ನಾವು ಮನುಷ್ಯರು ಸ್ವಾಮಿ; ದನಗಳಲ್ಲ!


Team Udayavani, Mar 22, 2019, 6:36 AM IST

navu-mash.jpg

ಬೆಂಗಳೂರು: ನಾವು ಮನುಷ್ಯರು ಸ್ವಾಮಿ; ದನಗಳಲ್ಲ. ಈ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೊಡೋ ಆಹಾರವನ್ನು ದನಗಳು ಕೂಡ ತಿನ್ನುವುದಿಲ್ಲ. ನುಚ್ಚಕ್ಕಿ ಹಾಕಿ ತಿಂಡಿ ಮಾಡುತ್ತಾರೆ. ಸಾಂಬರ್‌ ನೀರಾಗಿರುತ್ತದೆ. ರಾತ್ರಿ ಉಳಿದ ಊಟವನ್ನು ಬೆಳಗ್ಗೆ ಬಿಸಿ ಮಾಡಿ ಪೌರಕಾರ್ಮಿಕರಿಗೆ ತಿಂಡಿಯಾಗಿ ಕೊಡುತ್ತಿದ್ದಾರೆ. ಕ್ಯಾಂಟೀನ್‌ ಹಾಗೂ ಅಡುಗೆ ಮನೆಗಳು ಸ್ವಚ್ಛವಾಗಿರುವುದಿಲ್ಲ…

ನಗರದ ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀಡುತ್ತಿರುವ ಆಹಾರ ಗುಣಮಟ್ಟದಿಂದ ಕೂಡಿಲ್ಲ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಗುರುವಾರ ನಾಯಂಡಹಳ್ಳಿ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ಅವರೆದುರು ಸಾರ್ವಜನಿಕರು ಸುರಿಮಳೆಗೈದ ದೂರುಗಳಿವು.

ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಸ್ವಚ್ಛತಾ ಪರಿಕರಗಳನ್ನು ಬಳಸುವುದಿಲ್ಲ. ಆಹಾರದೊಳಗೆ ಕೂದಲು ಬೀಳದಂತೆ ತಲೆಗೆ ಕ್ಯಾಪ್‌ ಧರಿಸುವುದಿಲ್ಲ. ಕೈಗೆ ಗವಸು ಧರಿಸದೇ ಕೆಲಸ ಮಾಡುತ್ತಾರೆ. ನೀವು ಭೇಟಿ ನೀಡುತ್ತಿದ್ದೀರಾ ಅನ್ನೋ ಕಾರಣಕ್ಕೆ ಇಂದು ಕ್ಯಾಂಟೀನ್‌ ಸ್ವಚ್ಛವಾಗಿದೆ. ಗುಣಮಟ್ಟದ ಆಹಾರ ಕೊಡದ ಕಾರಣ, 50 ಮಂದಿ ಮಾತ್ರ ಊಟ ಮಾಡುತ್ತಿದ್ದು, ಉಳಿದ ಆಹಾರವನ್ನು ಚರಂಡಿಗೆ ಎಸೆಯುತ್ತಿದ್ದಾರೆ ಎಂದು ಆರೋಪಿಸಿದರು. 

ಜನರಿಂದ ದೂರುಗಳನ್ನು ಸ್ವೀಕರಿಸಿದ ನಂತರ ಮಾತನಾಡಿದ ಡಾ.ಜಿ.ಪರಮೇಶ್ವರ್‌, ಕ್ಯಾಂಟೀನ್‌ಗಳು ಹಾಗೂ ಅಡುಗೆ ಮನೆಗಳ ಪರಿಸ್ಥಿತಿ ತಿಳಿಯುವ ಉದ್ದೇಶದಿಂದ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ನೀರಿನ ಸಮಸ್ಯೆಗೆ ಪರಿಹಾರ ಕೊಡಿ: ಮೂರು ತಿಂಗಳಿಂದ ಬಡಾವಣೆಯಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾಗಿದ್ದು, ಈ ಕುರಿತು ಅಧಿಕಾರಿಗಳಿಗೆ ತಿಳಿಸಿದರೂ ಪರಿಹರಿಸಿಲ್ಲ. ಈ ಭಾಗದ ಮೂರು ಕೊಳವೆಬಾವಿಗಳು ಹಾಳಾಗಿದ್ದು, ಟ್ಯಾಂಕರ್‌ ನೀರು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಜತೆಗೆ ಟ್ಯಾಂಕರ್‌ ಒಂದಕ್ಕೆ 600 ರೂ. ವಸೂಲಿ ಮಾಡುತ್ತಿದ್ದಾರೆ. ಹೀಗಾಗಿ ದಯವಿಟ್ಟು ನೀರಿನ ಸಮಸ್ಯೆ ನಿವಾರಿಸಬೇಕು ಎಂದು ನಾಯಂಡಹಳ್ಳಿಯ ಅಂಬೇಡ್ಕರ್‌ ನಗರದ ನಿವಾಸಿಗಳು ಡಿಸಿಎಂಗೆ ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದರು. 

ಕುಡಿಯಲು ನೀರಿಡಿ: ಗೋವಿಂದರಾಜ ನಗರ ವಾರ್ಡ್‌ ಇಂದಿರಾ ಕ್ಯಾಂಟೀನ್‌ ಪರೀಶಿಲಿಸುವ ವೇಳೆ ಗ್ರಾಹಕರ ಬಳಿ ಆಹಾರದ ಗುಣಮಟ್ಟದ ಬಗ್ಗೆ ಪ್ರಶ್ನಿಸಿದಾಗ ಇಡ್ಲಿ ಗಟ್ಟಿಯಾಗಿರುತ್ತದೆ. ಕುಡಿಯುವ ನೀರು ಇಡುವುದಿಲ್ಲ ಎಂದ ಅಜಯ್‌ ಎಂಬುವರು, ನಾವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮೀಪದ ಗ್ರಂಥಾಲಯದಲ್ಲಿ ಕುಳಿತು ಓದುತ್ತೇವೆ. ಸಮೀಪದಲ್ಲೇ ಇರುವ ಇಂದಿರಾ ಕ್ಯಾಂಟೀನ್‌ನಿಂದ ಅನುಕೂಲವಾಗಿದೆ ಎಂದು ಹೇಳಿದರು.

ಹಣ ನೀಡದ ಜನನಾಯಕರು: ದೀಪಾಂಜಲಿನಗರ ಕ್ಯಾಂಟೀನ್‌ನಲ್ಲಿ ಪರಮೇಶ್ವರ್‌, ಮೇಯರ್‌ ಗಂಗಾಂಬಿಕೆ, ಉಪಮೇಯರ್‌ ಭದ್ರೇಗೌಡ, ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌ ಸೇರಿ ಇನ್ನಿತರರು ಟೋಕನ್‌ ಪಡೆದರು. ಆದರೆ, ಅದಕ್ಕೆ ಹಣ ಪಾವತಿಸದೆ ತಿಂಡಿ ಸವಿದರು. ಕಡೆಗೆ ಟೋಕನ್‌ಗಳ ಹಣವನ್ನು ತಾವೇ ಪಾವತಿಸುವುದಾಗಿ ಪಾಲಿಕೆಯ ಸ್ಥಳೀಯ ಅಧಿಕಾರಿಗಳು ತಿಳಿಸಿದರು.

ವಾರಕ್ಕೊಮ್ಮೆ ಊಟ ಪ್ರಯೋಗಾಲಯಕ್ಕೆ – ಪರಮೇಶ್ವರ್‌: ಗುಣಮಟ್ಟ ಕಾಯ್ದುಕೊಳ್ಳುವ ದೃಷ್ಟಿಯಿಂದ ಇಂದಿರಾ ಕ್ಯಾಂಟೀನ್‌ಗಳ ಆಹಾರವನ್ನು ಇನ್ನು ಮುಂದೆ ವಾರಕ್ಕೊಮ್ಮೆ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಕ್ಯಾಂಟೀನ್‌ಗಳ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರ ಹಸಿವು ನೀಗಿಸುವ ಉದ್ದೇಶದಿಂದ ಕ್ಯಾಂಟೀನ್‌ ಆರಂಭಿಸಲಾಗಿದೆ. ಆದರೆ, ಆಹಾರದ ಗುಣಮಟ್ಟದ ಕುರಿತು ಅಪಸ್ವರ ಕೇಳಿಬರುತ್ತಿದ್ದು, ಅದನ್ನು ಸರಿಪಡಿಸುವ ಉದ್ದೇಶದಿಂದ ಕ್ಯಾಂಟೀನ್‌ಗಳಿಗೆ ಭೇಟಿ ನೀಡಲಾಗುತ್ತಿದೆ ಎಂದು ಹೇಳಿದರು.

ಆರೋಪಗಳು ಕೇಳಿಬಂದ ನಂತರ ಕ್ಯಾಂಟೀನ್‌ಗಳ ಆಹಾರ ಮಾದರಿ ಸಂಗ್ರಹಿಸಿ ಪರಿಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ 33 ಕ್ಯಾಂಟೀನ್‌ಗಳಲ್ಲಿನ ಆಹಾರವನ್ನು ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಆಗಾಗ ಆಹಾರದ ಗುಣಮಟ್ಟ ಪರೀಕ್ಷಿಸುತ್ತಿದ್ದರೆ ಸಮಸ್ಯೆ ನಿವಾರಣೆಯಾಗಲಿದೆ. ಹೀಗಾಗಿ ವಾರಕ್ಕೊಮ್ಮೆ ಆಹಾರವನ್ನು ಪರೀಕ್ಷೆಗೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. 

ಆರೋಪ ಸುಳ್ಳಾದರೆ ಕ್ರಮ: ಪಾಲಿಕೆಯ ಬಿಜೆಪಿ ಸದಸ್ಯ ಉಮೇಶ್‌ ಶೆಟ್ಟಿ ನಡೆಸಿರುವ ಆಹಾರ ಪರೀಕ್ಷೆ ಅಧಿಕೃತವಾಗಿಲ್ಲ. ಈ ಕುರಿತು ವರದಿ ನೀಡುವಂತೆ ಸೂಚಿಸಲಾಗಿದೆ. ಜತೆಗೆ ವರದಿ ನೀಡಿರುವ ರಾಮಯ್ಯ ಪ್ರಯೋಗಾಲಯದ ಅಧಿಕಾರಿಗಳನ್ನು ವಿಚಾರಿಸುವಂತೆ ತಿಳಿಸಲಾಗಿದೆ. ಉಮೇಶ್‌ ಶೆಟ್ಟಿ ಸುಳ್ಳು ಆರೋಪ ಮಾಡಿರುವುದು ತಿಳಿದುಬಂದರೆ ಅವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.