ದಿವ್ಯಾಂಗರಿಗೆ ಆಯೋಗದ “ಆಸರೆ’


Team Udayavani, Mar 22, 2019, 2:17 AM IST

2-aa.jpg

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ “ಯಾವುದೇ ಮತದಾರ ಮತದಾನದಿಂದ ಹೊರಗಡೆ ಉಳಿಯಬಾರದು’ ಎಂದು ಘೋಷವಾಕ್ಯ ಕೊಟ್ಟಿರುವ ಚುನಾವಣಾ ಆಯೋಗ, ಪ್ರತಿ ಅರ್ಹ ಮತದಾರ ಮತಗಟ್ಟೆಗೆ ಬಂದು, ಮುಕ್ತವಾಗಿ ಮತದಾನ ಮಾಡುವಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.

ವಿಶೇಷವಾಗಿ ಈ ಬಾರಿ ದಿವ್ಯಾಂಗ ಮತದಾರರ ಬಗ್ಗೆ ಹೆಚ್ಚು ಕಾಳಜಿ ವಹಿಸಿರುವ ಆಯೋಗ, ಅವರಿಗಾಗಿ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದ 33 ಚುನಾವಣಾ ಜಿಲ್ಲೆಗಳು ಹಾಗೂ 28 ಲೋಕಸಭಾ ಕ್ಷೇತ್ರಗಳ 35,739 ಮತಗಟ್ಟೆಗಳಲ್ಲಿ ಇಲ್ಲಿವರೆಗೆ 4.04 ಲಕ್ಷ ದಿವ್ಯಾಂಗ ಮತದಾರರನ್ನು ಗುರುತಿಸಿದೆ. ಅವರ ನೆರವಿಗೆ 35,739 ಗಾಲಿ ಕುರ್ಚಿಗಳು, 41,669 ಭೂತಗನ್ನಡಿಗಳು, 2,213 ಸಂಜ್ಞಾ ಭಾಷೆ ವಿವರಣೆಗಾರರು ಮತ್ತು 31,515 ಸಹಾಯಕರನ್ನು ಒದಗಿಸುತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಮಾತನಾಡಿ, ರಾಜ್ಯದಲ್ಲಿ ದಿವ್ಯಾಂಗ ಮತದಾರರಿಗೆ ಕೈಗೊಳ್ಳಲಾದ ಕ್ರಮಗಳ ವಿಚಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.ಇದಕ್ಕಾಗಿ ವಿಶೇಷ ಕಾಳಜಿ ವಹಿಸಲಾಗಿದೆ.

ಅಗತ್ಯವಿರುವ ಮತದಾನ ಕೇಂದ್ರಗಳಲ್ಲಿ ಗಾಲಿ ಕುರ್ಚಿಗಳು, ಅಂಗವಿಕಲರ ಸೌಲಭ್ಯಗಳ ಕುರಿತ ಸಂಜ್ಞೆ ಭಾಷೆ, ಚಿತ್ರ ಮತ್ತು ದೃಶ್ಯಗಳನ್ನು ಹೆಚ್ಚಾಗಿ ಬಳಸಲಾಗಿರುವ ಬ್ರೈಲ್‌ ಲಿಪಿಯ ಪೋಸ್ಟರ್‌ಗಳು, ಎಲ್ಲ ಮತದಾನ ಕೇಂದ್ರಗಳಲ್ಲಿ ಬ್ರೈಲ್‌ನಲ್ಲಿ ಮುದ್ರಿಸಲಾದ ಮಾದರಿ ಮತಪತ್ರಗಳು, ಬ್ರೈಲ್‌ ಫೋಟೋ ಎಪಿಕ್‌ ಕಾರ್ಡ್‌, ಸಾರಿಗೆ ವ್ಯವಸ್ಥೆ ಸೇರಿದಂತೆ ರ್‍ಯಾಂಪ್‌, ಚಿಕಿತ್ಸಾ ಕಿಟ್‌, ಕುಡಿಯುವ ನೀರು, ನೆರಳು ಮತ್ತು ಬೆಳಕಿನ ವ್ಯವಸ್ಥೆ, ಹಿರಿಯ ನಾಗರಿಕರಿಗೆ ಪ್ರತ್ಯೇಕ ಸರತಿ ಸಾಲಿನ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಗಿರೀಶ್‌ ರಾಯಭಾರಿ
2019ರ ಲೋಕಸಭಾ ಚುನಾವಣೆಗೆ ಪ್ಯಾರಾ ಒಲಿಂಪಿಕ್‌ ಕ್ರೀಡಾಪಟುಪದ್ಮಶ್ರೀ ಪುರ ಸ್ಕೃತ ಗಿರೀಶ್‌ ಎನ್‌. ಗೌಡ ಕರ್ನಾಟಕದ ಚುನಾವಣಾ ರಾಯಭಾರಿ ಆಗಿದ್ದಾರೆ. ಕಳೆದ ವೇಳೆಯೂ ಜಾಗೃತಿಗೆ ಸಕ್ರಿಯ ಪಾತ್ರ ವಹಿಸಿದ್ದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಇದರ ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ಗಿರೀಶ್‌ ಗೌಡ, ಮತದಾನ
ಪ್ರತಿಯೊಬ್ಬ ಪ್ರಜೆಯ ಹಕ್ಕು. ಪ್ರಜಾಪ್ರಭುತ್ವ ಗೆಲ್ಲಿಸಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.