ಸಹಸ್ರಲಿಂಗೇಶ್ವರ ದೇವಸ್ಥಾನ: ದೊಂಪದ ಬಲಿ


Team Udayavani, Mar 22, 2019, 6:03 AM IST

22-march-7.jpg

ಉಪ್ಪಿನಂಗಡಿ : ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ದೇವಾಲಯದ ಮುಂಭಾಗದ ಸತ್ಯದ ಮಜಲಿನಲ್ಲಿ ಮಂಗಳವಾರ ರಾತ್ರಿ ವಾರ್ಷಿಕ ದೊಂಪದ ಬಲಿ ನೇಮ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಅಧೀನದಲ್ಲಿರುವ ಉಪ್ಪಿನಂಗಡಿ ಗ್ರಾಮದ ಕದಿಕ್ಕಾರು ಬೀಡಿನಿಂದ ದೇವಾಲಯಕ್ಕೆ ಮಂಗಳವಾರ ರಾತ್ರಿ ವಿವಿಧ ಬಿರುದಾವಳಿಯೊಂದಿಗೆ ಪಲ್ಲಕಿಯಲ್ಲಿ ದೈವಗಳ ಭಂಡಾರ ಆಗಮಿಸಿತು. ಬಳಿಕ ಸತ್ಯದ ಮಜಲಿನಲ್ಲಿ ರಾಜನ್‌ ದೈವ ಕಲ್ಕುಡ, ಕಲ್ಲುರ್ಟಿ, ಶಿರಾಡಿ ದೈವಗಳ ನೇಮ ನಡೆಯಿತು. ಉಪ್ಪಿನಂಗಡಿ ದೇವಾಲಯದ ಜಾತ್ರಾ ಸರಣಿಯಲ್ಲಿ ದೊಂಪದ ಬಲಿ ಕೊನೆಯ ಕಾರ್ಯಕ್ರಮವಾಗಿದೆ.

ಶ್ರೀ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಅಲಿಮಾರ್‌ ರಘುನಾಥ್‌ ರೈ, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ಕಂಗ್ವೆ ವಿಶ್ವನಾಥ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ನಂದಾವರ ಉಮೇಶ್‌ ಶೆಣೈ, ಶ್ರೀ ಕಾಳಿಕಾಂಬಾ ಭಜನ ಮಂಡಳಿಯ ಅಧ್ಯಕ್ಷ ಕೆ. ಸುಧಾಕರ ಶೆಟ್ಟಿ, ದೇವಾಲಯದ ಸಿಬಂದಿ ವೆಂಕಟೇಶ ರಾವ್‌, ಕೃಷ್ಣ ಪ್ರಸಾದ್‌ ಭಟ್‌ ಬಡಿಲ, ದಿವಾಕರ ಗೌಡ ಉಪಸ್ಥಿತರಿದ್ದರು.

15 ಅಡಿ ಉದ್ದದ ಮಾರಿಸೂಟ
ಯಾವುದೇ ಗ್ರಾಮದಲ್ಲಿ ದೊಂಪದ ಬಲಿ ನೇಮ ಅಲ್ಲಿನ ಗದ್ದೆ ಅಥವಾ ಬಯಲಿನಲ್ಲಿ ನಡೆಯುತ್ತದೆ. ತಾತ್ಕಾಲಿಕ ಚಪ್ಪರದಡಿ ದೈವಗಳ ಭಂಡಾರ ಇರಿಸಲಾಗುತ್ತದೆ. ದೊಂಪದ ಬಲಿ ಸಂದರ್ಭ 15 ಅಡಿ ಉದ್ದದ ಮಾರಿಸೂಟೆಯನ್ನು ಹೊತ್ತಿಸಲಾಗುತ್ತದೆ. ಬಿದಿರು, ತೆಂಗಿನ ಮಡಲು, ತೆಂಗಿನ ಸಿಪ್ಪೆ ಇತ್ಯಾದಿಗಳನ್ನು ಸೇರಿಸಿ ಮಾರಿಸೂಟೆಯನ್ನು ತಯಾರಿಸಲಾಗುತ್ತದೆ. ದನ್ನು ಎರಡು ಬಿದಿರುಗಳ ಸಹಾಯದಿಂದ ಬಯಲಿನಲ್ಲಿ ನಿಲ್ಲಿಸಲಾಗುತ್ತದೆ. ದೊಂಪದ ಬಲಿ ಆರಂಭದಿಂದ ಅಂತ್ಯದವರೆಗೆ ಮಾರಿಸೂಟೆ ಬೆಳಗುತ್ತಲೇ ಇರಬೇಕು. ದೊಂಪದ ಬಲಿ ನೇಮದಲ್ಲಿ ಮೊದಲು ಎದ್ದು ನಿಲ್ಲುವ ದೈವದ ಗಗ್ಗರ ಬೂಳ್ಯ ಸ್ವೀಕಾರದ ಬಳಿಕ ಮಾರಿಸೂಟೆಗೆ ಅಗ್ನಿಸ್ಪರ್ಶ ಮಾಡಲಾಗುತ್ತದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.