ಕೋಟ ಹೋಬಳಿ: ಬಿಜೆಪಿ ಚುನಾವಣೆ ಪೂರ್ವಭಾವಿ ಸಭೆ
Team Udayavani, Mar 23, 2019, 12:30 AM IST
ಕೋಟ: ಚುನಾವಣೆ ಪೂರ್ವ ತಯಾರಿ ಅನ್ವಯ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಕೋಟ ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.
ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡಲು ನಾವೆಲ್ಲ ಒಟ್ಟಾಗಿ ದುಡಿಯಬೇಕಿದೆ ಹಾಗೂ ಕಾರ್ಯಕರ್ತರು ಪಕ್ಷದ ಜೀವಾಳವಾಗಿದ್ದು, ಇವರ ಮೂಲಕ ಕೇಂದ್ರ ಸರಕಾರದ ಸಾಧನೆಗಳನ್ನು ಮನೆ-ಮನೆಗೆ ತಲುಪಿಸುವ ಕಾರ್ಯವಾಗಬೇಕಿದೆ ಎಂದರು.
ವಿವಿಧ ಕಡೆ ಸಭೆ
ಕೋಟತಟ್ಟು ಗ್ರಾಮಕ್ಕೆ ಸಂಬಂಧಿಸಿದ ಸಭೆ ಪ್ರಮೋದ ಹಂದೆಯವರ ಮನೆಯಲ್ಲಿ ಹಾಗೂ ಅಜಿತ್ ದೇವಾಡಿಗರ ಮನೆಯಲ್ಲಿ ಕೋಟ ಭಾಗದ ಕಾರ್ಯಕರ್ತರ ಸಭೆ, ಗೋಪಾಲ ಪೈಯವರ ಮನೆಯಲ್ಲಿ ಮಣೂರು ಭಾಗದ ಸಭೆ ಮತ್ತು ವಡ್ಡರ್ಸೆ ಭಾಗದ ಸಭೆ ಕೋಟಿ ಪೂಜಾರಿಯವರ ಮನೆಯಲ್ಲಿ ನಡೆಯಿತು.ಚುನಾವಣೆಯ ತಯಾರಿ ಇನ್ನಿತರ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
ತಾ.ಪಂ.ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಕೋಟ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಭರತ್ ಶೆಟ್ಟಿ ಮತ್ತು ಸ್ಥಳೀಯ ತಾ.ಪಂ. ಗ್ರಾ.ಪಂ. ಸದಸ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ