಸಿ ಕೆಮರಾಗಳನ್ನೂ ಅಳವಡಿಸಲಾಗಿದೆ ಎಂದು ಎಸೆಸೆಲ್ಸಿ ನೋಡೆಲ್‌ ಅಧಿಕಾರಿಗಳಾದ ಶಮಂತ್‌, ವೆಂಕಟೇಶ ನಾಯಕ್‌ ತಿಳಿಸಿದ್ದಾರೆ. 

ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಏಳನೇ ತರಗತಿಗೆ ಮೊಟಕುಗೊಳಿಸಿದ್ದೆ. ಈಗ ಉದ್ಯೋಗ ನಿಮಿತ್ತ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದೇನೆ. ಬಹಳ ವರ್ಷಗಳ ಅನಂತರ ಪರೀಕ್ಷೆ ಬರೆಯುತ್ತಿರುವುದು ಸಂತಸ ತಂದಿದೆ.
-ಸಂತೋಷ, ನೇಜಾರು 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.